ಸಮ್ಮಿಶ್ರ ಸರಕಾರದಿಂದ ಕಾರ್ಕಳಕ್ಕೆ 58 ಕೋಟಿ ರೂ. ಅನುದಾನ: ಎಚ್‌ಡಿಕೆ


Team Udayavani, Apr 8, 2019, 6:11 AM IST

070419kkram1

ಕಾರ್ಕಳ: ನಾನು ಮುಖ್ಯ ಮಂತ್ರಿಯಾದ ಬಳಿಕ ಎಣ್ಣೆಹೊಳೆ ಕಿಂಡಿ ಅಣೆಕಟ್ಟು ಯೋಜನೆಗೆ ಬಜೆಟ್‌ನಲ್ಲಿ 40 ಕೋಟಿ ರೂ., ತಾಲೂಕಿನ 222 ಶಾಲಾ ಸಂಪರ್ಕ ಸೇತುವೆಗಳಿಗೆ 12 ಕೋಟಿ ರೂ., ಗ್ರಾಮೀಣಾಭಿವೃದ್ಧಿಗೆ 7 ಕೋಟಿ ರೂ. ಬಿಡುಗಡೆಗೊಳಿಸಿದ್ದು, ಕಾರ್ಕಳದ ಅಭಿವೃದ್ಧಿಗೆ 9 ತಿಂಗಳಲ್ಲಿ ಒಟ್ಟು 58 ಕೋಟಿ ರೂ. ಅನುದಾನ ಒದಗಿಸಿಕೊಟ್ಟಿದ್ದೇನೆ ಎಂದು ಮುಖ್ಯ ಮಂತ್ರಿ ಕುಮಾರಸ್ವಾಮಿ ಹೇಳಿದರು.

ಅವರು ರವಿವಾರ ಮಂಜುನಾಥ ಪೈ ಸ್ಮಾರಕ ಸಭಾಭವನದಲ್ಲಿ ಕಾಂಗ್ರೆಸ್‌ ಹಾಗೂ ಜನತಾದಳ ಜಂಟಿಯಾಗಿ ಏರ್ಪಡಿಸಿದ ಸಮಾವೇಶದಲ್ಲಿ ಮಾತನಾಡಿದರು.

2012-13ರಲ್ಲಿ ಬಿಜೆಪಿ ಸರಕಾರ ಕಾರ್ಕಳಕ್ಕೆ ನೀಡಿರುವುದು 5 ಕೋಟಿ, 2013-14ರಲ್ಲಿ 8 ಕೋಟಿ ರೂ. , ಅನಂತರ ಬಂದ ಸಿದ್ದರಾಮಯ್ಯ ಸರಕಾರ 48 ಕೋಟಿ ರೂ. ನೀಡಿದೆ ಎಂದರು.

ದೇಶ ರಕ್ಷಕರು ಸೈನಿಕರು. ಸೇನಾ ಪಡೆಗೆ ರಾಷ್ಟ್ರಪತಿ ಮುಖ್ಯಸ್ಥರೇ ಹೊರತು ಪ್ರಧಾನಿಯಲ್ಲ. ಸೈನಿಕರಸಾಧನೆಯನ್ನೂ ಮೋದಿ ತನ್ನದೆನ್ನುತ್ತಿ ದ್ದಾರೆ. ಇಂದಿರಾ ಗಾಂಧಿ, ಲಾಲ್‌ ಬಹದ್ದೂರ್‌ ಶಾಸಿŒಯವರೂ ಸೈನಿಕರ ಸಾಹಸವನ್ನು ತಮ್ಮ ಸರಕಾರದ್ದೆಂದು ಹೇಳಿಕೊಂಡಿರಲಿಲ್ಲ. ದೇವೇಗೌಡರು ಪ್ರಧಾನಿಯಾಗಿದ್ದ ವೇಳೆ ಭಯೋ ತ್ಪಾದಕ ಚಟುವಟಿಕೆಗಳಾಗಲಿ, ಇನ್ನಿತರ ಯಾವುದೇ ಅಹಿತಕರ ಘಟನೆಗಳಾಗಲಿ ನಡೆ‌ದಿರಲಿಲ್ಲ. ಹಾಗೆಂದು ಅದು ನಮ್ಮ ಸಾಧನೆ ಎಂದು ಹೇಳಿಕೊಂಡು ಬಂದಿರಲಿಲ್ಲ ಎಂದರು.

ಅಸ್ಥಿರಗೊಳಿಸುವ ತಂತ್ರ
ರಾಜ್ಯ ಸರಕಾರವನ್ನು ಅಸ್ಥಿರಗೊಳಿ ಸುವ ತಂತ್ರ ರೂಪಿಸುತ್ತಿದ್ದ ಬಿಜೆಪಿಯವರು ನೆಮ್ಮದಿಯಾಗಿ ಆಡಳಿತ ನಡೆಸಲು ಬಿಡಲಿಲ್ಲ. ಸರಕಾರಕ್ಕೆ ಪದೇಪದೇ ಗಡುವು ನೀಡುವ ಮೂಲಕ ಅಧಿಕಾರಿಗಳು ಪರಿಣಾಮಕಾರಿ ಯಾಗಿ ಕೆಲಸ ನಿರ್ವಹಿಸದಂತೆ ತಡೆಯು ತ್ತಿದ್ದರು. ಇವೆಲ್ಲವುಗಳ ನಡುವೆ ನಾವು ಜನಪರ ಆಡಳಿತ ನೀಡಿದ್ದೇವೆ. ಅನೇಕ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿದ್ದೇವೆ. ನಮ್ಮ ಕೆಲಸ ಕಾರ್ಯಗಳಿಗೆ ನಿರೀಕ್ಷಿತ ಪ್ರಚಾರ ಮಾತ್ರ ಸಿಗುತ್ತಿಲ್ಲ ಎಂದರು.

ಒಂದು ಬಾರಿ ಅವಕಾಶ ಕೊಡಿ…
ಈ ಬಾರಿ ಪ್ರಮೋದ್‌ ಮಧ್ವರಾಜ್‌ಅವರಿಗೊಂದು ಅವಕಾಶ ಕೊಡಿ. ಕ್ಷೇತ್ರದ ಅಭಿವೃದ್ಧಿಯೊಂದಿಗೆ ಈ ಭಾಗದ ಸಮಸ್ಯೆಗಳನ್ನು ಪರಿಹರಿಸುತ್ತೇನೆ ಎಂದು ಮನವಿ ಮಾಡಿಕೊಂಡರು.

ಸಚಿವರಾದ ಡಾ| ಜಯಮಾಲಾ, ಯು.ಟಿ. ಖಾದರ್‌, ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌, ನಾಯಕರಾದ ಅಮರನಾಥ ಶೆಟ್ಟಿ, ಭೋಜೇಗೌಡ, ಬಿ.ಎಂ. ಫಾರೂಕ್‌, ಗೋಪಾಲ ಭಂಡಾರಿ, ಯು.ಆರ್‌. ಸಭಾಪತಿ, ಅಶೋಕ ಕುಮಾರ್‌ ಕೊಡವೂರು, ಉದಯ ಶೆಟ್ಟಿ ಮುನಿಯಾಲು, ಅಧ್ಯಕ್ಷ ಶೇಖರ್‌ ಮಡಿವಾಳ, ಯೋಗಿಶ್‌ ಶೆಟ್ಟಿ ವೇದಿಕೆ ಯಲ್ಲಿದ್ದರು. ಬಿಪಿನ್‌ ಚಂದ್ರಪಾಲ್‌ ಸಭೆ ನಿರ್ವಹಿಸಿದರು.

ಹಣ ರಾಜ್ಯದ್ದು; ಹೆಸರು ಮೋದಿಯದ್ದು!
ಮೋದಿ 5 ವರ್ಷಗಳಲ್ಲಿ ಮಾಡಿದ್ದು ಭಾಷಣ ಮಾತ್ರ. ಆಯುಷ್ಮಾನ್‌ ಭಾರತ್‌ ಯೋಜನೆಗೆ ರಾಜ್ಯ ಸರಕಾರ 900 ಕೋಟಿ ರೂ. ಭರಿಸಿದರೆ, ಕೇಂದ್ರ ನೀಡಿದ್ದು ಕೇವಲ 350 ಕೋಟಿ. ಆದರೆ ಜಾಹೀರಾತಿನಲ್ಲಿ ಮೋದಿ ಚಿತ್ರ ಮಾತ್ರವಿದೆ ಎಂದು ಟೀಕಿಸಿದ ಮುಖ್ಯಮಂತ್ರಿಗಳು, ನರೇಗಾ ಯೋಜನೆಗೆ ಮೋದಿ ಸರಕಾರ ನಯಾ ಪೈಸೆ ನೀಡದೇ ಕಾರ್ಮಿಕ ರನ್ನು ಸಂಕಷ್ಟಕ್ಕೆ ದೂಡಿತ್ತು. ಈ ವೇಳೆ ರಾಜ್ಯ ಸರಕಾರವೇ 1,300 ಕೋಟಿ ರೂ. ಭರಿಸಿದ್ದು ಎಂದರು.

– ಸಿಎಂ ಆದ ಬಳಿಕ ಗಲಭೆಯಾಗಿಲ್ಲ
ನಾನು ಮುಖ್ಯಮಂತ್ರಿಯಾದ ಬಳಿಕ ಕರಾವಳಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ರಾಜಕೀಯಕ್ಕೋಸ್ಕರ ಬಿಜೆಪಿಯು ಜಾತಿ, ಧರ್ಮಗಳ ಮಧ್ಯೆ ವೈಷಮ್ಯ ಸೃಷ್ಟಿಸುತ್ತಿದೆ ಎಂದರು.

ನ‌ನ್ನ ಮನೆಗೆ ಪ್ರತಿದಿನ ಅಂಗವಿಕಲರು, ಆನಾರೋಗ್ಯ ಪೀಡಿತರು ಸಾವಿರಾರು ಸಂಖ್ಯೆಯಲ್ಲಿ ಬರುತ್ತಾರೆ. ಅಂಥವರಿಗೆ ನೆರವಾಗು ವಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 9 ತಿಂಗಳಲ್ಲಿ 85 ಕೋಟಿ ರೂ. ನೀಡಲಾಗಿದೆ. ಹಿರಿಯ ನಾಗರಿಕರ ಮಾಸಾಶನವನ್ನು 1 ಸಾವಿರಕ್ಕೆ ಏರಿಸಲಾಗಿದೆ ಎಂದರು.

–  ಶೋಭಾ ಮಾತನಾಡಿದ್ದಾರಾ ?
ಅಡಿಕೆ, ತೆಂಗು ಬೆಳೆಗಾರರ ಸಮಸ್ಯೆ, ಮೀನುಗಾರಿಕೆ ಸಮಸ್ಯೆ ಕುರಿತು ಕುರಿತು ಶೋಭಾ ಲೋಕಸಭೆಯಲ್ಲಿ ಮಾತನಾಡಿದ್ದಾರಾ? ನಾಪತ್ತೆ ಯಾದ ಬೋಟ್‌ ಪತ್ತೆಹಚ್ಚುವಲ್ಲಿ ಕೇಂದ್ರ ಸರಕಾರ ಸ್ಪಂದಿಸಿದೆಯೇ ಎಂದು ಸಿಎಂ ಪ್ರಶ್ನಿಸಿದರು.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.