ಎಲ್‌ಕೆಜಿ ಸೇರಲು 4 ವರ್ಷ ಆಗಿರಲೇಬೇಕು! ಸರಕಾರದ ನಿಯಮಕ್ಕೆ ಬೆಚ್ಚಿಬಿದ್ದ ಪಾಲಕ, ಪೋಷಕರು


Team Udayavani, Jun 2, 2023, 7:00 AM IST

ಎಲ್‌ಕೆಜಿ ಸೇರಲು 4 ವರ್ಷ ಆಗಿರಲೇಬೇಕು! ಸರಕಾರದ ನಿಯಮಕ್ಕೆ ಬೆಚ್ಚಿಬಿದ್ದ ಪಾಲಕ, ಪೋಷಕರು

ಉಡುಪಿ: ಒಂದನೇ ತರಗತಿ ಸೇರುವ ಮಗುವಿಗೆ ಜೂನ್‌ 1ಕ್ಕೆ ಆರು ವರ್ಷ ತುಂಬಿರಲೇ ಬೇಕೆಂಬ ನಿಯಮ 2025-26ನೇ ಸಾಲಿನಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ. ಈ ಹಿನ್ನೆಲೆ ಯಲ್ಲಿ ಈ ವರ್ಷದಿಂದಲೇ ಎಲ್‌ಕೆಜಿ ಸೇರಲು ನಾಲ್ಕು ವರ್ಷ ಆಗಿರಲೇ ಬೇಕು ಎಂಬ ನಿಯಮ ಅನ್ವಯಿಸಿರುವುದು ಪಾಲಕ, ಪೋಷಕರನ್ನು ಕಂಗೆಡಿಸಿದೆ.

ಸಮಗ್ರ ಶಿಕ್ಷಣ ಕರ್ನಾಟಕದಿಂದ ಹೊರಡಿಸಿರುವ ಆದೇಶದನ್ವಯ 2023-24ನೇ ಸಾಲಿಗೆ ಎಲ್‌ಕೆಜಿಗೆ ದಾಖಲಾಗುವ ಮಗುವಿಗೆ ಜೂನ್‌ 1ಕ್ಕೆ 4 ವರ್ಷ ತುಂಬಿರಬೇಕು. ಅದರಂತೆ ಆ ಮಗು ಎಲ್‌ಕೆಜಿ, ಯುಕೆಜಿ ಮುಗಿಸಿ ಒಂದನೇ ತರಗತಿ ಸೇರುವಾಗ 6 ವರ್ಷ ತುಂಬಿರುತ್ತದೆ. ಈ ವರ್ಷ ಎಲ್‌ಕೆಜಿಗೆ ಸೇರುವ ಮಗುವಿಗೆ ಜೂನ್‌ 1ಕ್ಕೆ 3 ವರ್ಷ 11 ತಿಂಗಳಾದರೂ ದಾಖಲಿಸಿಕೊಳ್ಳುವುದಿಲ್ಲ. ಆಗ ಆ ಮಗು 4.11 ವರ್ಷಕ್ಕೆ ಎಲ್‌ಕೆಜಿಗೆ ಸೇರಬೇಕು. ಅಂದರೆ ಒಂದು ವರ್ಷ ಪೂರ್ತಿ ವ್ಯರ್ಥವಾಗಲಿದೆ.

ಶಾಲಾ ಶಿಕ್ಷಣ ಇಲಾಖೆ ಈ ನಿಯಮವು ಪಾಲಕ, ಪೋಷಕರ ಆಕ್ರೋಶಕ್ಕೀಡಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳೂ ಪಾಲಕ, ಪೋಷಕರ ಪ್ರಶ್ನೆಗೆ ಉತ್ತರಿಸದೇ ಮೌನ ತಳೆದಿದ್ದಾರೆ.
ಇದು ಈ ಹಿಂದಿನ ಬಿಜೆಪಿ ಸರಕಾರ ರೂಪಿಸಿದ ನಿಯಮ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ಹಿನ್ನೆಲೆಯಲ್ಲಿ ಒಂದನೇ ತರಗತಿ ಸೇರುವ ಮಗುವಿಗೆ ಆರು ವರ್ಷ ತುಂಬಿರಬೇಕು ಎಂಬುದು ನಿಯಮದ ತಾತ್ಪರ್ಯ. ಅದೇ ಸಂದರ್ಭದಲ್ಲಿ 5 ವರ್ಷ 11 ತಿಂಗಳು, 5 ವರ್ಷ 10 ತಿಂಗಳು ತುಂಬಿದ ಮಕ್ಕಳು ಏನು ಮಾಡಬೇಕೆಂಬುದರ ಬಗ್ಗೆ ಸ್ಪಷ್ಟತೆ ನೀಡಿಲ್ಲ.

ಶಿಕ್ಷಕರ ಗೋಳು
ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಈಗಾಗಲೇ ಸರಕಾರದ ವತಿಯಿಂದಲೇ ಎಲ್‌ಕೆಜಿ, ಯುಕೆಜಿ ನಡೆಯುತ್ತಿದೆ. ಇನ್ನು ಕೆಲವು ಸರಕಾರಿ ಶಾಲೆಗಳಲ್ಲಿ ಎಸ್‌ಡಿಎಂಸಿ ಹಾಗೂ ಹಳೇ ವಿದ್ಯಾರ್ಥಿಗಳು ಹಾಗೂ ದಾನಿಗಳ ನೆರವಿನಿಂದ ನಡೆಸಲಾಗುತ್ತಿದೆ. ಇದಕ್ಕೆ ಸರಕಾರದ ಅನುದಾನ ಅಥವಾ ಯಾವುದೇ ಸವಲತ್ತು ಇಲ್ಲ. ಆದರೆ ಹೊಸ ನಿಯಮದಿಂದ 3 ವರ್ಷ 10 ತಿಂಗಳು, 3 ವರ್ಷ 11 ತಿಂಗಳು ಆಗಿರುವ ಮಕ್ಕಳನ್ನು ದಾಖಲಿಸಿಕೊಳ್ಳಲಾಗದೇ ಇಕ್ಕಟ್ಟಿಗೆ ಸಿಲುಕಿಕೊಂಡಂತಾಗಿದೆ.

ಹಿಂದಿನಂತಿದ್ದರೆ ಚೆಂದ
ಈ ಹಿಂದೆ 5 ವರ್ಷ 9 ತಿಂಗಳು ಆಗಿರುವ ಮಕ್ಕಳನ್ನು ಒಂದನೇ ತರಗತಿಗೆ ದಾಖಲು ಮಾಡಿಕೊಳ್ಳಲಾಗುತ್ತಿತ್ತು. ಆದರೆ ಈಗಿನ ಜೂನ್‌ 1ಕ್ಕೆ ಪೂರ್ಣ 6 ವರ್ಷ ಆಗಿರಬೇಕು ಎಂಬ ನಿಯಮ ಸೂಕ್ತವಾಗಿಲ್ಲ. ಸರಕಾರ ಇಂತಹ ನಿಯಮಗಳನ್ನು ಜಾರಿ ಮಾಡಿ ಅನಗತ್ಯ ಆತಂಕ ಸೃಷ್ಟಿಸುತ್ತಿದೆ. ಹಾಗಾಗಿ ಈ ಹಿಂದಿನ ನಿಯಮವನ್ನೇ ಪುನರ್‌ ಅನುಷ್ಠಾನಕ್ಕೆ ತರಬೇಕು ಎನ್ನುವುದು ಕೆಲವು ಪಾಲಕ, ಪೋಷಕರ ಆಗ್ರಹ.

ಅಧಿಕಾರಿಗಳಲ್ಲೂ ಸ್ಪಷ್ಟತೆಯಿಲ್ಲ
ಈ ನಿಯಮದಿಂದ ಪುಟ್ಟ ಮಕ್ಕಳ ಭವಿಷ್ಯದ ಒಂದು ವರ್ಷ ಹಾಳಾಗದಂತೆ ತಡೆಯಲು ಪರ್ಯಾಯ ಮಾರ್ಗ ಏನು ಎಂಬ ಬಗ್ಗೆ ಅಧಿಕಾರಿಗಳನ್ನು ಕೇಳಿದರೂ ಸ್ಪಷ್ಟತೆ ಇಲ್ಲ. ಸರಕಾರದ ಆದೇಶವನ್ನು ಪಾಲಿಸುತ್ತಿದ್ದೇವೆ ಎಂದಷ್ಟೇ ಹೇಳುತ್ತಿದ್ದಾರೆ.

ಖಾಸಗಿ ಶಾಲೆಗೂ ಅನ್ವಯ
ಈ ಆದೇಶ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೂ ಅನ್ವಯಿಸುತ್ತದೆ. ಆದರೆ ಖಾಸಗಿ ಹಾಗೂ ಅನುದಾನಿತ ಶಾಲೆಗಳು ಇದನ್ನು ಅಷ್ಟು ಗಂಭೀರವಾಗಿ ಪಾಲಿಸದ ಮಾತು ಕೇಳಿಬಂದಿದೆ. ಆದರೆ ಸರಕಾರಿ ಶಾಲೆಗಳಲ್ಲಿ ಆದೇಶ ಉಲ್ಲಂ ಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಅನಿವಾರ್ಯವಾಗಿ ಶಿಕ್ಷಕರು ಪಾಲಿಸುತ್ತಿದ್ದಾರೆ.

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

Central Government ಯೋಜನೆಗಳ ಮಾಹಿತಿ ಗ್ರಾ.ಪಂ.ಗಳಲ್ಲೂ ಸಿಗಲಿ: ಸಚಿವೆ ಶೋಭಾ

Central Government ಯೋಜನೆಗಳ ಮಾಹಿತಿ ಗ್ರಾ.ಪಂ.ಗಳಲ್ಲೂ ಸಿಗಲಿ: ಸಚಿವೆ ಶೋಭಾ

Cauvery Issue ನೀರು ಹಂಚಿಕೆ ವಿಚಾರದಲ್ಲಿ ವೈಜ್ಞಾನಿಕ ವರದಿ ಅಗತ್ಯ: ಸಚಿವೆ ಶೋಭಾ

Cauvery Issue ನೀರು ಹಂಚಿಕೆ ವಿಚಾರದಲ್ಲಿ ವೈಜ್ಞಾನಿಕ ವರದಿ ಅಗತ್ಯ: ಸಚಿವೆ ಶೋಭಾ

hebbalkar1

Janata Darshan: ಅಧಿಕಾರಿಗಳು ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಬೇಕು: ಹೆಬ್ಬಾಳ್ಕರ್

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.