ಕಲ್ಲಂಗಡಿ ಬೆಳೆಗೆ ಆಧುನಿಕ ಕೃಷಿ ಪದ್ಧತಿ ಬಳಸಿ ಲಾಭ ಪಡೆದ ಕೃಷಿಕ


Team Udayavani, Apr 18, 2018, 6:00 AM IST

050418hbre1a.jpg

ಹೆಬ್ರಿ: ಬಿಸಿಲ ಬೇಗೆಗೆ ಮೊದಲ ಆಯ್ಕೆ ಕಲ್ಲಂಗಡಿ ಹಣ್ಣು. ಸಾಕಷ್ಟು ಬೇಡಿಕೆಯೂ ಇದೆ. ಕಲ್ಲಂಗಡಿಯನ್ನು ಆಧುನಿಕ ಕೃಷಿ ಪದ್ಧತಿಯಲ್ಲಿ ಬೆಳೆದು ಬಂಪರ್‌ ಬೆಳೆ ತೆಗೆದ ಸಾಧನೆ ಉಡುಪಿ ತಾಲೂಕಿನ ಹಿರಿಯಡಕದ ಬೊಮ್ಮರಬೆಟ್ಟಿನ ಕೃಷಿಕ ಸುರೇಶ್‌ ನಾಯಕ್‌ರದ್ದು.  

ಪ್ರಗತಿಪರ ಕೃಷಿಕರಾಗಿ ಗುರುತಿಸಿಕೊಂಡಿರುವ ಸುರೇಶ್‌ ಹಿರಿಯಡಕದಿಂದ ಹರಿಖಂಡಿಗೆಗೆ ಹೋಗುವ ರಸ್ತೆಯ ಸಮೀಪ ಮಾಣೈ ಎಂಬಲ್ಲಿ ಸುಮಾರು 5 ಎಕ್ರೆ ಗದ್ದೆಯಲ್ಲಿ ಕಳೆದ 6ವರ್ಷಗಳಿಂದ ಕಲ್ಲಂಗಡಿ ಹಣ್ಣು ಬೆಳೆಯುತ್ತಿದ್ದಾರೆ. ಈ ಬಾರಿ ಆಧುನಿಕ ಪದ್ಧತಿ ಮೂಲಕ ಫ‌ಸಲು ಪಡೆದಿದ್ದಾರೆ.  

ಇಸ್ರೇಲ್‌ನ ತಂತ್ರಜ್ಞಾನ
ಜನವರಿಯಲ್ಲಿ ಚಿಕ್ಕಮಗಳೂರಿನ ಕಡೂರಿನಿಂದ ಕಲ್ಲಂಗಡಿ ಬೀಜ ತಂದು ಬಿತ್ತನೆ ಮಾಡಿದ್ದರು. ಬಳಿಕ ಗದ್ದೆಯಲ್ಲಿ ಇರುವ ಕ್ರಿಮಿ ಕೀಟಗಳು, ನವಿಲುಗಳಿಂದ, ಸೂರ್ಯನ ಶಾಖದಿಂದ ತೊಂದರೆ ಆಗದಂತೆ ಇಸ್ರೇಲ್‌ನ ಗ್ರೋ ಕವರ್‌ ತಂತ್ರಜ್ಞಾನ ಬಳಸಿ ಯಶಸ್ಸನ್ನು ಕಂಡಿದ್ದಾರೆ. ಇದರಿಂದ ಹಣ್ಣುಗಳಿಗೆ ಹಾನಿಯಾಗಿಲ್ಲ. ಕಲ್ಲಂಗಡಿ ಹಣ್ಣಿನ ಗಿಡಗಳಿಗೆ ಕಾಲ ಕಾಲಕ್ಕೆ ಕ್ರಿಮಿನಾಶಕಗಳನ್ನು ಅಲ್ಪ ಪ್ರಮಾಣದಲ್ಲಿ ಸಿಂಪಡಿಸಿದ್ದು  ಅಗತ್ಯಕ್ಕೆ ತಕ್ಕಷ್ಟು ನೀರನ್ನೂ ಆಧುನಿಕ ಪದ್ಧತಿಯಲ್ಲೇ ನೀಡಿದ್ದಾರೆ. 
 
ಆಧುನಿಕ ಯಂತ್ರ ಬಳಕೆ 
ಕೂಲಿಯಾಳುಗಳ ಸಮಸ್ಯೆಯನ್ನು ಸುರೇಶ್‌ ಅವರೂ ವ್ಯಾಪಕವಾಗಿ ಎದುರಿಸುತ್ತಿದ್ದಾರೆ. ಹಿನ್ನೆಲೆಯಲ್ಲಿ ಅವರು ಹಿಂದಿನಿಂದಲೂ ಆಧುನಿಕ ಯಂತ್ರಗಳನ್ನು ಕೃಷಿಗೆ ಬಳಸುತ್ತಾರೆ.  ಕಳೆದ ಬಾರಿ ಭತ್ತದ ನಾಟಿಯನ್ನು ಟ್ರೇ ವಿಧಾನದಲ್ಲಿ ಮಾಡಿದ್ದು ಕೃಷಿಕರ ಗಮನ ಸೆಳೆದಿದ್ದರು.  ಈಗಲೂ ಅವರು ಯಂತ್ರೋಪಕರಣಗಳು, ಆಧುನಿಕ ಕೃಷಿ ವಿಧಾನಗಳನ್ನು ನೆಚ್ಚಿಕೊಂಡಿದ್ದು, ಹೆಚ್ಚಿನ  ಲಾಭ ಪಡೆಯಲು ಕಾರಣವಾಗಿದೆ. 

ಎಕರೆಗೆ 40 ಸಾವಿರ ರೂ. ಲಾಭ
ಕಟಾವಿಗೆ ಬಂದ ಕೆಲವೊಂದು ಹಣ್ಣುಗಳು 15 ಕೆ.ಜಿ ಗೂ ಅಧಿಕ ತೂಕ ಹೊಂದಿದೆ. ಸುಮಾರು 5 ಎಕ್ರೆ ಜಾಗದಲ್ಲಿ ಬೆಳೆ ಬೆಳೆದಿದ್ದು, ಎಕ್ರೆ ಒಂದಕ್ಕೆ ಸುಮಾರು 40 ಸಾವಿರ ರೂ.ವರೆಗೆ ಲಾಭ ಪಡೆದಿದ್ದಾರೆ. ಮಾರುಕಟ್ಟೆಯಲ್ಲಿ ಕಲ್ಲಂಗಡಿ ಹಣ್ಣು ಕೆ.ಜಿಗೆ ಸುಮಾರು 20 ರೂ ಇದ್ದು, ಮಧ್ಯವರ್ತಿಗಳ ಮೂಲಕ ಜಿಲ್ಲೆಯ ವಿವಿಧ ಮಾರುಕಟ್ಟೆಗೆ ಹಾಗೂ ದೂರದ ಕೇರಳ ಹಾಗೂ ಮುಂಬೈ ನಗರಗಳಿಗೆ ಮಾರಾಟ ಮಾಡುತ್ತಿದ್ದಾರೆ. ಕಲ್ಲಂಗಡಿಯೊಂದಿಗೆ ಮುಳ್ಳುಸೌತೆ ಹಾಗೂ ಇತರ ತರಕಾರಿಗಳನ್ನೂ ಬೆಳೆದಿದ್ದು, ಉತ್ತಮ ಫ‌ಸಲು ಬಂದಿದೆ. 

ಉತ್ತಮ ಲಾಭ ಬಂದಿದೆ
ಪ್ರತಿಯೊಬ್ಬರು ಕೂಡ ಆಧುನಿಕ ತಂತ್ರಜ್ಞಾನವನ್ನು ಬಳಸಿ ಯಾವುದೇ ನಷ್ಟವಾಗದಂತೆ ಕಲ್ಲಂಗಡಿ ಹಣ್ಣನ್ನು ಬೆಳೆಯಬಹುದು. ಈ ಬಾರಿ ಹೊಸ ಮಾದರಿಯ ತಂತ್ರಜ್ಞಾನದಿಂದ ನನಗೆ ಉತ್ತಮ ಫಸಲಿನೊಂದಿಗೆ ಹೆಚ್ಚಿನ ಲಾಭಬಂದಿದೆ.
– ಸುರೇಶ್‌ ನಾಯಕ್‌, 
ಕೃಷಿಕರು, ಬೊಮ್ಮರಬೆಟ್ಟು

– ಉದಯ ಕುಮಾರ್‌ ಶೆಟ್ಟಿ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.