ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ
Team Udayavani, May 19, 2018, 11:52 AM IST
ಮಂಗಳೂರು / ಉಡುಪಿ: ಅರಬಿ ಸಮುದ್ರದಲ್ಲಿ ಈಗಾಗಲೇ ಕಾಣಿಸಿಕೊಂಡಿರುವ “ಸಾಗರ್’ ಚಂಡಮಾರುತವು ಗಲ್ಫ್ ಕೊಲ್ಲಿಯತ್ತ ಚಲಿಸಿದ್ದು, ಸೋಮಾಲಿಯಾ ಕಿನಾರೆಗೆ ಬಡಿಯಲಿದೆ. ಈ ಮಧ್ಯೆ ಅರಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೆ„ ಸುಳಿಗಾಳಿ ಮೇ 21ರ ವೇಳೆಗೆ ವಾಯುಭಾರ ಕುಸಿತವಾಗಿ ಮಾರ್ಪಾಡಾಗಲಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.
ಸುಳಿಗಾಳಿ ಇರುವುದರಿಂದ ಕರ್ನಾಟಕ ಮತ್ತು ಕೇರಳದಲ್ಲಿ ಗಾಳಿ, ಸಿಡಿಲು ಸಹಿತ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ಎರಡು ದಿನ ಮತ್ತು ದಕ್ಷಿಣ ಒಳನಾಡಿನಲ್ಲಿ ವಾರಪೂರ್ತಿ ಉತ್ತಮ ಮಳೆಯಾಗಲಿದೆ.
ಮೀನುಗಾರರಿಗೆ ಎಚ್ಚರಿಕೆ ಸಮುದ್ರದಲ್ಲಿ ಸುಳಿಗಾಳಿ ಇರು ವುದರಿಂದ ಗಾಳಿಯು ಗಂಟೆಗೆ 60ರಿಂದ 70 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಆದುದರಿಂದ ಮೀನುಗಾರರು ಮುಖ್ಯವಾಗಿ ಆಳಸಮುದ್ರಕ್ಕೆ ಹೋಗಬಾರದು. ತೀರದಲ್ಲಿಯೂ ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ