ದೇಶಕ್ಕೆ 5,000 ಕೋಟಿ ರೂ. ಉಳಿಸಿದ ಮಂಗಳೂರು-ಉಡುಪಿ
ಭೂಗತ ಕಚ್ಛಾತೈಲ ಸಂಗ್ರಹಾಗಾರ
Team Udayavani, Jun 5, 2020, 9:51 AM IST
ಮಂಗಳೂರು: ಕೋವಿಡ್ ಸಂದರ್ಭ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಅಗ್ಗದ ದರದಲ್ಲಿ ದೊರೆತ ಹಿನ್ನೆಲೆಯಲ್ಲಿ ಮಂಗಳೂರಿನ ಪೆರ್ಮುದೆ, ಉಡುಪಿಯ ಪಾದೂರು ಹಾಗೂ ವಿಶಾಖಪಟ್ಟಣದ ಭೂಗತ ಕಚ್ಛಾತೈಲ ಸಂಗ್ರಹಾಗಾರಗಳಲ್ಲಿ ತೈಲ ಭರ್ತಿ ಮಾಡಿದ ಪರಿಣಾಮ ಒಟ್ಟು 5,000 ಕೋ. ರೂ. ವಿದೇಶ ವಿನಿಮಯ ಉಳಿತಾಯವಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲ ಯವು ಟ್ವೀಟ್ನಲ್ಲಿ ತಿಳಿಸಿದೆ. ಎಪ್ರಿಲ್ನಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ 2 ದಶಕಗಳ ಕನಿಷ್ಠ ಮಟ್ಟಕ್ಕೆ ಕುಸಿದಾಗ ಕೇಂದ್ರ ಅಗ್ಗದ ಬೆಲೆಗೆ ತೈಲ ಖರೀದಿಸಿದೆ. ಮಂಗಳೂರು ಹಾಗೂ ಪಾದೂರು ಸಂಗ್ರಹಾಗಾರದಲ್ಲಿ ಅರ್ಧದಷ್ಟು ಜಾಗವಿದ್ದ ಕಾರಣದಿಂದ ಬಹುತೇಕ ಕಚ್ಛಾ ತೈಲವನ್ನು ಇಲ್ಲಿಯೇ ಸಂಗ್ರಹಿಸಲಾಗಿದೆ.
ಭೂಗತ ಸ್ಥಾವರದ ಸಾಮರ್ಥ್ಯ
ಪೆಟ್ರೋಲಿಯಂ ಸಚಿವಾಲಯ ಅಧೀನದ ಐಎಸ್ಪಿಆರ್ಎಲ್ (ಇಂಡಿಯನ್ ಸ್ಟ್ರೆಟಜಿಕ್ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್) ವತಿಯಿಂದ ಗವಿ (ಕ್ಯಾವರ್ನ್)ಯಂತಹ ರಚನೆಯಲ್ಲಿ ದೇಶದ ವಿಶಾಖಪಟ್ಟಣ ಸಹಿತ ಮೂರು ಕಡೆಗಳಲ್ಲಿ ತೈಲ ಸಂಗ್ರಹಾಗಾರ ಸ್ಥಾವರ ನಿರ್ಮಾಣವಾಗಿದೆ. ಪಾದೂರು ಸ್ಥಾವರದಲ್ಲಿ 2.5 ಮಿಲಿಯ ಮೆ. ಟನ್ (ಸ್ಥಾವರ ನಿರ್ಮಾಣ ವೆಚ್ಚ 1,693 ಕೋ. ರೂ.), ಮಂಗಳೂರಿನ ಪೆರ್ಮುದೆ ಸ್ಥಾವರದಲ್ಲಿ 1.5 ಮಿಲಿಯ ಮೆ. ಟನ್ (1,227 ಕೋ.ರೂ.), ವಿಶಾಖಪಟ್ಟಣದಲ್ಲಿ 1.3 ಮಿಲಿಯ ಮೆ. ಟನ್ (1,178 ಕೋ. ರೂ.) ಸಹಿತ ಸುಮಾರು 5.3 ಮಿಲಿಯ ಮೆಟ್ರಿಕ್ ಟನ್ ತೈಲ ಸಂಗ್ರಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ