MIT ಪ್ರಾಧ್ಯಾಪಕರಿಗೆ ಮೀನುಗಳ ಪ್ರಮಾಣ ಅಧ್ಯಯನಕ್ಕೆ 93 ಲಕ್ಷ ರೂ. ಅನುದಾನ
Team Udayavani, Oct 12, 2023, 7:03 PM IST
ಮಣಿಪಾಲ: ಉಡುಪಿ ಜಿಲ್ಲಾ ಕರಾವಳಿಯ ಮೀನು ಸಂಭವನಾ ಕ್ಷೇತ್ರಗಳ ಅಧ್ಯಯನಕ್ಕೆ ಮಣಿಪಾಲ ತಾಂತ್ರಿಕ ವಿದ್ಯಾಲಯ(MIT) ಪ್ರಾಧ್ಯಾಪಕರಿಗೆ 93.15ಲಕ್ಷ ರೂ. ಕೇಂದ್ರ ಸರಕಾರದ ಅನುದಾನ ನೀಡಲಾಗುತ್ತಿದೆ.
ಮಣಿಪಾಲ ತಾಂತ್ರಿಕ ವಿದ್ಯಾಲಯ ಸಿವಿಲ್ ಇಂಜಿನಿಯರಿಂಗ್ ವಿಭಾಗ ಹಾಗೂ ಹವಾಮಾನ ಬದಲಾವಣೆ ಅಧ್ಯಯನ ಕೇಂದ್ರದ ಮುಖ್ಯಸ್ಥರಾದ ಡಾ. ಅನೀಶ್ ಕುಮಾರ್ ವಾರಿಯರ್ ಮುಂದಾಳುತ್ವದಲ್ಲಿ, ಪ್ರಾಧ್ಯಾಪಕ ಡಾ. ಕೆ. ಬಾಲಕೃಷ್ಣರ ಸಹ ಮುಂದಾಳತ್ವದಲ್ಲಿ ಉಡುಪಿ ಜಿಲ್ಲಾ ಕರಾವಳಿಯ ಮೀನುಗಳ ಸಿಗುವಿಕೆಯ ಪ್ರಮಾಣದ ಅಧ್ಯಯನ ನಡೆಸಲು ಕೇಂದ್ರ ಸರಕಾರದ ಭೂವಿಜ್ಞಾನ ಸಚಿವಾಲಯ ಮತ್ತು ಹೈದರಾಬಾದ್ ನ ಭಾರತ ರಾಷ್ಟ್ರೀಯ ಸಾಗರ ಮಾಹಿತಿ ಸೇವಾ ಕೇಂದ್ರ (INCOIS) 93.15ಲಕ್ಷ ರೂ. ಅನುದಾನ ನೀಡುತ್ತಿದೆ. ಈ ಸಂಶೋಧನೆಯನ್ನು ಮೂರು ವರ್ಷಗಳ ಕಾಲ ಕೈಗೊಳ್ಳಲಾಗುತ್ತದೆ.
ಸಂಶೋಧನೆಯು ಸಾಗರದಲ್ಲಿ ಆಗುತ್ತಿರುವ ಸೂಕ್ಷ್ಮ ಭೂ ಜೈವಿಕ ಬದಲಾವಣೆಗಳನ್ನು ಗಮನಿಸುವುದು, ಅದರಿಂದ ಮೀನಿನ ಇಳುವರಿಯಲ್ಲಾಗುವ ಪ್ರಮಾಣಗಳನ್ನು ಅಳೆಯುವುದಾಗಿದೆ. ಇತ್ತೀಚೆಗಿನ ಹವಾಮಾನ ಬದಲಾವಣೆಗಳು ಹಾಗೂ ಮೀನುಗಳ ಇಳುವರಿಯ ಮೇಲೆ ಆಗುವ ಅದರ ಪರಿಣಾಮ, ಸಾಗರ ಮಾಲಿನ್ಯ ಮತ್ತು ಅದನ್ನು ತಡೆಗಟ್ಟುವಿಕೆಯ ಬಗ್ಗೆಯೂ ಅಧ್ಯಯನ ಮಾಡಲಾಗುತ್ತದೆ.
ಈ ಸಂಶೋಧನೆಯನ್ನು ಗೋವಾದಲ್ಲಿರುವ ರಾಷ್ಟ್ರೀಯ ಸಮುದ್ರ ವಿಜ್ಞಾನ ಸಂಸ್ಥೆ (NIO) ಯ ವಿಜ್ಞಾನಿಗಳಾದ ಡಾ. ದಾಮೋದರ ಶೆಣೈ, ಡಾ. ಸಿಬಿ ಕುರಿಯನ್ ಹಾಗೂ ಡಾ. ಮಂದಾರ್ ನಾನಜ್ಕರ್ ಸಹಯೋಗದಲ್ಲಿ ಮಾಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ