65ರ ಹರೆಯದಲ್ಲಿಯೂ ಕೃಷಿಯಲ್ಲಿ ನಿರತರಾಗಿ ಮಾದರಿಯಾದ ರೈತ

ನಿಂಜೂರು ಬಾಗನ್‌ಬೆಟ್ಟು ಸುಬ್ಬಯ್ಯ ಶೆಟ್ಟಿ ಅವರ ಕೃಷಿ ಯಶೋಗಾಥೆ

Team Udayavani, Dec 21, 2019, 4:25 AM IST

dc-9

ಹೆಸರು : ಸುಬ್ಬಯ್ಯ ಶೆಟ್ಟಿ
ಏನೇನು ಕೃಷಿ: ಅಡಿಕೆ, ತೆಂಗು, ತರಕಾರಿ ಬೆಳೆ
ಎಷ್ಟು ವರ್ಷ : 55
ಕೃಷಿ ಪ್ರದೇಶ : 9 ಎಕ್ರೆ

ನಾವು ಅದೆಷ್ಟು ಆಧುನಿಕಗೊಂಡರೂ ಉಣ್ಣುವ ಅನ್ನವನ್ನು ಸೃಷ್ಟಿಸಲಾರೆವು; ಆದ್ದರಿಂದಲೇ ಭೂಮಿ ಜತೆಗೆ ಒಡನಾಡುವ ಕೃಷಿಗೆ ಮಹತ್ವದ ಸ್ಥಾನ. ಇದೇ ಹಿನ್ನೆಲೆಯಲ್ಲಿ ಉದಯವಾಣಿಯು ಕಿಸಾನ್‌ ದಿನಾಚರಣೆಯ ಸಂದರ್ಭ ರೈತರ ಸಾಧನೆಯ ಚಿತ್ರಣ ನೀಡುವ “ಕೃಷಿ ಕಥನ’ವನ್ನು ಆರಂಭಿಸಿದೆ. ಈ ಹೊಸ ಸರಣಿಯು ಇನ್ನಷ್ಟು ಮಂದಿಗೆ ಪ್ರೇರಣೆಯಾಗಲೆಂದು ಸರಕಾರದಿಂದ ಪ್ರಶಸ್ತಿ ಪುರಸ್ಕಾರಗಳಿಂದ ಗುರುತಿಸಲ್ಪಟ್ಟ ರೈತರನ್ನು ಪರಿಚಯಿಸುವ ಪ್ರಯತ್ನ.

ಪಳ್ಳಿ: ಭಾರತೀಯ ಸಂಸ್ಕೃತಿಯಲ್ಲಿ ಕೃಷಿಗೆ ಮಹತ್ತರವಾದ ಸ್ಥಾನವಿದೆ. ಹಿಂದಿನ ಕಾಲದಲ್ಲಿ ಕೃಷಿಯಲ್ಲದೆ ಪರ್ಯಾಯ ವ್ಯವಸ್ಥೆಯಿಲ್ಲದೆ ಪ್ರತಿಯೊಬ್ಬರೂ ಕೃಷಿ ಕಾರ್ಯದಲ್ಲಿ ಪಾಲ್ಗೊಳ್ಳುವುದು ಅನಿವಾರ್ಯವಾದ್ದರಿಂದ ಸಾವಿರಾರು ಕುಟುಂಬಗಳು ಭತ್ತದ ಕೃಷಿಯನ್ನೇ ಅವಲಂಬಿಸಿ ಶತಮಾನಗಳ ಕಾಲ ಜೀವನ ನಡೆಸುತ್ತಾ ಬಂದಿದ್ದವು. ಅನಂತರದ ದಿನಗಳಲ್ಲಿ ಲಾಭದ ಉದ್ದೇಶದೊಂದಿಗೆ ಪಟ್ಟಣಗಳತ್ತ ಮುಖಮಾಡಿದ ಯುವಕರು ಕೃಷಿಯಲ್ಲಿ ತೊಡಗಿಸಿಕೊಳ್ಳದೆ ಕೃಷಿ ಭೂಮಿಗಳು ಹಡಿಲು ಬೀಳುತ್ತಿರುವ ಸಂದರ್ಭ ಸುಬ್ಬಯ್ಯ ಶೆಟ್ಟಿ ಅವರು ತಮ್ಮ 7ನೇ ವರ್ಷ ವಯಸ್ಸಿನಿಂದಲೇ ತಂದೆ ಬೊರ್ಗ ಶೆಟ್ಟಿ ಅವರ ಜತೆ ಕೃಷಿ ಕಾರ್ಯದಲ್ಲಿ ಸೇರಿ ನಿರಂತರ 55 ವರ್ಷಗಳಿಂದ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.

ಪಳ್ಳಿ ಗ್ರಾಮದ ನಿಂಜೂರು ಬಾಗನ್‌ಬೆಟ್ಟು ಸುಬ್ಬಯ್ಯ ಶೆಟ್ಟಿ ಅವರು ಇಂದಿಗೂ ಸಹ ಸುಮಾರು 9 ಎಕ್ರೆ ಪ್ರದೇಶದಲ್ಲಿ ಭತ್ತದ ಎರಡು ಬೆಳೆ ಬೆಳೆದು ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ. ಸುಮಾರು 9 ಎಕ್ರೆ ಕೃಷಿ ಭೂಮಿಯನ್ನು ಹೊಂದಿರುವ ಇವರು ಎಕ್ರೆ ಪ್ರದೇಶದಲ್ಲಿ 100 ಅಡಿಕೆ, 100 ತೆಂಗು, ಜತೆಗೆ ತರಕಾರಿ ಬೆಳೆ ಬೆಳೆದು ಪ್ರಗತಿಪರ ಕೃಷಿಕರಾಗಿ ದುಡಿಯುತ್ತಿದ್ದು 2018ನೇ ಸಾಲಿನಲ್ಲಿ ಜಿಲ್ಲಾ ಉತ್ತಮ ಕೃಷಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಎಕರೆಗೆ 140 ಕ್ವಿಂಟಾಲ್‌ ಭತ್ತದ ಫ‌ಸಲು
ಪ್ರತಿ ಎಕರೆಗೆ ಸುಮಾರು 140 ಕ್ವಿಂಟಾಲ್‌ ಭತ್ತದ ಫ‌ಸಲು ಪಡೆಯುವ ಇವರು ಭತ್ತದ ಕೃಷಿಯಿಂದಲೂ ಸಾಕಷ್ಟು ಲಾಭ ಗಳಿಸಬಹುದು ಎಂದು ತೋರಿಸಿಕೊಟ್ಟಿದ್ದಾರೆ. ಅಲ್ಲದೆ ವಿವಿಧ ತರಕಾರಿಗಳಾದ ಬೆಂಡೆ, ಅಲಸಂಡೆ, ಹೀರೇಕಾಯಿ, ಬೂದುಗುಂಬಳ ಬೆಳೆದು ಲಾಭ ಪಡೆಯುತ್ತಿದ್ದಾರೆ. ಅಡಿಕೆ, ತೆಂಗುಗಳಲ್ಲಿಯೂ ಅಧಿಕ ಲಾಭ ಗಳಿಸುತ್ತಿದ್ದಾರೆ. ಕೊಳವೆಬಾವಿ ಕೊರೆಸದೆ ಎರಡು ಬಾವಿಗಳ ಮೂಲಕವೇ ಕೃಷಿಗೆ ನೀರನ್ನು ಬಳಸುತ್ತಿದ್ದಾರೆ. ಇವರು ಭತ್ತದಲ್ಲಿ ಕಾರ್ತಿ ಮತ್ತು ಸುಗ್ಗಿ ಬೆಳೆ ಬೆಳೆಯುತ್ತಾರೆ.

ಹೈನುಗಾರಿಕೆ
ಕೃಷಿಗೆ ಪೂರಕವಾಗಿ ಹೈನುಗಾರಿಕೆಯು ಅತ್ಯಗತ್ಯ ಎಂದು ಮನಗಂಡ ಇವರು ದಶಕಗಳಿಂದ ಹೈನುಗಾರಿಕೆಯಲ್ಲಿಯೂ ತೊಡಗಿಕೊಂಡಿದ್ದಾರೆ. 8 ಜೆರ್ಸಿ ದನಗಳನ್ನು ಸಾಕುತ್ತಿರುವ ಇವರು ಪ್ರತಿ ದಿನ ಸರಾಸರಿ 35ಲೀ.ಗೂ ಅಧಿಕ ಹಾಲನ್ನು ಸಂಘಕ್ಕೆ ನೀಡುತ್ತಿದ್ದಾರೆ. ನಿಂಜೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅವರು ಹೆಚ್ಚಾಗಿ ಕೃಷಿಗೆ ಸುಣ್ಣ, ಹಟ್ಟಿ ಗೊಬ್ಬರ, ಸುಡುಮಣ್ಣುಗಳನ್ನೇ ಹೆಚ್ಚಾಗಿ ಬಳಸುತ್ತಿದ್ದು, ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ.ಪತ್ನಿ ಇವರ ಕೃಷಿ ಚಟುವಟಿಕೆಗೆ ಸಾಥ್‌ ನೀಡುತ್ತಿದ್ದಾರೆ.

ಕೃಷಿ ಸಮಸ್ಯೆಗಳು
ಕೃಷಿಯಲ್ಲಿ ಮಿಶ್ರ ಬೆಳೆಯಿಂದ ಲಾಭ ಪಡೆಯಬಹುದಾದರೂ ನವಿಲು, ಕಾಡುಹಂದಿ, ಮಂಗಗಳಿಂದ ಫ‌ಸಲನ್ನು ಸಂರಕ್ಷಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ.

ಯಾಂತ್ರೀಕೃತ ಉಳುಮೆ
ಸುಬ್ಬಯ್ಯ ಶೆಟ್ಟಿ ಅವರು 9 ಎಕರೆ ಗದ್ದೆ ಉಳುಮೆ ಮಾಡಲು ಯಂತ್ರಗಳನ್ನು ಬಳಸುತ್ತಿದ್ದು, ಕೂಲಿಯಾಳುಗಳ ಸಮಸ್ಯೆ ಹೆಚ್ಚಾಗಿದ್ದರೂ 15ರಿಂದ 20 ಜನರ ತಂಡವನ್ನು ನಾಟಿ ಹಾಗೂ ಕಟಾವು ಕಾರ್ಯದಲ್ಲಿ ತೊಡಗಿಸಿಕೊಳ್ಳುವಲ್ಲಿ ಯಶಸ್ಸು ಕಂಡುಕೊಂಡಿದ್ದಾರೆ.

ಕೃಷಿ ಚಟುವಟಿಕೆ ಅಗತ್ಯ
ಕೃಷಿ ಬದುಕು ಉತ್ತಮ. ಹಿಂದೆ ಅವಿಭಕ್ತ ಕುಟುಂಬಗಳು ಇದ್ದುದರಿಂದ ಕೂಲಿಯಾಳುಗಳ ಸಮಸ್ಯೆ ಇರಲಿಲ್ಲ. ಆದರೆ ಇಂದು ಬಹುತೇಕರು ಕೃಷಿಯಿಂದ ವಿಮುಖರಾಗಿ ಕೃಷಿಭೂಮಿ ಹಡಿಲು ಬೀಳುವಂತಾಗಿದೆ. ಯುವಕರು ಕೃಷಿಯತ್ತ ಮುಖ ಮಾಡಬೇಕು. ಕೃಷಿ ನಮ್ಮ ಜೀವನಾಡಿ. ಇದರಿಂದ ಅಂತರ್ಜಲ ವೃದ್ಧಿಯಾಗುವ ಜತೆಗೆ ಕೃಷಿಯಿಂದ ಅಧಿಕ ಲಾಭ ಗಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ಯುವ ಸಮುದಾಯ ನಿರಂತರ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು.
-ಸುಬ್ಬಯ್ಯ ಶೆಟ್ಟಿ, ಪ್ರಗತಿ ಪರ ಕೃಷಿಕ

ಸಂದೇಶ್‌ ಕುಮಾರ್‌ ನಿಟ್ಟೆ

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.