567 ಕಾಲುಸಂಕಗಳಿಗೆ ಬೇಕಿದೆ ಶೀಘ್ರ ಕಾಯಕಲ್ಪ; 5 ಸಾವಿರ ಮಕ್ಕಳು ನಿತ್ಯ ಜೀವಭಯದಲ್ಲಿ ಸಂಚಾರ

ಸುಮಾರು 8 ಸಾವಿರಕ್ಕೂ ಅಧಿಕ ಕುಟುಂಬ

Team Udayavani, Aug 14, 2022, 7:05 AM IST

567 ಕಾಲುಸಂಕಗಳಿಗೆ ಬೇಕಿದೆ ಶೀಘ್ರ ಕಾಯಕಲ್ಪ; 5 ಸಾವಿರ ಮಕ್ಕಳು ನಿತ್ಯ ಜೀವಭಯದಲ್ಲಿ ಸಂಚಾರ

ಉಡುಪಿ: ಸುಮಾರು 8 ಸಾವಿರಕ್ಕೂ ಅಧಿಕ ಕುಟುಂಬ, ಐದು ಸಾವಿರಕ್ಕೂ ಅಧಿಕ ಮಕ್ಕಳು ನಿತ್ಯವೂ ದುಃಸ್ಥಿತಿಯಲ್ಲಿರುವ ಕಾಲು ಸಂಕಗಳ ಮೂಲಕ ಜೀವ ಭಯದಲ್ಲಿ ಓಡಾಡುವ ಪರಿಸ್ಥಿತಿ ಉಡುಪಿ ಜಿಲ್ಲೆಯಲ್ಲಿದೆ.
ಮಳೆಗಾಲದಲ್ಲಿ ಕಾಲು ಸಂಕಗಳು ಅಪಾಯಕಾರಿ. ಅದರಲ್ಲೂ ಮರದ ದಿಮ್ಮಿಗಳಿಂದ ಮಾಡಿದ ಕಾಲುಸಂಕ ದಲ್ಲಿ ಸಂಚಾರ ಇನ್ನಷ್ಟು ಕಷ್ಟ. ಜಿಲ್ಲೆಯ 567 ಕಡೆ ಕಾಲುಸಂಕಗಳನ್ನು ತುರ್ತಾಗಿ ಸರಿಪಡಿಸಬೇಕಿದೆ.

ಕೆಲವು ಹೆಚ್ಚು ಅಪಾಯಕಾರಿಯಾಗಿವೆ. ಇನ್ನು ಕೆಲವೆಡೆ ಸೂಕ್ತ ತಳಪಾಯ ಇಲ್ಲದೇ ಅಪಾಯವನ್ನು ಆಹ್ವಾನಿಸುತ್ತಿವೆ. ಜಿಲ್ಲೆಯ 155 ಗ್ರಾ.ಪಂ.ಗಳಲ್ಲಿ 103 ಗ್ರಾ.ಪಂ.ಗಳಿಗೆ ಸುಸ ಜ್ಜಿತ ಕಾಲುಸಂಕ ತುರ್ತಾಗಿ ಆಗಬೇಕಿದೆ. ಉಳಿದೆಡೆ ಪರಿಸ್ಥಿತಿ ಸಮಾಧಾನಕರ. ಉಡುಪಿ ತಾಲೂಕಿನ 638 ಕುಟುಂಬಗಳ ಸದ ಸ್ಯರು ಮತ್ತು 292 ಮಕ್ಕಳು, ಕಾಪು ತಾಲೂಕಿನ 700 ಕುಟುಂಬದ ಸದಸ್ಯರು, 383 ಮಕ್ಕಳು, ಕಾರ್ಕಳ ತಾಲೂಕಿನ 2,998 ಮಂದಿ, 2,015 ಮಕ್ಕಳು, ಕುಂದಾಪುರ ತಾಲೂಕಿನ 1,392 ಮಂದಿ, 847 ಮಕ್ಕಳು, ಬ್ರಹ್ಮಾವರ ತಾಲೂಕಿನ 462 ಮಂದಿ, 329 ಮಕ್ಕಳು, ಬೈಂದೂರು ತಾಲೂಕಿನ 1,648 ಮಂದಿ, 983 ಮಕ್ಕಳು, ಹೆಬ್ರಿ ತಾಲೂಕಿನ 382 ಮಂದಿ, 259 ಮಕ್ಕಳು ಸೇರಿ ದಂತೆ ಒಟ್ಟು 8,220 ಕುಟುಂಬದ ಸದ ಸ್ಯರು ಮತ್ತು 5,108 ಮಕ್ಕಳು ನಿತ್ಯವೂ ಭಯದಲ್ಲಿ ಅಪಾಯಕಾರಿ ಕಾಲು ಸಂಕ ವನ್ನು ಆಶ್ರಯಿಸಿದ್ದಾರೆ.

ನರೇಗಾದಡಿ ಕಾಮಗಾರಿ
ಕಾಲುಸಂಕ ಅಭಿವೃದ್ಧಿ ಸಣ್ಣ ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಹೀಗೆ ವಿವಿಧ ಇಲಾಖೆಯ ಅಧೀನದಲ್ಲಿ ಬರುವ ಜತೆಗೆ ಖಾಸಗಿ ಜಮೀನಿನಲ್ಲಿ ಇರುವುದರಿಂದ ಅಭಿವೃದ್ಧಿಗೆ ಸಾಕಷ್ಟು ತೊಡಕಿದೆ. ಇದನ್ನೆಲ್ಲವನ್ನು ನಿವಾರಿಸಿಕೊಂಡು ನರೇಗಾ ಅಡಿ ಯಲ್ಲಿ ಸುಮಾರು 4.50 ಲಕ್ಷದ ವರೆಗೂ ವೆಚ್ಚ ಮಾಡಿ, ಸುಸಜ್ಜಿತ ಕಾಲುಸಂಕ ನಿರ್ಮಿಸಲು ಅವಕಾಶ ಇದೆ. ಅದನ್ನು ಸಮರ್ಪಕವಾಗಿ ಬಳಸಿ ಪಿಡಿಒಗಳ ಮೂಲಕ ಮಾಹಿತಿ ಪಡೆದು ಕೂಡಲೇ ಕಾಮಗಾರಿ ಆರಂಭಿಸಲಿದ್ದೇವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಹೇಗಿರಲಿದೆ ಕಾಲುಸಂಕ ?
ಕನಿಷ್ಠ 3 ಅಡಿ ಅಗಲ ಹಾಗೂ 30 ಮೀ. ಉದ್ದದವರೆಗೂ ಕಾಲುಸಂಕ ನಿರ್ಮಿಸಿ ಎರಡೂ ಬದಿಗಳಲ್ಲಿ ತಡೆ ಮತ್ತು ಹಿಡಿಯಲು ಬೇಕಾದ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಆದರೆ ನರೇಗಾದಡಿ ಪರಿಕರಗಳಿಗೆ ಅನುದಾನ ಬೇಗ ಬರುವುದಿಲ್ಲ ಎಂಬ ಆರೋಪವೂ ಇದೆ.

ಜಿಲ್ಲೆಯ ಎಲ್ಲ ಗ್ರಾ.ಪಂ.ಗಳಲ್ಲೂ ಸಮೀಕ್ಷೆ ನಡೆಸಿ ಮಾಹಿತಿ ಪಡೆಯ ಲಾಗಿದೆ. ನರೇಗಾದಡಿ
ಶೀಘ್ರವೇ ಕಾಲುಸಂಕಗಳ ಕಾಮಗಾರಿ ಆರಂಭ ವಾಗಲಿದೆ. ಸ್ಥಳೀಯರು ಬಳಸುತ್ತಿರುವ ಖಾಸಗಿ ಜಮೀನಿನಲ್ಲಿರುವ ಕಾಲುಸಂಕ ಗಳನ್ನು ಆಯಾ ಜಮೀನು ಮಾಲಕರ ಮನವೊಲಿಸಿ ಸುಸ್ಥಿತಿಗೆ ತರಲಾಗುವುದು.
– ಪ್ರಸನ್ನ ಎಚ್‌., ಸಿಇಒ, ಜಿ.ಪಂ. ಉಡುಪಿ

- ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.