Udupi-D.K; ಮೂರು ವರ್ಷದಲ್ಲಿ 40 ಮಂದಿ ಗಡೀಪಾರು


Team Udayavani, Dec 21, 2023, 6:45 AM IST

Udupi-D.K; ಮೂರು ವರ್ಷದಲ್ಲಿ 40 ಮಂದಿ ಗಡೀಪಾರು

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ವರ್ಷಗಳ‌ಲ್ಲಿ ಅಕ್ರಮ ಗೋ ಸಾಗಾಟ, ಹಲ್ಲೆ, ದೊಂಬಿ, ಮಟ್ಕಾ, ಮಾದಕ ದ್ರವ್ಯಗಳ ಸಾಗಾಟ, ಕೊಲೆಯತ್ನ ಹಾಗೂ ನಿರಂತರ ಅಪರಾಧಿಕ ಪ್ರಕರಣದಲ್ಲಿ ಭಾಗಿಯಾಗಿರುವ ಒಟ್ಟು 69 ಅಪರಾಧಿಗಳಲ್ಲಿ 40 ಮಂದಿಯನ್ನು ಗಡೀಪಾರು ಮಾಡಲಾಗಿದೆ.

ನಿರಂತರ ಅಪರಾಧಿ ಕೃತ್ಯಗಳಲ್ಲಿ ಪಾಲ್ಗೊಳ್ಳುವವರನ್ನು ಚುನಾವಣೆ ಸಂದರ್ಭದಲ್ಲಿ ಗಡೀಪಾರು ಮಾಡುವ ರೂಢಿ ಹಿಂದಿನಿಂದಲೂ ಇದೆ. ಅದಾಗ್ಯೂ ವಿವಿಧ ಪ್ರಕರಣ ಅಥವಾ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವವರನ್ನು ಗಡೀಪಾರು ಮಾಡಲಾಗುತ್ತದೆ.

ಗಡೀಪಾರು ಹೇಗೆ?
ಗಲಭೆ ಸೃಷ್ಟಿಸುವವರು ಅಥವಾ ಪ್ರಚೋಧನಕಾರಿ ಭಾಷಣಗಳ ಮೂಲಕ ಗಲಭೆಗೆ ಪ್ರೇರೇಪಣೆ ನೀಡುವವರು ಸಮಾವೇಶಗಳಲ್ಲಿ ಭಾಗ ವಹಿಸದಂತೆ ಅಥವಾ ಅಪರಾಧಿ ಕೃತ್ಯಗಳಲ್ಲಿ ಪಾಲ್ಗೊಳ್ಳುವ ವರನ್ನು ಕರ್ನಾಟಕ ಪೊಲೀಸ್‌ ಕಾಯ್ದೆ 1963 ಕಾಲಂ 54ರಿಂದ 63ರಂತೆ ಗಡೀಪಾರು ಮಾಡಲಾಗುತ್ತದೆ. ಗಡೀಪಾರು ಮಾಡುವ ವ್ಯಕ್ತಿಯ ಕುರಿತು ಪೊಲೀಸ್‌ ಇಲಾಖೆಯಿಂದ ಜಿಲ್ಲಾಧಿಕಾರಿ / ಉಪವಿಭಾಗಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸ ಲಾಗುತ್ತದೆ. ಆ ಪ್ರಸ್ತಾವನೆ ಆಧಾರದಲ್ಲಿ ನೋಟಿಸ್‌ ಜಾರಿ ಮಾಡಲಾಗುತ್ತದೆ. ಅನಂತರ ಗಡೀಪಾರು ಪ್ರಕ್ರಿಯೆ ನಡೆಯುತ್ತದೆ.

ಗಡೀಪಾರು ಅವಧಿ
ಚುನಾವಣೆ ಅಥವಾ ವಿಶೇಷ ಸಮಾವೇಶ ಇತ್ಯಾದಿ ಸಂದರ್ಭ ಗಳಲ್ಲಿ ಕೆಲವರನ್ನು ಗುರುತಿಸಿ 6 ತಿಂಗಳ ಮಟ್ಟಿಗೆ ಗಡೀಪಾರು ಮಾಡಲಾಗುತ್ತದೆ. ಗಡೀಪಾರು ನೋಟಿಸ್‌ಗೆ ಸರಿಯಾಗಿ ಸಮಜಾಯಿಶಿಯನ್ನುಲಿಖಿತ ರೂಪದಲ್ಲಿ ನೀಡುವವರನ್ನು ಗಡಿಪಾರಿನಿಂದ ಕೈಬಿಡಲಾಗುತ್ತದೆ. ಪ್ರಕರಣದ ತೀವ್ರತೆಯ ಆಧಾರದಲ್ಲಿ ಗಡೀಪಾರು ಅವಧಿ ನಿಗದಿಯಾಗಿರುತ್ತದೆ ಎಂದು ಮೂಲಗಳು ತಿಳಿಸಿವೆ.

ಉಡುಪಿಯಲ್ಲಿ 2021, 2022 ಹಾಗೂ 2023ರಲ್ಲಿ 18 ಮಂದಿಗೆ ಗಡಿಪಾರಿಗಾಗಿ ನೋಟಿಸ್‌ ನೀಡಲಾಗಿತ್ತು. ಇವರಲ್ಲಿ 12 ಮಂದಿಯನ್ನು ಗಡೀಪಾರು ಮಾಡಲಾಗಿದೆ. ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿದ್ದ 5, ಹಲ್ಲೆ ಮತ್ತು ದೊಂಬಿ ಪ್ರಕರಣದ 5, ಮಟ್ಕಾ 1, ಮಾದಕ ದ್ರವ್ಯ ಸಾಗಾಟ ಪ್ರಕರಣದ 2 ಹಾಗೂ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿಯನ್ನು ಗಡೀಪಾರು ಮಾಡಲಾಗಿದೆ.

ದ.ಕ.ದಲ್ಲಿ 2021 ಮತ್ತು 2022ನೇ ಸಾಲಿನಲ್ಲಿ ಯಾರನ್ನು ಗಡೀಪಾರು ಮಾಡಿಲ್ಲ. 2023ನೇ ಸಾಲಿನಲ್ಲಿ 51 ಮಂದಿಗೆ ನೋಟಿಸ್‌ ನೀಡಲಾಗಿದ್ದು, 28 ಮಂದಿಯನ್ನು ಗಡೀಪಾರು ಮಾಡಲಾಗಿದೆ. ಅಪರಾಧಿಕ ಹಿನ್ನೆಲೆಯುಳ್ಳವರಾಗಿದ್ದು ಸಾರ್ವಜನಿಕ ಜೀವ ಮತ್ತು ಸ್ವತ್ತುಗಳ ರಕ್ಷಣೆ ಹಾಗೂ ಚುನಾವಣೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡಲು 28 ಮಂದಿಯನ್ನು ಗಡೀಪಾರು ಮಾಡಲಾಗಿದೆ.

ಚುನಾವಣೆ ಸಹಿತ ವಿವಿಧ ಸಂದರ್ಭದಲ್ಲಿ ಗಡೀಪಾರು ನೋಟಿಸ್‌ ನೀಡಿ, ಗಡೀಪಾರು ಮಾಡಲಾಗುತ್ತದೆ. 6 ತಿಂಗಳ ಅವಧಿಗೂ ಇರುತ್ತದೆ ಮತ್ತು ವಿಸ್ತರಣೆಯೂ ಆಗುತ್ತದೆ.
-ಡಾ| ಅರುಣ್‌ ಕೆ.,
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಉಡುಪಿ

ಟಾಪ್ ನ್ಯೂಸ್

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.