ಸಾಲ ಮುಗಿಯುವ ಮುನ್ನ ಕುಸಿಯುತ್ತಿರುವ ಮನೆ


Team Udayavani, Jun 21, 2019, 9:21 AM IST

udupi-tdy-1..

ಮಂಚಿಕೆರೆ ಪಾಂಡವರ ಗುಹೆ

ಉಡುಪಿ, ಜೂ. 20: ಮಣಿಪಾಲ ಸಮೀಪದ 80 ಬಡಗುಬೆಟ್ಟು ಗ್ರಾಪಂ ವ್ಯಾಪ್ತಿಯ ಮಣಿಪಾಲ- ಅಲೆವೂರು ರಸ್ತೆಯ ಮಂಚಿಕೆರೆಯ ನಾಗಬ್ರಹ್ಮಸ್ಥಾನದ ಎದುರಿನ ಎರಡನೇ ಅಡ್ಡರಸ್ತೆಯ ಭೂಮಿಯಲ್ಲಿ 5 ವರ್ಷಗಳ ಹಿಂದೆ ಕಂಡು ಬಂದಿರುವ ಬಿರುಕು ಇದೀಗ ಇನ್ನಷ್ಟು ಹಿರಿದಾಗಿದ್ದು, ಸ್ಥಳೀಯ ನಿವಾಸಿಗಳ ಮನೆ ಕುಸಿಯುವ ಭೀತಿಯಲ್ಲಿದೆ.

ಬಿರುಕಿನ ಗಾತ್ರ ಹಿಗ್ಗಿದೆ:

ಪರಿಸರದಲ್ಲಿ ಸುಮಾರು 200- 250 ಮನೆಗಳಿವೆ. 2014ರ ಈ ಪ್ರದೇಶದಲ್ಲಿ ಭೂಮಿ ಬಿರುಕು ಬಿಟ್ಟಿರುವ ವಿಚಾರ ಸ್ಥಳೀಯರ ಗಮನಕ್ಕೆ ಬಂದಿದ್ದು, ಆಗ ಸುಮಾರು 100 ಮೀ. ಉದ್ದದವರೆಗೆ ಭೂಮಿ ಬಾಯ್ದೆರೆದಿತ್ತು. ಇದೀಗ ಮಂಗಳವಾರ ಬಿರುಕಿನ ಅಗಲ ಮಾತ್ರವಲ್ಲದೆ ಉದ್ದ ಕೂಡ ಹೆಚ್ಚಾಗಿದೆ. ಕಾಲೋನಿಯ ಡಾಮರು ರಸ್ತೆಯಲ್ಲಿರುವ ಬಿರುಕು ದೊಡ್ಡಾಗಿದ್ದು, ಮಳೆಯ ನೀರು ಹರಿದು ಬಂದು ಈ ಬಿರುಕಿನೊಳಗೆ ಸೇರುತ್ತಿದೆ.

15 ಲ.ರೂ., ಮನೆ ಸಾಲ!:

1991ರಲ್ಲಿ ಬ್ಯಾಂಕ್‌ನಿಂದ ಸುಮಾರು 15 ಲ.ರೂ., ಸಾಲ ಮಾಡಿ ರಮೇಶ್‌ ನಾಯಕ್‌ ಅವರು ಮನೆ ನಿರ್ಮಾಣ ಮಾಡಿದರು. ಇನ್ನೂ 8 ಲ.ರೂ. ಸಾಲ ತೀರಿಸಲು ಬಾಕಿಯಿದ್ದು ಪ್ರತಿ ತಿಂಗಳು ಕಂತು ಕಟ್ಟುತ್ತಿದ್ದಾರೆ. ಕಳೆದ ಬಾರಿ ಭೂ ಕುಸಿತದಿಂದ ಭಯಗೊಳ್ಳದ ರಮೇಶ್‌ ಈ ಬಾರಿ ಬಿರುಕು ಇನ್ನಷ್ಟು ಹಿರಿದಾಗಿರುವುದು ಅವರನ್ನು ಚಿಂತೆಗೆ ನೂಕಿದೆ. ಅಧಿಕಾರಿಗಳು ಅವರ ಕುಟುಂಬವನ್ನು ಸದ್ಯಕ್ಕೆ ಗಂಜಿ ಕೇಂದ್ರಕ್ಕೆ ಸ್ಥಳಾಂತರ ಮಾಡುವಂತೆ ಮನವಿ ಮಾಡಿದ್ದಾರೆ. ಆದರೆ ರಮೇಶ್‌ ಅವರು ಅಧಿಕಾರಿಗಳ ಮನವಿ ಒಪ್ಪುತ್ತಿಲ್ಲ.

ಬಿರುಕು ಹೆಚ್ಚಾಗುವ ಸಾಧ್ಯತೆ !:

ಹವಾಮಾನ ಇಲಾಖೆ ವರದಿ ಪ್ರಕಾರ ಮುಂದಿನ 4 ದಿನದಲ್ಲಿ ಮಳೆ ಹೆಚ್ಚಾಗಲಿದ್ದು ಇದರಿಂದ ಭೂಮಿಯ ಬಿರುಕು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಅಧಿಕಾರಿಗಳು ಹೇಳುವ ಪ್ರಕಾರ ಮಳೆಯ ನೀರು ಭೂಮಿ ಒಳಗೆ ಇಂಗಿದಾಗ ಮುರಕಲ್ಲಿನ ಅಡಿಭಾಗದಲ್ಲಿರುವ ಮೃದುವಾದ ಜೇಡಿ ಮಣ್ಣು ಮಳೆಯ ನೀರಿನಲ್ಲಿ ನಿಧಾನವಾಗಿ ಕೊಚ್ಚಿಕೊಂಡು ಹೋಗುವುದರಿಂದ ಮೇಲ್ಭಾಗದಲ್ಲಿರುವ ಸಡಿಲವಾದ ರಚನೆಯಲ್ಲಿ ಬಿರುಕು ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

ವಿಚಿತ್ರವೆನಿಸುವ ಘಟನೆಗಳು !:

ಸಂಪೂರ್ಣ ಮುರಕಲ್ಲಿನಿಂದ ಕೂಡಿದ ಮಂಚಿಕೆರೆ ನಾಲ್ಕು ದಿಕ್ಕಿನಲ್ಲಿ ಗುಹೆಗಳಿವೆ. ಉತ್ತರದಲ್ಲಿ ಪಾಂಡವರ ಗುಹೆ, ಪಶ್ಚಿಮದಲ್ಲಿ ದುಗ್ಗಿ ಪದವು ಗುಹೆ, ಪೂರ್ವದಲ್ಲಿ ಮಣ್ಣಪಳ್ಳ ಗುಹೆ, ದಕ್ಷಿಣದಲ್ಲಿ ಪ್ರಗತಿನಗರ ಗುಹೆಗಳಿವೆ. ಮಂಚಿಕೆರೆ ಭೂ ಕುಸಿತ ವಕ್ರವಾಗಿ ಹೋಗಿರುವುದರಿಂದ ಇಲ್ಲಿನ ಗುಹೆಗೂ ಬಿರುಕಿಗೂ ಸಂಬಂಧವಿದೆ. ಅಲ್ಲದೆ ಬಿರುಕು ಕಾಣಿಸಿಕೊಂಡ ಮೂರು ತಿಂಗಳಲ್ಲಿ ಕೆಳಪರ್ಕಳದಲ್ಲಿ ಕಡು ಬೇಸಿಗೆಯಲ್ಲಿ ನೀರುಕ್ಕಿ ಹರಿದು ತೊರೆ, ಬಾವಿಗಳು ತುಂಬಿದ್ದವು. ಅಲ್ಲಿನ ಅಂತರ್ಜಲದ ಒರೆತಕ್ಕೂ ಮಂಚಿಕೆರೆಯ ಭೂಮಿ ಬಿರುಕಿಗೂ ನಂಟಿರಬಹುದು ಮತ್ತು ಭೂಮಿಯೊಳಗೆ ಸಣ್ಣಪ್ರಮಾಣದ ಭೂಕಂಪನದಿಂದ ಆಗಿರುವ ಪ್ರಕ್ರಿಯೆ ಎಂಬುದಾಗಿ 2014ರಲ್ಲಿ ಸ್ಥಳಕ್ಕೆ ಆಗಮಿಸಿ ಅಧ್ಯಯನ ನಡೆಸಿದ್ದ ಖಾಸಗಿ ಭೂಗರ್ಭ ತಜ್ಞರ ತಂಡ ಅಭಿಪ್ರಾಯಪಟ್ಟಿತ್ತು.

ದೊಡ್ಡಮಟ್ಟದ ಸಂಶೋಧನೆ ಅಗತ್ಯ:

ನಾಲ್ಕು ದಿಕ್ಕಿನಲ್ಲಿರುವ ಗುಹೆಯಿಂದ ಈ ಬಿರುಕು ಬಿಟ್ಟಿರಬಹುದು ಎಂಬುದನ್ನು ನಾವು ತತ್‌ಕ್ಷಣ ಹೇಳಲು ಆಗಲ್ಲ. ಅದಕ್ಕೆ ಸಂಬಂಧಿಸಿದ ಸೂಚನೆ ಬೇಕಾಗುತ್ತದೆ. ದೊಡ್ಡ ಮಟ್ಟದಲ್ಲಿ ಸಂಶೋಧನೆ ಮಾಡಿದ ಅನಂತರ ಹೇಳಬಹುದು. ಮೇಲ್ನೋಟಕ್ಕೆ ಭೂ ಕುಸಿತ ಸಾಮಾನ್ಯ ಪ್ರಕ್ರಿಯೆ. ದೊಡ್ಡ ಮಟ್ಟದ ಸಂಶೋಧನೆ ಮಾಡುವಷ್ಟು ಗಂಭೀರ ಸಮಸ್ಯೆ ಇಲ್ಲ ಎನ್ನುವುದಾಗಿ ಬುಧವಾರ ಅಧ್ಯಯನ ನಡೆಸಿದ ತಂಡ ಅಭಿಪ್ರಾಯಪಟ್ಟಿದೆ.

ಹಾನಿಯಾದ ಪ್ರದೇಶ:

ರಮೇಶ್‌ ನಾಯಕ್‌ ಅವರ ಮನೆಯ ಗೋಡೆ, ಬಾವಿ, ಆವರಣ ಗೋಡೆಗಳಲ್ಲಿ ನ ಬಿರುಕಿನ ಗಾತ್ರ ಹೆಚ್ಚಾಗಿದೆ. ಇನ್ನೂ ಲೋಕೇಶ್‌ ದೇವಾಡಿಗ ಮನೆಯ ಆವರಣ ಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಕಳೆದ ಬಾರಿ ಬಿರುಕು ಕಾಣಿಸಿಕೊಂಡ ಶಂಭು ಅವರ ಬಾವಿಯನ್ನು ಕಲ್ಲು ಹಾಕಿ ಮುಚ್ಚಲಾಗಿದೆ.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.