ಉತ್ತಮ ಸೇವೆಯ ಮೂಲಕ ಹಾಲು ಉತ್ಪಾದನೆ ಹೆಚ್ಚಿಸಿಕೊಂಡ ಸಂಸ್ಥೆ

ಚೇಂಪಿ ಹಾಲು ಉತ್ಪಾದಕರ ಸಹಕಾರಿ ಸಂಘ

Team Udayavani, Feb 23, 2020, 4:42 AM IST

ram-43

ಸಾಸ್ತಾನ ಸಮೀಪದ ಮೂಡಹಡು ಹಾಗೂ ಗುಂಡ್ಮಿ ಗ್ರಾಮಗಳ ಹೈನುಗಾರರ ಸಂಸ್ಥೆಯಾಗಿರುವ ಚೇಂಪಿ ಹಾಲು ಉತ್ಪಾದಕರ ಸಂಘ ಸಣ್ಣ ವ್ಯಾಪ್ತಿಯನ್ನು ಹೊಂದಿದ್ದರೂ ಕೋಟ ಹೋಬಳಿಯಲ್ಲಿ ಅತಿ ಹೆಚ್ಚು ಹಾಲು ಉತ್ಪಾದನೆ ಮಾಡುವ ಸಂಘಗಳಲ್ಲಿ ಮುಂಚೂಣಿಯಲ್ಲಿದೆ.

ಕೋಟ: ರೈತರನ್ನು ಹೈನುಗಾರಿಕೆಯ ಮೂಲಕ ಸ್ವಾವಲಂಬಿಗಳನ್ನಾಗಿಸುವ ನಿಟ್ಟಿನಲ್ಲಿ ಹುಟ್ಟಿಕೊಂಡ ಚೇಂಪಿ ಹಾಲು ಉತ್ಪಾದಕರ ಸಂಘ ಇದೀಗ ಮಾದರಿ ಸಂಘವಾಗಿ ರೂಪುಗೊಂಡಿದ್ದು ಸುತ್ತಲಿನ ನೂರಾರು ಹೈನುಗಾರರಿಗೆ ದಾರಿದೀಪವಾಗಿದೆ.

1977ರಲ್ಲಿ ಸ್ಥಾಪನೆ
ಈ ಸಂಸ್ಥೆ 1977 ಜು.17ರಂದು ಕೆನರಾ ಮಿಲ್ಕ್ ಯೂನಿಯನ್‌ನ ಅಧೀನದಲ್ಲಿ ಸ್ಥಾಪನೆಯಾಗಿತ್ತು. ಸ್ಥಳೀಯ ಮುಂದಾಳು ವೈ.ಎಸ್‌.ರಾಮಚಂದ್ರ ಹೊಳ್ಳರು ಈ ಸಂಘದ ಸ್ಥಾಪಕಾಧ್ಯಕ್ಷರು. ರಾಷ್ಟ್ರೀಯ ಹೆದ್ದಾರಿಯ ಪೂರ್ವ ದಿಕ್ಕಿನ ಕಟ್ಟಡದಲ್ಲಿ 60-70 ಮಂದಿ ಸದಸ್ಯರು, 50 ಲೀ. ಹಾಲು ಸಂಗ್ರಹದೊಂದಿಗೆ ಸಂಸ್ಥೆ ಆರಂಭವಾಗಿತ್ತು. ಅನಂತರ 1992ರಲ್ಲಿ ಸ್ವಂತ ಜಾಗ ಖರೀದಿಸಿ ಸ್ವಂತ ಕಟ್ಟಡ ರಚಿಸಿತು ಹಾಗೂ 2014ರಲ್ಲಿ ಶೀತಲೀಕರಣ ಕೇಂದ್ರವನ್ನು ಸ್ಥಾಪಿಸಲಾಯಿತು.

ಊರಿನ ಜನರಿಗೆ ಪ್ರೇರಣೆ
ಇಲ್ಲಿ ಹಾಲು ಉತ್ಪಾದಕರ ಸಂಘ ಸ್ಥಾಪನೆಯಾಗುವ ಮೊದಲು ಕೇವಲ ಗೃಹಬಳಕೆ ಹಾಲಿಗಾಗಿ ಹಸು ಸಾಕುತ್ತಿದ್ದರು. ಡೈರಿ ಸ್ಥಾಪನೆಯಾದ ಬಳಿಕ ನೂರಾರು ಮಂದಿ ಹೈನುಗಾರರು ಸೃಷ್ಟಿಯಾದರು. ಸಂಘದ ಮೂಲಕ ಅವರಿಗೆ ಅಗತ್ಯ ತರಬೇತಿ, ಮಾಹಿತಿ ಹಾಗೂ ಹಾಲು ಉತ್ಪಾದನೆಗೆ ಹೆಚ್ಚಿನ ಸಹಕಾರ ನೀಡಲಾಯಿತು ಮತ್ತು ಹಲವರು ಉಪಕಸುಬಾಗಿ ಇದನ್ನು ಸ್ವೀಕರಿಸಿದರು. ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಬಳಸಿಕೊಂಡರು.

ಪ್ರಸ್ತುತ ಸ್ಥಿತಿಗತಿ
ಪ್ರಸ್ತುತ ಸಂಘದಲ್ಲಿ 210ಮಂದಿ ಮಂದಿ ಸದಸ್ಯರಿದ್ದು 1,100-1,200 ಲೀಟರ್‌ ಹಾಲು ಸಂಗ್ರಹವಾಗುತ್ತಿದೆ. ಹಾಲಿ ಅಧ್ಯಕ್ಷರಾಗಿ ಆಸ್ತಿಕ ಶಾಸ್ತ್ರಿ ಹಾಗೂ ಕಾರ್ಯದರ್ಶಿಯಾಗಿ ವೈ.ಕೃಷ್ಣಮೂರ್ತಿ ಐತಾಳ ಸೇವೆ ಸಲ್ಲಿಸುತ್ತಿದ್ದಾರೆ. ಶೀತಲೀಕರಣ ಘಟಕವನ್ನು ಹೊಂದಿದ್ದು 6 ಸಂಘಗಳ ಹಾಲು ಘಟಕದಲ್ಲಿ ಸಂಗ್ರಹಿಸಲಾಗುತ್ತದೆ. ಸದಸ್ಯರಾದ ಶ್ರೀರಾಮ ಮಧ್ಯಸ್ಥ ಅತೀ ಹೆಚ್ಚು ಹಾಲು ಪೂರೈಕೆ ಮಾಡುತ್ತಿದ್ದಾರೆ.

ಮಾದರಿ ಸಂಘ
ಸಣ್ಣ ವ್ಯಾಪ್ತಿಯನ್ನು ಹೊಂದಿದ್ದರೂ ಅತೀ ಹೆಚ್ಚು ಹಾಲು ಉತ್ಪಾದನೆ ಹಾಗೂ ಶೀತಲೀಕರಣ ಘಟಕ ಸ್ಥಾಪಿಸುವ ಮೂಲಕ ಸಂಘ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಸಂಸ್ಥೆಯ ಬೆಳವಣಿಗೆಯ ಹಿಂದೆ ಹಿರಿಯರ ಕೊಡುಗೆ ದೊಡ್ಡದಿದೆ. ಅದನ್ನು ಮುಂದುವರಿಸಿಕೊಂಡು ಹೋಗಬೇಕಾದ ಜವಾಬ್ದಾರಿ ನಮ್ಮದಾಗಿದೆ.
ಆಸ್ತಿಕ ಶಾಸ್ತ್ರಿ, ಅಧ್ಯಕ್ಷರು

ಅಧ್ಯಕ್ಷರು
ರಾಮಚಂದ್ರ ಹೊಳ್ಳ, ಲಕ್ಷ್ಮೀನಾರಾಯಣ ಐತಾಳ,ಯಜ್ಞನಾರಾಯಣ ಸೋಮಯಾಜಿ, ಎಂ.ರಾಮದೇವ ಐತಾಳ, ಜಿ.ಸುಬ್ರಾಯ ಭಟ್‌, ಆಸ್ತಿಕ ಶಾಸ್ತಿ (ಹಾಲಿ)

ಕಾರ್ಯದರ್ಶಿ
ವನಜಾಕ್ಷಿ, ನಾಗರಾಜ ಎಂ.,ವೈ.ಕೃಷ್ಣಮೂರ್ತಿ ಐತಾಳ (ಹಾಲಿ)

ಯಶಸ್ಸಿನ ಹಾದಿ
ತಮ್ಮ ಸದಸ್ಯರೊಂದಿಗೆ ಇರಿಸಿಕೊಂಡ ನಿಕಟ ಸಂಪರ್ಕ, ಜಾನುವಾರುಗಳಿಗೆ ಕೃತಕ ಗರ್ಭಧಾರಣೆ ಹಾಗೂ ಅನಾರೋಗ್ಯದ ಸಂದರ್ಭ ಸಂಘದ ಸಿಬಂದಿ ಉತ್ತಮವಾಗಿ ಸ್ಪಂದಿಸುವ ಕ್ರಮದಿಂದಾಗಿ ಹೈನಗಾರರು ಮತ್ತು ಸಂಘದ ನಡುವೆ ಉತ್ತಮ ಬಾಂಧವ್ಯ ಬೆಳೆದಿದೆ. ಹೀಗಾಗಿ ಹಾಲು ಉತ್ಪಾದಕರ ಸಂಘಗಳಿಗೆ ಖಾಸಗಿ ಪೈಪೋಟಿ ಅಸಾಧ್ಯವಾಗಿದೆ. ಅದೇ ರೀತಿ ಚಿಕ್ಕ ವ್ಯಾಪ್ತಿಯನ್ನು ಹೊಂದಿರುವ ಚೇಂಪಿ ಹಾಲು ಉತ್ಪಾದಕರ ಸಂಘವು ಆರಂಭದಿಂದ ತನ್ನ ಉತ್ತಮ ಸೇವೆಯ ಮೂಲಕ ದೊಡ್ಡ ಡೈರಿಗಳಿಗೆ ಕಡಿಮೆ ಇಲ್ಲದಂತೆ ಸಾಧನೆ ಮಾಡಿದೆ.

ಪ್ರಶಸ್ತಿ-ಪುರಸ್ಕಾರ
1993ರಲ್ಲಿ ಜಿಲ್ಲಾ ಮಟ್ಟದ ಉತ್ತಮ ಸಂಘ ಪ್ರಶಸ್ತಿ ಹಾಗೂ ಒಕ್ಕೂಟದ ಬೆಳ್ಳಿ ಹಬ್ಬದ ಸಂದರ್ಭ ಜಿಲ್ಲಾ ಅತ್ಯುತ್ತಮ ಸಂಘವೆಂಬ ಪ್ರಶಸ್ತಿ ದೊರೆತಿದೆ.

- ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.