ಉಡುಪಿ: 90 ಪಾಸಿಟಿವ್‌ ಪ್ರಕರಣ ; 75 ಮಂದಿ ಸ್ಥಳೀಯರು


Team Udayavani, Jul 12, 2020, 6:10 AM IST

ಉಡುಪಿ: 90 ಪಾಸಿಟಿವ್‌ ಪ್ರಕರಣ ; 75 ಮಂದಿ ಸ್ಥಳೀಯರು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಉಡುಪಿ: ಜಿಲ್ಲೆಯಲ್ಲಿ ಶನಿವಾರ 573 ಕೋವಿಡ್ 19 ನೆಗೆಟಿವ್‌ ಮತ್ತು 90 ಪಾಸಿಟಿವ್‌ ಪ್ರಕರಣ ವರದಿಯಾಗಿವೆ.

ಇದು ಇತ್ತೀಚಿನ ದಿನಗಳಲ್ಲಿ ವರದಿಯಾದ ಹೆಚ್ಚಿನ ಪಾಸಿಟಿವ್‌ ಸಂಖ್ಯೆಯಾಗಿದೆ.

ಪಾಸಿಟಿವ್‌ ಪ್ರಕರಣಗಳಲ್ಲಿ ಓರ್ವ ಎಎಸ್‌ಐ ಇದ್ದಾರೆ.

ಪಾಸಿಟಿವ್‌ ಪ್ರಕರಣಗಳಲ್ಲಿ ಉಡುಪಿ ತಾಲೂಕಿನವರು 66, ಕುಂದಾಪುರ ತಾಲೂಕಿನವರು 20, ಕಾರ್ಕಳ ತಾಲೂಕಿನವರು 4 ಮಂದಿ. 57 ಪುರುಷರು, 25 ಮಹಿಳೆಯರು, ಮೂವರು ಗಂಡು ಮಕ್ಕಳು, ಐವರು ಹೆಣ್ಣು ಮಕ್ಕಳಿದ್ದಾರೆ.

ಮುಂಬಯಿಯಿಂದ ಬಂದ 8 ಮಂದಿ, ಬೆಂಗಳೂರಿನಿಂದ ಬಂದ ಐವರು, ದ.ಕ. ಮತ್ತು ರಾಯಚೂರಿನಿಂದ ಬಂದ ತಲಾ ಒಬ್ಬರಿಗೆ ಸೋಂಕು ತಗಲಿದೆ. 75 ಮಂದಿ ಸ್ಥಳೀಯರಾಗಿದ್ದಾರೆ. ಅವರಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗಲಿದೆ.

ಎಂಟು ಮಂದಿ ಉಡುಪಿ ಡಾ| ಟಿಎಂಎ ಪೈ ಆಸ್ಪತ್ರೆಯಿಂದ, 11 ಮಂದಿ ಕಾರ್ಕಳ ತಾಲೂಕು ಆಸ್ಪತ್ರೆಯಿಂದ, ಇಬ್ಬರು ಕುಂದಾಪುರ ತಾಲೂಕು ಆಸ್ಪತ್ರೆಯಿಂದ ಒಟ್ಟು 21 ಜನರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಶನಿವಾರ 269 ಮಾದರಿ ಸಂಗ್ರಹಿಸಿದ್ದು ಈವರೆಗಿನ ಮಾದರಿಗಳ ಸಂಖ್ಯೆ 21,678ಕ್ಕೇರಿದೆ. ಒಟ್ಟು 18,081 ನೆಗೆಟಿವ್‌ ಮತ್ತು 1,567 ಪಾಸಿಟಿವ್‌ ಪ್ರಕರಣಗಳಾಗಿವೆ. 1,245 ಜನರು ಗುಣಮುಖರಾಗಿದ್ದಾರೆ. 319 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. 2,030 ಮಾದರಿಗಳ ವರದಿ ಬರಬೇಕಿದೆ. ಪ್ರಸ್ತುತ 1,285 ಮಂದಿ ಮನೆ ಮತ್ತು 137 ಮಂದಿ ಐಸೊಲೇಶನ್‌ ವಾರ್ಡ್‌ಗಳಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ.

ಮೃತ ವ್ಯಕ್ತಿಗೆ ಪಾಸಿಟಿವ್‌
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಲ್ಪೆ ಮೂಲದ 55ರ ಹರೆಯದ ವ್ಯಕ್ತಿಯೋರ್ವರ ಸಾವು ಕೋವಿಡ್ 19 ಸೋಂಕಿನಿಂದ ಸಂಭವಿಸಿರುವುದು ದೃಢವಾಗಿದೆ. ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಕೋವಿಡ್ 19 ನೆಗೆಟಿವ್‌ ಬಂದಿತ್ತು. ಗುರುವಾರ ಮೃತಪಟ್ಟಿದ್ದು, ಆ ಬಳಿಕ ನಡೆಸಿದ ಪರೀಕ್ಷೆಯ ವರದಿಯಲ್ಲಿ ಸೋಂಕು ದೃಢವಾಗಿದೆ.

ಪಡುಬಿದ್ರಿ: 11 ಪ್ರಕರಣ
ಮುಂಬಯಿಯಿಂದ ಬಂದಿರುವ ಬೆಂಗ್ರೆಯ 6 ಮಂದಿ, ಬೆಂಗಳೂರಿನಿಂದ ಬಂದಿರುವ ಎರ್ಮಾಳಿನ ದಂಪತಿ, ಹೆಜಮಾಡಿ ಗರಡಿ ಬಳಿಯ  ಅಕ್ಕ, ತಮ್ಮ, ನಡ್ಪಾಲಿನ ಸೋಂಕಿತ ಸಹೋದರರ ಪ್ರಾಥಮಿಕ ಸಂಪರ್ಕ ಹೊಂದಿರುವ ಹೆಜಮಾಡಿ ಮಸೀದಿ ಬಳಿಯ ವ್ಯಕ್ತಿಯ ಸಹಿತ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ 11 ಮಂದಿಯಲ್ಲಿ ಶನಿವಾರ ಕೋವಿಡ್ 19 ಸೋಂಕು ದೃಢಪಟ್ಟಿದೆ. ಅವರಲ್ಲಿ 6 ಮತ್ತು 11 ವರ್ಷದ ಮಕ್ಕಳೂ ಇದ್ದಾರೆ.

ಹೆಜಮಾಡಿ ಗರಡಿ ಬಳಿಯ ಅಕ್ಕ-ತಮ್ಮ ತಿಂಗಳ ಹಿಂದೆ ಬೆಂಗಳೂರಿನಿಂದ ಬಂದಿದ್ದು, ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಲಾಗಿತ್ತು.

ಹೆತ್ತವರೊಂದಿಗೆ ಮಗನೂ ಆಸ್ಪತ್ರೆಗೆ ಬಾಧಿತರೆಲ್ಲರನ್ನೂ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಬಂದ ದಂಪತಿಗೆ 10 ವರ್ಷದ ಮಗನಿದ್ದು ಆತನಿಗೆ ಸೋಂಕು ಇಲ್ಲದಿದ್ದರೂ ಅನಿವಾರ್ಯವಾಗಿ ಹೆತ್ತವರೊಂದಿಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಆಸ್ಪತ್ರೆಯ ಎಲ್ಲರ ವರದಿ ನೆಗೆಟಿವ್‌

ಇದೇ ಸಂದರ್ಭ ಪಡುಬಿದ್ರಿ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸಹಿತ 21 ಸಿಬಂದಿ ಮತ್ತು 8 ಮಂದಿ ಆಶಾ ಕಾರ್ಯ ಕರ್ತೆಯರ ಪರೀಕ್ಷಾ ವರದಿ ನೆಗೆಟಿವ್‌ ಬಂದಿದೆ.

ಕರ್ಕುಂಜೆ ಯುವಕನಿಗೆ ಕೋವಿಡ್ 19 ಪಾಸಿಟಿವ್‌
ಕರ್ಕುಂಜೆ ಗ್ರಾಮದ ಮಾವಿನಕಟ್ಟೆ ಪರಿಸರದ ಯುವಕನಿಗೆ ಕೋವಿಡ್ 19 ಪಾಸಿಟಿವ್‌ ದೃಢವಾಗಿದೆ. ಚಾಲಕರಾಗಿರುವ ಅವರು ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದು, ಪರೀಕ್ಷೆಯಲ್ಲಿ ಪಾಸಿಟಿವ್‌ ಬಂದಿದೆ. ಅವರನ್ನು ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಮೂವರನ್ನು ಹೋಂ ಕ್ವಾರಂಟೈನ್‌ ಮಾಡಲಾಗಿದೆ.

ಪ್ರಯೋಗಾಲಯ ಕಾರ್ಯಾರಂಭ
ಉಡುಪಿಯ ಜಿಲ್ಲಾಸ್ಪತ್ರೆ ಯಲ್ಲಿ ಆರಂಭಗೊಂಡ ಸರಕಾರಿ ಪ್ರಯೋಗಾಲಯವು ಜು. 9ರಿಂದ ಕಾರ್ಯಾರಂಭಿಸಿದೆ. ಶನಿವಾರ 48 ಗಂಟಲ ದ್ರವ ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.