Majoor: ರಿಕ್ಷಾಕ್ಕೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Team Udayavani, Mar 7, 2024, 8:01 PM IST
ಕಾಪು: ರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದು ಚಾಲಕನ ಸಹಿತ ನಾಲ್ವರು ಗಾಯಗೊಂಡ ಘಟನೆ ಮಜೂರಿನಲ್ಲಿ ಮಾ. 6ರಂದು ನಡೆದಿದೆ.
ರಿಕ್ಷಾ ಚಾಲಕ ಉಂಝ, ಪದ್ಮಾವತಿ, ಪಾದೂರಿನ ಸಾದಿಕ್, ಜಯ ಗಾಯಾಳುಗಳು.
ಮಜೂರು ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ಜಯ, ಪದ್ಮಾವತಿ ಮತ್ತು ಸಾದಿಕ್ ಪಾದೂರು ಎಂಬವರು ಮಲ್ಲಾರು ಕಡೆಯಿಂದ ಬಂದ ಉಂಝ ಎಂಬವರ ರಿಕ್ಷಾದಲ್ಲಿ ಕಾಪುವಿನ ಕಡೆಗೆ ತೆರಳುತ್ತಿದ್ದಾಗ ಕಾರು ಢಿಕ್ಕಿ ಹೊಡೆದಿದ್ದು, ಈ ವೇಳೆ ರಿಕ್ಷಾ ಕವುಚಿ ಬಿದ್ದು ರಿಕ್ಷಾ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯರು ಉಪಚರಿಸಿ ಚಿಕಿತ್ಸೆಗಾಗಿ ಉಡುಪಿಯ ಆಸ್ಪತ್ರೆಗಳಿಗೆ ದಾಖಲು ಮಾಡಿದ್ದು, ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು
ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ