ಉಡುಪಿ: 53 ಪಾಸಿಟಿವ್‌, ಮತ್ತೊಂದು ಸಾವು ; ಬಾಧಿತರೆಲ್ಲರೂ ಸ್ಥಳೀಯರು


Team Udayavani, Jul 14, 2020, 6:10 AM IST

ಉಡುಪಿ: 53 ಪಾಸಿಟಿವ್‌, ಮತ್ತೊಂದು ಸಾವು ; ಬಾಧಿತರೆಲ್ಲರೂ ಸ್ಥಳೀಯರು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಉಡುಪಿ: ಜಿಲ್ಲೆಯಲ್ಲಿ ಸೋಮವಾರ 53 ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ.

ಕೋವಿಡ್ 19 ಸೋಂಕು ಬಾಧಿತ 72 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

ಉಪ್ಪುಂದ ಮೂಲದ ಅವರು ಡಾ| ಟಿಎಂಎ ಪೈ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು.

ಆದರೆ ಸೋಮವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಬಹು ಅಂಗಗಳ ವೈಫ‌ಲ್ಯದಿಂದ ಬಳಲುತ್ತಿದ್ದರು.

ಉಡುಪಿಯಲ್ಲಿ ಅಂತಿಮ ಸಂಸ್ಕಾರ ನಡೆಯಿತು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿಗೆ ನಾಲ್ಕನೆಯ ಸಾವು ಉಂಟಾಗಿದೆ. ಶುಕ್ರವಾರ ಮೃತಪಟ್ಟ ದಾವಣಗೆರೆಯ ಹಿರಿಯರೊಬ್ಬರ ಸಾವು ದಾವಣಗೆರೆ ಜಿಲ್ಲೆಯ ವ್ಯಾಪ್ತಿಗೆ ಸೇರಿದೆ.

ಸೋಂಕಿತರಲ್ಲಿ 31 ಪುರುಷರು, 18 ಮಹಿಳೆಯರು, ಇಬ್ಬರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳು. ಉಡುಪಿ ತಾಲೂಕಿನ 27, ಕುಂದಾಪುರದ 23, ಕಾರ್ಕಳದ ಮೂವರು ಇದ್ದಾರೆ. ಜ್ವರ ಲಕ್ಷಣದ 12 ಮಂದಿ ಮತ್ತು ಉಳಿದವರು ಪ್ರಾಥಮಿಕ ಸಂಪರ್ಕದವರು. ಇದೇ ಪ್ರಥಮ ಬಾರಿಗೆ ಮುಂಬಯಿ, ದುಬಾೖ, ಬೆಂಗಳೂರು ಹೀಗೆ ವಿವಿಧ ಊರುಗಳಿಂದ ಬಂದವರು ಯಾರೂ ಇಲ್ಲದ, ಕೇವಲ ಸ್ಥಳೀಯರೇ ಸೋಂಕಿತರಾಗಿರುವುದು ಕಂಡುಬಂದಿದ್ದು ಸಮುದಾಯಕ್ಕೆ ಹರಡಿರುವ ಶಂಕೆ ಮೂಡಿದೆ.

65 ಮಂದಿ ಬಿಡುಗಡೆ
ಸೋಮವಾರ 260 ನೆಗೆಟಿವ್‌ ಪ್ರಕರಣ ವರದಿಯಾಗಿದೆ. ಉಡುಪಿ ಡಾ| ಟಿಎಂಎ ಪೈ ಆಸ್ಪತ್ರೆಯಿಂದ 12, ಕುಂದಾಪುರ ತಾ| ಆಸ್ಪತ್ರೆಯಿಂದ 50, ಕಾರ್ಕಳ ತಾಲೂಕು ಆಸ್ಪತ್ರೆಯಿಂದ ಮೂವರು ಸೇರಿದಂತೆ ಒಟ್ಟು 65 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಒಟ್ಟು 1,661 ಪಾಸಿಟಿವ್‌ ಪ್ರಕರಣಗಳಲ್ಲಿ 1,280 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 378 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1,749 ಜನರ ಮಾದರಿಗಳ ವರದಿ ಬರಬೇಕಾಗಿದೆ. 1,401 ಮಂದಿ ಮನೆಗಳಲ್ಲಿ ಮತ್ತು 148 ಮಂದಿ ಐಸೊಲೇಶನ್‌ ವಾರ್ಡ್‌ಗಳಲ್ಲಿ ನಿಗಾದಲ್ಲಿದ್ದಾರೆ. 34 ಮಂದಿ ಐಸೊಲೇಶನ್‌ ವಾರ್ಡ್‌ ನಿಗಾಕ್ಕೆ ಸೇರಿದ್ದು 26 ಮಂದಿ ಬಿಡುಗಡೆಗೊಂಡಿದ್ದಾರೆ.

ಸೀಲ್‌ಡೌನ್‌
ಕರಂಬಳ್ಳಿ ಸಂತೋಷನಗರದ 3ನೇ ಕ್ರಾಸ್‌, ಪೆರಂಪಳ್ಳಿ ಬೊಬ್ಬರ್ಯ ದೈವಸ್ಥಾನದ ಬಳಿ, ಮಣಿಪಾಲ ಎಎಲ್‌ಎನ್‌ಲೇಔಟ್‌, ಮೂಡುತೋನ್ಸೆ, ಮೂಡನಿಡಂಬೂರು, 41 ಶಿರೂರು, ಕಿನ್ನಿಮೂಲ್ಕಿಯಲ್ಲಿ ತಲಾ ಒಂದು ಮನೆ, ಹೆರ್ಗದಲ್ಲಿ ಎರಡು ಮನೆ, ಪೆರಂಪಳ್ಳಿಯಲ್ಲಿ ಒಂದು ಫ್ಲ್ಯಾಟನ್ನು ಸೀಲ್‌ಡೌನ್‌ ಮಾಡಲಾಗಿದೆ. ಹೆರ್ಗದ ಮಾಂಸದ ಅಂಗಡಿ ಮಾಲಕರೊಬ್ಬರ ಮನೆಯನ್ನು ಸೀಲ್‌ಡೌನ್‌ ಮಾಡಿದ್ದು ಮಂಗಳವಾರ ಪ್ರಾಯಃ ಅವರ ಅಂಗಡಿಯನ್ನೂ ಸೀಲ್‌ಡೌನ್‌ ಮಾಡುವ ಸಾಧ್ಯತೆ ಇದೆ.

ಕುಂದಾಪುರ: ಎಎಸ್‌ಪಿ ಕಚೇರಿ ಸಿಬಂದಿಗೆ ಸೋಂಕು
ಉಪವಿಭಾಗ ಕಚೇರಿ ಪೊಲೀಸ್‌ ಸಿಬಂದಿಗೆ ಕೋವಿಡ್ 19 ಸೋಂಕು ತಗಲಿದ ಕಾರಣ ಎರಡು ದಿನಗಳ ಕಾಲ ಎಎಸ್‌ಪಿ ಕಚೇರಿ ಮುಚ್ಚುಗಡೆಯಾಗಲಿದೆ. ಎಎಸ್‌ಪಿ ಕಚೇರಿಯ ಒಬ್ಬ ಸಿಬಂದಿ, ಹೈವೇ ಪೆಟ್ರೋಲ್‌ ಕರ್ತವ್ಯದಲ್ಲಿದ್ದ ಕುಂದಾಪುರ ಸಂಚಾರ ಠಾಣೆಯ ಎಎಸ್‌ಐ ಹಾಗೂ ಅದರ ಚಾಲಕರಿಗೆ (ಜಿಲ್ಲಾ ಸಶಸ್ತ್ರ ಪಡೆಯ ಸಿಬಂದಿ) ಪಾಸಿಟಿವ್‌ ಕಾಣಿಸಿದೆ. ಎಎಸ್‌ಪಿ ಕಚೇರಿ ಸಿಬಂದಿ ಜು. 2ರಿಂದ, ಉಳಿದವರು ಜು. 5ರಿಂದ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಎಎಸ್‌ಪಿ ಕಚೇರಿಯನ್ನು ಎರಡು ದಿನಗಳ ಕಾಲ ಮುಚ್ಚಿ ಸ್ಯಾನಿಟೈಸ್‌ ಮಾಡಲಾಗುವುದು. ಕಚೇರಿ ತಾತ್ಕಾಲಿಕವಾಗಿ ಸರ್ಕಲ್‌ ಇನ್‌ಸ್ಪೆಕ್ಟರ್‌ ಕಚೇರಿಯಲ್ಲಿ ಕಾರ್ಯ ನಿರ್ವಹಿಸಲಿದೆ.

ಕಾಪು: ಸೆಲೂನ್‌ ಸಿಬಂದಿಗೆ ಸೋಂಕು
ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದ ಕಾಪು ಪೊಲಿಪುವಿನ ಮಹಿಳೆ ಮತ್ತು ಕಾಪು ಪೇಟೆಯ ಸೆಲೂನೊಂದರ ಆಂಧ್ರ ಮೂಲದ ಕಾರ್ಮಿಕನಿಗೆ ಸೋಮವಾರ ಸೋಂಕು ದೃಢವಾಗಿದೆ. 3-4 ದಿನಗಳಿಂದ ಆ ಸೆಲೂನ್‌ಗೆ ತೆರಳಿರುವ ಗ್ರಾಹಕರ ಮಾಹಿತಿ ಕಲೆ ಹಾಕಲಾಗುತ್ತಿದೆ. ಗ್ರಾಹಕರು ತಾವಾಗಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವ ಮೂಲಕ ಸೋಂಕು ಹರಡದಂತೆ ನೋಡಿಕೊಳ್ಳಲು ಕಾಪು ವೈದ್ಯಾಧಿ ಕಾರಿ ಡಾ| ಸುಬ್ರಾಯ ಕಾಮತ್‌ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.