ಮಾಳ-ಮುಳ್ಳೂರು ರಸ್ತೆಯಲ್ಲಿ ಅಪಾಯಕಾರಿ ತಿರುವು

 9 ಮಂದಿಯನ್ನು ಬಲಿ ಪಡೆದ ತಿರುವು ;ವಿಸ್ತರಣೆಗೆ ಅರಣ್ಯ ಇಲಾಖೆ ಅಡ್ಡಿ .ಎಚ್ಚರಿಕೆ ಅಗತ್ಯ

Team Udayavani, Feb 17, 2020, 5:22 AM IST

1602KKRAM6

ಕಾರ್ಕಳ: ಮಾಳದಲ್ಲಿ 9 ಮಂದಿಯನ್ನು ಬಲಿ ಪಡೆದ ಮಾಳ- ಮುಳ್ಳೂರು ರಸ್ತೆಯ ಅಪಾಯಕಾರಿ ತಿರುವು ಅಪಘಾತಗಳಿಂದಾಗಿ ಕುಖ್ಯಾತಿ ಪಡೆದಿದೆ.

ಮಂಗಳೂರು ಸೋಲಾಪುರ ರಾ.ಹೆ. 169ರ ಮಾಳ ಮುಳ್ಳೂರು ಚೆಕ್‌ಪೋಸ್ಟ್‌ ನಿಂದ ಶೃಂಗೇರಿ ಹಾಗೂ ಕುದುರೆಮುಖ ರಸ್ತೆ ತಿರುವು- ಮುರುವಾಗಿದ್ದು ತೀರ ಅಪಾಯಕಾರಿಯಾಗಿದೆ. ಇಲ್ಲಿ ಪ್ರವಾಸಿ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತವೆ. ಅತಿ ವೇಗದಲ್ಲಿ, ತಿರುವಿನಲ್ಲಿ ಬಂದಾಗ ಅಪಘಾತಕ್ಕೆ ಕಾರಣವಾಗುತ್ತಿದೆ.

ಶನಿವಾರ ಘಟನೆಗೂ ಮುನ್ನ ಅಂದರೆ 2017ರಲ್ಲಿ ಇಲ್ಲಿ ಬಸ್ಸೊಂದು ಅಪಘಾತ ಕ್ಕೀಡಾಗಿದ್ದು ಮೂವರು ಸಾವಿಗೀಡಾ ಗಿದ್ದರು. 2016ರಲ್ಲೂ ಇಲ್ಲಿ ಶಾಲಾ ಪ್ರವಾಸಿ ಟೆಂಪೋ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಮಗುಚಿ ಬಿದ್ದಿತ್ತು.

ಈ ಹಿಂದೆಯೂ ಅಪಘಾತ
ಇದೇ ಪರಿಸರದಲ್ಲಿ ಮೈಸೂರಿನಿಂದ ಕುದುರೆ ಮುಖವಾಗಿ ಮಂಗಳೂರು ಸಾಗುತ್ತಿದ್ದ ಟೂರಿಸ್ಟ್‌ ಬಸ್‌ ಶನಿವಾರ ಧರೆ ಬದಿಯ ಬಂಡೆ ಗಲ್ಲಿಗೆ ಢಿಕ್ಕಿ ಹೊಡೆದ ಪರಿಣಾಮ 9 ಮಂದಿ ಸಾವಿ ಗೀಡಾ ಗಿದ್ದರು. 2017ರಲ್ಲಿ ಖಾಸಗಿ ಬಸ್ಸೊಂದು ಅಪಘಾತಕ್ಕೀಡಾಗಿ ಮೂವರು ಮೃತಪಟ್ಟ ದುರಂತ ಇದೇ ಪರಿಸರದಲ್ಲಿ ನಡೆದಿತ್ತು. 2016ರಲ್ಲಿ ಶಾಲಾ ಪ್ರವಾಸದ ಟೆಂಪೋ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಮಗುಚಿ ಬಿದ್ದು ಶಿಕ್ಷಕ ಸಾವನ್ನಪ್ಪಿದ್ದರು. ಸಣ್ಣಪುಟ್ಟ ಅವಘಡ, ಅಪಘಾತಗಳು ಈ ಪ್ರದೇಶದಲ್ಲಿ ಘಟಿಸುತ್ತಲೇ ಇದೆ.

ರಸ್ತೆ ವಿಸ್ತರೀಕರಣವಾಗಲಿ
ಕಿರಿದಾಗಿರುವ ರಸ್ತೆ ವಿಸ್ತರೀಕರಣ ವಾದಲ್ಲಿ ಅಪಘಾತ ಪ್ರಮಾಣ ಕಡಿಮೆ ಯಾಗಬಹುದೆನ್ನುವುದು ಸ್ಥಳೀಯರ ಅಭಿಪ್ರಾಯ. ವನ್ಯಜೀವಿ ಸಂರಕ್ಷಿತ ಪ್ರದೇಶವಾದ ಕಾರಣ ಅರಣ್ಯ ಇಲಾಖೆ ರಸ್ತೆ ವಿಸ್ತರೀಕರಣಕ್ಕೆ ಅಡ್ಡಿಯಾಗಿದೆ. ಕಾನೂನು ತೊಡಕು ನಿವಾರಿಸಿ, ರಸ್ತೆ ಅಭಿವೃದ್ಧಿಪಡಿಸಬೇಕೆನ್ನುವುದು ಸಾರ್ವಜನಿಕರ ಅಭಿಪ್ರಾಯ.

ಸೂಚನ ಫ‌ಲಕ ಬೇಕು
ರಸ್ತೆ ತಿರುವು ಮುರುವು, ಅಪಾಯಕಾರಿ ಕುರಿತು ಅಲ್ಲಲ್ಲಿ ಸೂಚನ ಫ‌ಲಕ, ರಿಫ್ಲೆಕ್ಟರ್‌ಗಳನ್ನು ಅಳವಡಿಸಬೇಕೆಂಬ ಬೇಡಿಕೆಯೂ ಕೇಳಿಬರುತ್ತಿದೆ. ಇದರಿಂದ ವಾಹನ ಚಾಲಕರು ತುಸು ಎಚ್ಚರಿಕೆ ವಹಿಸಿ, ವಾಹನ ಚಾಲನೆ ಮಾಡುವಂತಾಗಲಿದೆ.

ಅಜಾಗರೂಕತೆಯೇ ಪ್ರಮುಖ ಕಾರಣ
ರಸ್ತೆ ಅಪಘಾತಕ್ಕೆ ಅಜಾಗರೂಕತೆ, ಅತಿ ವೇಗದ ಚಾಲನೆಯೇ ಪ್ರಮುಖ ಕಾರಣವೆನ್ನಲಾಗುತ್ತಿದೆ. ಫೆ. 15ರಂದು ಮುಳ್ಳೂರಿನ ನಡೆದ ಘಟನೆಗೂ ಬಸ್‌ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಹೇಳಲಾಗುತ್ತಿದೆ.

ಅಗಲೀಕರಣಕ್ಕೆ ಮನವಿ
ಮಾಳ-ಮುಳ್ಳೂರು ರಸ್ತೆ ತೀರಾ ಕಿರಿದಾಗಿದ್ದು, ತಿರುವಿನಿಂದ ಕೂಡಿದೆ. ಇದರಿಂದಾಗಿ ಎದುರು ಭಾಗದಿಂದ ಬರುವ ವಾಹನಗಳು ಗೊತ್ತಾಗುವುದು ಕಷ್ಟಕರ. ರಸ್ತೆ ಅಗಲೀಕರಣಗೊಳಿಸಿ, ಸೂಚಕ ಫ‌ಲಕ ಅಳವಡಿಸುವುದು ಅಗತ್ಯ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಮನವಿ ನೀಡಲಾಗುವುದು.
-ಅಜಿತ್‌ ಕುಮಾರ್‌ ಹೆಗ್ಡೆ
ಅಧ್ಯಕ್ಷರು, ಗ್ರಾ.ಪಂ. ಮಾಳ

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.