60 ದಿನಗಳ ಹರಿಕಥಾ ಜ್ಞಾನಯಜ್ಞ ಕ್ಕೆ ಚಾಲನೆ
Team Udayavani, Jul 18, 2019, 5:19 AM IST
ಉಡುಪಿ: ಮನುಷ್ಯ ನಿರಂತರವಾಗಿ ಹರಿಕಥೆ ಕೇಳಿದಾಗ ಮನಸ್ಸಿನಲ್ಲಿ ಅಡಗಿದ ಅಹಂ ಭಾವನೆ ದೂರವಾಗುತ್ತದೆ ಎಂದು ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟರು.
ಶ್ರೀಕೃಷ್ಣ ಮಠ, ಪರ್ಯಾಯ ಪಲಿಮಾರು ಮಠ ಹಾಗೂ ಮಂಗಳೂರು ಹರಿಕಥಾ ಪರಿಷತ್ತು, ಬೆಂಗಳೂರು ಅಖೀಲ ಕರ್ನಾಟಕ ಕೀರ್ತನ ಕಲಾ ಪರಿಷತ್ ಹಾಗೂ ಕಾರ್ಕಳ ಶ್ರೀ ಹಂಡೆದಾಸ ಪ್ರತಿಷ್ಠಾನದ ಸಹಯೋಗದಲ್ಲಿ ಬುಧವಾರ ಮಧ್ವಾಂಗಣದಲ್ಲಿ ಆಯೋಜಿಸಿದ್ದ “60 ದಿನಗಳ ಹರಿಕಥಾ ಜ್ಞಾನ ಯಜ್ಞ’ಕ್ಕೆ ಚಾಲನೆ ನೀಡಿ ಮಾತನಾಡಿದರು.
ಭಗವಂತ ಹೇಗೆ ಭಕ್ತನಿಗೆ ಬೇಡವಾಗಿರುವುದನ್ನು ಹಿಂಪಡೆದು ಬೇಕಾಗಿರುವುದನ್ನು ನೀಡುತ್ತಾನೆಯೋ ಅಂತೆಯೇ ಹರಿಕಥೆಗಳು ಸಹ ಮನಸ್ಸಿನಲ್ಲಿನ ಅಶಾಂತಿಯನ್ನು ಹೋಗಲಾಡಿಸಿ ಶಾಂತಿ ಯನ್ನು ನೆಲೆಸುವಂತೆ ಮಾಡುತ್ತದೆ ಎಂದವರು ತಿಳಿಸಿದರು.
ಪಲಿಮಾರು ಮಠದ ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಮಾತನಾಡಿ, ಹರಿಕಥೆ ಕೇವಲ ಮನೋರಂಜನೆಗೆ ಸಿಮೀತವಾಗಿಲ್ಲ. ಇದು ಪೌರಾಣಿಕ ವಿಷಯವನ್ನು ಸ್ವಾರಸ್ಯವಾಗಿ ತಿಳಿಸುತ್ತದೆ ಎಂದರು.ಅದಮಾರು ಮಠದ ಕಿರಿಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.
ಮಂಗಳೂರು ಹರಿಕಥಾ ಪರಿಷತ್ತು ಗೌರವಾಧ್ಯಕ್ಷ ಹರಿಕೃಷ್ಣ ಪುನರೂರು, ಅಧ್ಯಕ್ಷ ಮಹಾಬಲ ಶೆಟ್ಟಿ, ಕಾರ್ಕಳ ಶ್ರೀ ಹಂಡೆದಾಸ ಪ್ರತಿಷ್ಠಾನದ ರುಕ್ಮಿಣಿ ಹಂಡೆ, ಉಡುಪಿ ಸಿಂಡಿಕೆಟ್ ಬ್ಯಾಂಕ್ ನಿವೃತ್ತ ಜಿ.ಎಂ. ದೇವಾನಂದ ಉಪಾಧ್ಯಾಯ ಉಪಸ್ಥಿತರಿದ್ದರು.
ಹರಿಕಥಾ ಪರಿಷತ್ತಿನ ಜಿಲ್ಲಾ ಸಂಚಾಲಕ ವೈ. ಅನಂತಪದ್ಮನಾಭ ಭಟ್ ಸ್ವಾಗತಿಸಿದರು, ಮಂಗಳೂರು ಹರಿಕಥಾ ಪರಿಷತ್ತು ಪ್ರ. ಕಾರ್ಯದರ್ಶಿ ತೋನ್ಸೆ ಪುಷ್ಕಳ್ ಕುಮಾರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ