ಮೀನು ಹಿಡಿಯುತ್ತಿದ್ದ ಕೈಗಳಲ್ಲಿ ದೇಶ ರಕ್ಷಣೆಯ ಬಂದೂಕು


Team Udayavani, Feb 25, 2019, 1:00 AM IST

army.jpg

ಮಲ್ಪೆ: ಮಲ್ಪೆ ಬಂದರಿನಲ್ಲಿ ದೋಣಿಯಿಂದ ಮೀನು ಇಳಿಸುತ್ತಿದ್ದ, ನಾಡ ದೋಣಿಯಲ್ಲಿ ಸಮುದ್ರಕ್ಕೆ ತೆರಳಿ ಮೀನು ಹಿಡಿಯುತ್ತಿದ್ದ ವಸಂತ ಅಮೀನ್‌ ಇಂದು ಬಂದೂಕು ಹಿಡಿದು ದೇಶ ಕಾಯುವ ಯೋಧರಾಗಿದ್ದಾರೆ. 

ಸಿಪಾಯಿ ಯಾಗಿ ಸುದೀರ್ಘ‌ 17 ವರ್ಷಗಳನ್ನು ಕಳೆದಿದ್ದಾರೆ. ಉಡುಪಿ ತಾಲೂಕಿನ ತೊಟ್ಟಂ ವಡಭಾಂಡೇಶ್ವರ ಬೇಬಿ ಅಮೀನ್‌ ಮತ್ತು ಕೃಷ್ಣಪ್ಪ ಕೋಟ್ಯಾನ್‌ ದಂಪತಿಯ ಐವರು ಮಕ್ಕಳ ಪೈಕಿ ವಸಂತ ಅಮೀನ್‌ ಮೂರನೆಯವರು. ಮೀನುಗಾರ ಕುಟುಂಬ. ವಸಂತರು ವಡಭಾಂಡೇಶ್ವರ ಗಾಂಧಿ ಶತಾಬ್ದಿ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪೂರೈಸಿದ ಬಳಿಕ ಕುಲಕಸುಬಿಗೆ ಹೆಗಲು ಕೊಟ್ಟರು. ಸುಮಾರು 6 ವರ್ಷ ಮಲ್ಪೆಯ ಮೀನುಗಾರಿಕೆ ಬಂದರಿನಲ್ಲಿ “ಕನ್ನಿ  ಕೆಲಸ’, ಅಂದರೆ ಬೋಟಿನಿಂದ ಮೀನು ಇಳಿಸುವ ಕಾಯಕಕ್ಕೆ ಸೇರಿಕೊಂಡರು. ಜತೆಗೆ ನಾಡದೋಣಿಯಲ್ಲಿ ಸಮುದ್ರಕ್ಕೆ ತೆರಳಿ ಮೀನು ಹಿಡಿಯುತ್ತಿದ್ದರು. ವಸಂತ ಅಮೀನರಿಗೆ ಎಳವೆಯಿಂದಲೇ ಸೇನೆ ಎಂದರೆ ಆಸಕ್ತಿ, ಕುತೂಹಲ. ಮಿಲಿಟರಿ ಸೇರುವ ಆಸೆ ಆಗಲೇ ಇತ್ತು. ದೊಡ್ಡವರಾದ ಮೇಲೆ ಏನಾಗುತ್ತೀರಿ ಎಂದು ಮೇಷ್ಟ್ರು ಕೇಳಿದ ಪ್ರಶ್ನೆಗೆ “ದೇಶ ಸೇವೆ ಮಾಡುವ ಯೋಧನಾಗುತ್ತೇನೆ’ ಎಂದು ಉತ್ತರಿಸುತ್ತಿದ್ದ ಬಾಲಕ.

ಗೆಳೆಯರ ಪ್ರೋತ್ಸಾಹ
ಶಿಕ್ಷಣವನ್ನು ಪ್ರೌಢಶಾಲೆ ಹಂತದಲ್ಲಿ ನಿಲ್ಲಿಸಿ ಕಾಯಕದಲ್ಲಿ ತೊಡಗಿದ್ದ ವಸಂತರು ಸೈನಿಕನಾಗುವ ಬಯಕೆಯನ್ನು ಗೆಳೆಯರಲ್ಲಿ ಆಗಾಗ ಹೇಳಿಕೊಳ್ಳು ತ್ತಿದ್ದರು. ಆದರೆ ಸ್ಪಷ್ಟ ದಾರಿ ಗೊತ್ತಿರಲಿಲ್ಲ. ಒಂದು ದಿನ ಪತ್ರಿಕೆಯಲ್ಲಿ  ಪ್ರಕಟವಾಗಿದ್ದ ಸೇನಾ ನೇಮಕಾತಿ ರ್ಯಾಲಿಯ ಬಗ್ಗೆ ಸ್ನೇಹಿತ ಶೈಲೇಶ್‌ ಕುಮಾರ್‌ ಗಮನ ಸೆಳೆದರು. ಅದಕ್ಕೆ ಬೇಕಾದ ಅರ್ಜಿಯನ್ನು ಅವರೇ ತಂದು ಭರ್ತಿ ಮಾಡಿ ಕಳುಹಿಸಿಕೊಟ್ಟಿದ್ದರು.
ವಸಂತ ಅಮೀನ್‌ 2002ರ ಜೂನ್‌ನಲ್ಲಿ ಮೈಸೂರಿನಲ್ಲಿ ನಡೆದ ಸೇನಾ ನೇಮಕಾತಿಯಲ್ಲಿ ಭಾಗ
ವಹಿಸಿ ಮೊದಲ ಸುತ್ತಿನಲ್ಲೇ ಆಯ್ಕೆಯಾದರು. ಬಳಿಕ ಜಮ್ಮುವಿನ ನುಡಂಪೂರಿನಲ್ಲಿ ತರಬೇತಿ ಪಡೆದು, ಅಲ್ಲೇ ಸೇನೆಗೆ ನಿಯೋಜನೆಗೊಂಡರು. ಆ ಬಳಿಕ ಪಶ್ಚಿಮ ಬಂಗಾಲ, ಮಿಜೋರಾಂ, ಅಸ್ಸಾಂಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಈಗ ಐದು ವರ್ಷಗಳಿಂದ ಗುಜರಾತಿನ ಗಾಂಧಿನಗರದಲ್ಲಿದ್ದಾರೆ.

ಉಗ್ರರ ಜತೆ ಸೆಣಸಾಟದ ನೆನಪು
2004ರ ಆಗಸ್ಟ್‌  14ರಂದು ಜಮ್ಮು-ಕಾಶ್ಮೀರದಲ್ಲಿ ನಡೆದ ಘಟನೆ. ಶಿಬಿರದಲ್ಲಿದ್ದಾಗ ರಾತ್ರಿ ಸುಮಾರು 11 ಗಂಟೆ ವೇಳೆಗೆ ಉಗ್ರರು ಹಠಾತ್ತನೆ ಗುಂಡಿನ ದಾಳಿ ಆರಂಭಿಸಿದರು. ನಾವು ತತ್‌ಕ್ಷಣ ಪ್ರತಿದಾಳಿ ನಡೆಸಿದೆವು. ಸುತ್ತಲೂ ಪೂರ್ತಿ ಕತ್ತಲು, ಏನೂ ಕಾಣಿಸುತ್ತಿರಲಿಲ್ಲ. ಕೇವಲ ಗುಂಡು ಸಿಡಿಯುವುದು ಮಾತ್ರ ಕಾಣಿಸುತ್ತಿತ್ತು. ನಾವು ಸುಮಾರು 20 ಮಂದಿ ಯೋಧರಿದ್ದೆವು. ಒಂದೂವರೆ ಗಂಟೆ ಕಾಲ ಗುಂಡಿನ ಚಕಮಕಿ ನಡೆಯಿತು. ಉಗ್ರರು ಕೊನೆಗೆ ಪಲಾಯನ ಹೂಡಿದರು – ಇದು ವಸಂತ ಅಮೀನ್‌ ಅವರ ರಣಾಂಗಣದ ನೆನಪು.
ಮತ್ತೂಂದು ಘಟನೆ 2018ರದು. ನವೆಂಬರ್‌ ತಿಂಗಳಿನಲ್ಲಿ ಛತ್ತೀಸ್‌ಗಢದಲ್ಲಿ ಚುನಾವಣಾ ಕರ್ತವ್ಯ ದಲ್ಲಿದ್ದೆವು. ಅಲ್ಲಿನ ಕಾಂಚೇರ್‌ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಮ್ಮನ್ನು ನಿಯೋಜಿಸಲಾಗಿತ್ತು. ನದಿ ಸಮೀಪದ ಅದು ನಕ್ಸಲ್‌ ಬಾಧಿತ ಪ್ರದೇಶ. ಬೆಳಗ್ಗೆ ನಾವು ಮತದಾನ ಕೇಂದ್ರಕ್ಕೆ ಹೋಗಬೇಕೆನ್ನುವಾಗ ನಕ್ಸಲರು ಬಾಂಬ್‌ ಸಿಡಿಸಿ ಗುಂಡಿನ ದಾಳಿ ನಡೆಸಿದರು. ನಾವು ಪ್ರತ್ಯುತ್ತರಿಸಿದೆವು. ಈ ವೇಳೆ ನಮ್ಮ ಕಮಾಂಡರ್‌ಗೆ ಗುಂಡು ತಗುಲಿ ನೆಲಕ್ಕುರುಳಿದರು. ಗುಂಡಿನ ದಾಳಿ ಮುಂದುವರಿದಿದ್ದುದರಿಂದ ಅವ ರನ್ನು ರಕ್ಷಿಸಲಾಗಲಿಲ್ಲ. ದಾಳಿ ನಿಂತಾಗ ಕಮಾಂಡರ್‌ ಹುತಾತ್ಮರಾಗಿದ್ದರು- ಈಗಲೂ ವಸಂತ ಅಮೀನರಿಗೆ ನೋವಾಗಿ ಕಾಡುವ ಘಟನೆಯಿದು. 

ನನಗೂ ಸೈನ್ಯಕ್ಕೆ ಸೇರಬೇಕೆಂದು ಆಸೆಯಾಗುತ್ತದೆ
ಯೋಧನ ಪತ್ನಿ ಎನ್ನುವುದಕ್ಕೆ ಹೆಮ್ಮೆಯಾಗುತ್ತಿದೆ. ಜನರು ಗೌರವದಿಂದ ಕಾಣುತ್ತಾರೆ, ಮಾತನಾಡು ತ್ತಾರೆ. ಆಗ ನಾನೂ ಸೇನೆಗೆ ಸೇರಿ ದೇಶ ಸೇವೆ ಮಾಡಬೇಕಿತ್ತು ಅನಿಸುತ್ತದೆ. ಮದುವೆಯಾಗಿ 10 ವರ್ಷ ಆಗುತ್ತಾ ಬಂತು. ಇದುವರೆಗೆ ಒಮ್ಮೆಯೂ ಪತಿಯ ಜತೆಯಲ್ಲಿ ಮಗಳು ತನ್ವಿಯ ಹುಟ್ಟುಹಬ್ಬ, ಮದುವೆ ವರ್ಷಾಚರಣೆ ಅಥವಾ ದೀಪಾವಳಿ ಆಚರಿಸಲಾಗಲಿಲ್ಲ. ಹುಟ್ಟುಹಬ್ಬ ಆಚರಿಸುವ ವೇಳೆ “ಡ್ಯಾಡಿ ಬರುವುದಿಲ್ಲವಾ’ ಎಂದು ಮಗಳು ಕೇಳುವಾಗ ಸ್ವಲ್ಪ ದುಃಖವಾಗುತ್ತದೆ.
– ರೋಶಿನಿ, ವಸಂತ ಅವರ ಪತ್ನಿ

ಜನ ಗೌರವವೇ ಹೆಮ್ಮೆ
ಶಾಲಾ ದಿನಗಳಿಂದಲೇ 
ಸೇನೆ ಸೇರುವ ಬಯಕೆ ಇತ್ತು. ಆದರೆ ದಾರಿ ತಿಳಿದಿರಲಿಲ್ಲ.ಬಡತನದಿಂದಾಗಿ ಶಿಕ್ಷಣ ವನ್ನು ಮೊಟುಕುಗೊಳಿಸಿ ಕುಲಕಸುಬು ಮಾಡುತ್ತಿದ್ದೆ. ಸೇನೆ ಸೇರುವ ಬಾಲ್ಯದ ಬಯಕೆ ನನ್ನ ಕೈ ಹಿಡಿಯಿತು. ಈಗ ನಾಲ್ಕು ಜನ ನನ್ನನ್ನು  ಗೌರವದಿಂದ ಕಾಣುತ್ತಾರೆ, ಅದೇ ನನಗೆ ಹೆಮ್ಮೆ.
-ವಸಂತ ಅಮೀನ್‌, ಭಾರತೀಯ ಯೋಧ

ಖುಷಿ ಮತ್ತು ಹೆದರಿಕೆ
ಮಗ ನಮ್ಮಿಂದ ದೂರ ಹೋಗಿ ಅಂತಹ ಕೆಲಸಕ್ಕೆ ಸೇರುವ ಬಗ್ಗೆ ಮೊದಲು ಅಸಮಾಧಾನವಿತ್ತು. ಈಗ ಸೈನಿಕನಾಗಿ ದೇಶ ಸೇವೆ ಮಾಡುತ್ತಿದ್ದಾನೆ ಎಂಬ ಬಗ್ಗೆ ಹೆಮ್ಮೆಯಿದೆ. ಜತೆಗೆ, ಕೆಲವು ಘಟನೆಗಳ ಬಗ್ಗೆ ಕೇಳುವಾಗ ಮಗ ಹೇಗಿದ್ದಾನೋ ಏನು ಮಾಡುತ್ತಿದ್ದಾನೋ ಎಂದು ಹೆದರಿಕೆಯೂ ಆಗುತ್ತದೆ.
– ಬೇಬಿ ಅಮೀನ್‌, ವಸಂತ ಅಮೀನರ ತಾಯಿ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.