ಕಡಲ್ಕೊರೆತ ತಡೆಗೋಡೆಗೆ 50 ಲಕ್ಷ ರೂ. ಅನುದಾನ
Team Udayavani, Jun 26, 2019, 5:38 AM IST
ಉಪ್ಪುಂದ: ಶಿವಮೊಗ್ಗ ಲೋಕಸಭಾ ಕ್ಷೇತ್ರ ಸಂಸದ ಬಿ.ವೈ. ರಾಘವೇಂದ್ರ ಮರವಂತೆ- ತ್ರಾಸಿ ಕರಾವಳಿ ತೀರ ಸಂರಕ್ಷಣೆ ಕಾಮಗಾರಿ ಹಾಗೂ ಮರವಂತೆ ಬ್ರೇಕ್ ವಾಟರ್ ಕಾಮಗಾರಿ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮರವಂತೆ ಬ್ರೇಕ್ ವಾಟರ್ ಕಾಮಗಾರಿ ಪರಿಶೀಲಿಸಿ ಮೀನುಗಾರರೊಂದಿಗೆ ಮಾತನಾಡಿದ ಅವರು ಬಾಕಿ ಉಳಿದಿರುವ ಬ್ರೇಕ್ ವಾಟರ್ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಮೀನುಗಾರಿಕಾ ರಸ್ತೆಗೆ 27 ಲಕ್ಷ ರೂ. ಅನುದಾನದಲ್ಲಿ ರಸ್ತೆ ದುರಸ್ತಿ ಮಾಡುವುದಾಗಿ ತಿಳಿಸಿದರು.
ಮೀನುಗಾರ ಮುಖಂಡ ಮೋಹನ ಖಾರ್ವಿ ಅವರು ಇಲ್ಲಿನ ಕಡಲ್ಕೊರೆತ ಹಾಗೂ ಸ್ಥಳೀಯ ನಿವಾಸಿಗಳ ಅಪಾಯದ ಕುರಿತು ಮಾಹಿತಿ ನೀಡಿದರು.
ಈ ಕುರಿತು ಮಾತನಾಡಿದ ಸಂಸದರು ಈ ಭಾಗದ ಮೀನುಗಾರರ ಎಲ್ಲ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಕಡಲ್ಕೊರೆತವನ್ನು ತಡೆಯುವ ತಡೆಗೋಡೆ ನಿರ್ಮಾಣಕ್ಕೆ ರೂ.50ಲಕ್ಷ ಅನುದಾನ ಒದಗಿಸುವ ಭರವಸೆ ನೀಡಿದರು. ಕಳೆದ ಬಾರಿ ಕಡಲ್ಕೊರೆತದಲ್ಲಿ ಸಂತ್ರಸ್ತರಾದ ಮೀನುಗಾರರ 6 ಕುಟುಂಬದವರಿಗೆ ಪರ್ಯಾಯ ಸ್ಥಳಾವಕಾಶ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಮಸ್ತ ಮೀನುಗಾರರ ವತಿಯಿಂದ ಸಂಸದರನ್ನು ಸಮ್ಮಾನಿಸಲಾಯಿತು.
ಈ ಸಂದರ್ಭ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಮರವಂತೆ ಗ್ರಾಮ ಪಂಚಾಯತ್ ಸದಸ್ಯರು, ಮೀನುಗಾರಿಕಾ ಅಧಿಕಾರಿಗಳು, ಮೀನುಗಾರರ ಮುಖಂಡರು, ಬಿಜೆಪಿ ನಾಯಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ