ಕಾರ್ಕಳ ಕ್ಷೇತ್ರದ 4 ಸಾವಿರ ಕುಟುಂಬಗಳು ಉಜ್ವಲ ಯೋಜನೆ ವ್ಯಾಪ್ತಿಗೆ
Team Udayavani, Feb 22, 2019, 1:00 AM IST
ಅಜೆಕಾರು: ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಪಿಎಲ್ ಕಾರ್ಡ್ ಹೊಂದಿರುವ ಅರ್ಹ 4 ಸಾವಿರ ಕುಟುಂಬಗಳಿಗೆ ಪ್ರದಾನ ಮಂತ್ರಿ ನರೇಂದ್ರ ಮೋದಿಯವರ ಮಹಾತ್ವಾಕಾಂಕ್ಷಿಯ ಉಜ್ವಲ್-2 ಯೋಜನೆಯಡಿ ಅಡುಗೆ ಅನಿಲ ವಿತರಿಸಲಾಗಿದೆ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.
ನೀರೆ ಗ್ರಾ.ಪಂ. ಸಭಾಂಗಣದಲ್ಲಿ ನಡೆದ ನೀರೆ, ಬೈಲೂರು, ಎರ್ಲಪಾಡಿ, ಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಗಳ ಅರ್ಹ ಫಲಾನುಭವಿಗಳಿಗೆ ಉಜ್ವಲ 2 ಯೋಜನೆಯಡಿ ಉಚಿತ ಅಡುಗೆ ಅನಿಲ ವಿತರಣೆ ಹಾಗೂ ಸರಕಾರದ ವಿವಿಧ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡಿದರು.
ಸರಕಾರದಿಂದ ಸಿಗುವ ವಿವಧ ಯೋಜನೆಗಳ ಪ್ರಯೋಜನವನ್ನು ಅರ್ಹ ಫಲಾನುಭವಿಗಳಿಗೆ ದೊರಕಿಸಿಕೊಡುವಲ್ಲಿ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಈ ಸಂದರ್ಭ ಹೇಳಿದರು. ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಅತ್ಯಗತ್ಯವಾಗಿರುವ 166 ಕಾಲು ಸೇತುವೆಗಳ ನಿರ್ಮಾಣ ಶೀಘ್ರದಲ್ಲಿ ನಡೆಯಲಿದ್ದು ಕಾರ್ಕಳ ತಾಲೂಕನ್ನು ಮರ ಮುಕ್ತ ಕಾಲು ಸೇತುವೆಗಳನ್ನಾಗಿ ಮಾಡಲಾಗುವುದು ಎಂದರು.ಅಧ್ಯಕ್ಷತೆಯನ್ನು ನೀರೆ ಗಾ.ಪಂ. ಅಧ್ಯಕ್ಷರಾದ ಸದಾನಂದ ಪ್ರಭು ಅವರು ವಹಿಸಿದ್ದರು.
ತಾ.ಪಂ. ಅಧ್ಯಕ್ಷೆ ಮಾಲಿನಿ ಜೆ.ಶೆಟ್ಟಿ, ಬೈಲೂರು ಗ್ರಾ.ಪಂ. ಅಧ್ಯಕ್ಷೆ ಶ್ವೇತಾ ಪಿ.ಶೆಟ್ಟಿ, ಎರ್ಲಪಾಡಿ ಗ್ರಾ.ಪಂ. ಅಧ್ಯಕ್ಷ ವಸಂತ ಕುಲಾಲ್, ಪಳ್ಳಿ ಗ್ರಾ.ಪಂ. ಅಧ್ಯಕ್ಷರಾದ ಸಂಗೀತಾ ನಾಯಕ್, ನೀರೆ ಗ್ರಾ.ಪಂ. ಉಪಾಧ್ಯಕ್ಷೆ ಲೀಲಾವತಿ ಪೂಜಾರಿ, ಬೈಲೂರು ಗ್ರಾ.ಪಂ.ಉಪಾಧ್ಯಕ್ಷ ಜಗದೀಶ್ ಪೂಜಾರಿ, ಜಿ.ಪಂ. ಸದಸ್ಯ ಸುಮಿತ್ ಶೆಟ್ಟಿ, ತಾ.ಪಂ.ಸದಸ್ಯೆ ನಿರ್ಮಲಾ, ವಿಜಯ ಸಾಲ್ಯಾನ್, ಗ್ಯಾಸ್ ಸಂಸ್ಥೆ ಮಾಲಿಕರಾದ ನಿತ್ಯಾನಂದ ಪೈ ಉಪಸ್ಥಿತರಿದ್ದರು.
ನೀರೆ ಗ್ರಾಮ ಪಂಚಾಯತ್ ಪಿಡಿಒ ಅಂಕಿತಾ ನಾಯಕ್ ಸ್ವಾಗತಿಸಿದರು. ಗಣೇಶ್ ಕಾರ್ಯಕ್ರಮ ನಿರೂಪಿಸಿದರು. ನಾಲ್ಕು ಗ್ರಾಮ ಪಂಚಾಯತ್ಗಳ ಪಿಡಿಒ, ಕಾರ್ಯದರ್ಶಿ, ಸಿಬಂದಿಯವರು ಉಪಸ್ಥಿತರಿದ್ದರು. ಬೈಲೂರು ಪಿಡಿಒ ರವಿರಾಜ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ