ಮೂಲ್ಕಿಗೆ ಇನ್ನೂ ಮಂಜೂರಾಗದ ಅಗ್ನಿಶಾಮಕ ಠಾಣೆ; ಪ್ರಸ್ತಾವನೆ ಹಂತದಲ್ಲೇ ಬಾಕಿ


Team Udayavani, May 24, 2024, 9:55 AM IST

ಮೂಲ್ಕಿಗೆ ಇನ್ನೂ ಮಂಜೂರಾಗದ ಅಗ್ನಿಶಾಮಕ ಠಾಣೆ; ಪ್ರಸ್ತಾವನೆ ಹಂತದಲ್ಲೇ ಬಾಕಿ

ಮೂಲ್ಕಿ: ಮೂಲ್ಕಿಗೆ ಅಗ್ನಿಶಾಮಕ ಠಾಣೆ ಅಗತ್ಯವಾಗಿ ಬೇಕು ಎಂಬ ಬೇಡಿಕೆ ಇಂದು ನಿನ್ನೆಯದಲ್ಲ. ಸುಮಾರು ಮೂರುವರೆ ದಶಕಗಳಿಂದ ಸರಕಾರದ ಮುಂದೆ ಇರುವ ಜನರ ಬಹಳ ಮುಖ್ಯವಾದ ಹಲವು ಬೇಡಿಕೆಗಳಲ್ಲಿ ಇದೂ ಒಂದು. ಮೂಲ್ಕಿ ತಾಲೂಕು ಪೂರ್ಣಪ್ರಮಾಣದಲ್ಲಿ ಅನುಷ್ಠಾನವಾದರೆ ಎಲ್ಲವೂ ಸರಿದೂಗಬಹುದು ಎಂಬ ನಂಬಿಕೆ ಜನರಲ್ಲಿದೆ. ಈ ಹಿಂದೆ ಅಗ್ನಿಶಾಮಕ ಠಾಣೆ ಮಂಜೂರಾತಿ ಬಗೆಗಿನ ಪ್ರಕ್ರಿಯೆ ಸ್ವಲ್ಪ ಮಟ್ಟಿಗೆ ಚುರುಕು ಪಡೆದಿತ್ತು.

ಆದರೆ ಸರಕಾರದಿಂದ ಮಂಜೂರಾತಿಗೊಂಡಿ ರುವ ಬಗ್ಗೆ ಯಾವುದೇ ಮಾಹಿತಿ ಇನ್ನೂ ಸಿಕ್ಕಿಲ್ಲ. ಒಂದೆರಡು ವರ್ಷ ಹಿಂದೆ ಇಲಾಖೆಯ ಕೆಲವು ಹಿರಿಯ ಅಧಿಕಾರಿಗಳು ಕಾರ್ನಾಡು ಕೈಗಾರಿಕೆ ಪ್ರದೇಶ ಬಳಿಯ ಹೆದ್ದಾರಿಯ ಪೆಟ್ರೋಲ್‌ ಬಂಕ್‌ ಹಿಂಬದಿಯಲ್ಲಿರುವ ಎತ್ತರದ ಪ್ರದೇಶದ ಸುಮಾರು ಒಂದು ಎಕ್ರೆ ಭೂಮಿಯನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಪರಿಶೀಲಿಸಿ ಸರಕಾರದ ಮುಂದೆ ಪ್ರಸ್ತಾವನೆಯನ್ನು ಶಾಸಕರ ಅನುಮೋದನೆಯೊಂದಿಗೆ ಸಲ್ಲಿಸಿದ್ದರು. ಕಾರ್ಯಾಚರಣೆಗೆ ವಿಳಂಬ ಮೂಲ್ಕಿಯ ಸುತ್ತುಮುತ್ತ ಅಗ್ನಿ ಅವಘಡ ಸಂಭವಿಸಿದರೆ ದೂರದ ಮಂಗಳೂರಿ ನಿಂದ ಅಗ್ನಿಶಾಮಕ ದಳದವರು ಬಂದು ಕಾರ್ಯಾಚರಣೆ ನಡೆಸಬೇಕಿದೆ.

ಇದರಿಂದ ಫಲಶ್ರುತಿಯಾದ ಘಟನೆಗಳು ಬಹಳ ವಿರಳ. ಘಟನೆ ಸಂಭವಿಸಿದ ಪ್ರದೇಶದಿಂದ ಸುಮಾರು 30 ಕಿ.ಮೀ.
ದೂರದಿಂದ ಅಗ್ನಿಶಾಮಕ ದಳದ ವಾಹನ ಬರುವಾಗ ಸಹಜವಾಗಿ ಕಾರ್ಯಾಚರಣೆಗೆ ವಿಳಂಬವಾಗುತ್ತದೆ. ಆದ್ದರಿಂದ ಮೂಲ್ಕಿ
ತಾಲೂಕು ಕೇಂದ್ರದಲ್ಲಿ ಒಂದು ಘಟಕ ಬೇಕು ಎಂಬುದು ಸಾರ್ವಜನಿಕರ ಆಗ್ರಹ. ಇಲಾಖೆಯ ಮೇಲಧಿಕಾರಿಗಳು ತಿಳಿಸಿದಂತೆ ಇಲ್ಲಿ ಇರುವ ಒಂದು ಎಕ್ರೆ ಭೂಯಿಯಲ್ಲಿ ಅಗ್ನಿಶಾಮಕ ದಳ ಸ್ಥಾಪನೆ ಸಾಧ್ಯವಾಗದು ಕನಿಷ್ಠ ಮೂರು ಎಕ್ರೆ ಪ್ರದೇಶ ಬೇಕು ಎಂಬುದು ಅವರ ಅಭಿಮತ.

ಅಗ್ನಿಶಾಮಕ ದಳದ ಕೇಂದ್ರ ಕಡಿಮೆ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ನಿದರ್ಶನಗಳು ಮಂಗಳೂರಿನ ಕದ್ರಿ,
ಪಾಂಡೇಶ್ವರದಲ್ಲಿ ಇದೆ. ಆದ್ದರಿಂದ ಒಂದೆ ರಡು ವಾಹನದ ಘಟಕ ಸ್ಥಾಪಿಸ ಬಹುದು ಎನ್ನುತ್ತಾರೆ ಸ್ಥಳೀಯ ನಾಗರಿಕರು.
ಸಾರ್ವಜನಿಕರ ಅಸಮಧಾನ ಜನರ ಅತೀ ಅಗತ್ಯದ ಬೇಡಿಕೆಗಳಲ್ಲಿ ಇದು ಪ್ರಮುಖವಾದ ಕಾರಣ ಇದನ್ನು ಪೂರೈಸುವುದು ಸರಕಾರದ ಆದ್ಯ ಕರ್ತವ್ಯ. ಈ ಬಗ್ಗೆ ಇಲಾಖೆ ಸ್ಪಂದಿಸದಿರುವ ಬಗ್ಗೆ ಸಾರ್ವಜನಿಕರು ಅಸಮಧಾನ ವ್ಯಕ್ತಪಡಿಸಿದ್ದಾರೆ. ಏನಿದ್ದರೂ ಅಗ್ನಿಶಾಮಕ ದಳದ ಸ್ಥಾಪನೆಗೆ ಜನ ಪ್ರತಿನಿಧಿಗಳ ಪ್ರಯತ್ನ ನಡೆಯಲೇಬೇಕು ಎಂಬುದು ಜನರ ಒಕ್ಕೊರಳ ಕೂಗು.

ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಶತಪ್ರಯತ್ನ
ಜನರ ಬೇಡಿಕೆಯಂತೆ ನಾನು ಮೇಲಧಿಕಾರಿಗಳ ಜತೆಗೆ ಸಾಕಷ್ಟುಬಾರಿ ಮಾತನಾಡಿದ್ದೇನೆ. ಇಲ್ಲಿಯ ಕೈಗಾರಿಕೆ ಪ್ರದೇಶದ ಬಳಿ ಅಗ್ನಿಶಾಮಕ ದಳದ ಮೇಲಧಿಕಾರಿಗಳು ಸಮೀಕ್ಷೆ ನಡೆಸಿದ್ದಾರೆ. ಸರಕಾರದ ಮುಂದೆ ಪ್ರಸ್ತಾವನೆ ಇರುವಾಗಲೇ ಘಟಕ ಸ್ಥಾಪನೆಗೆ ಕನಿಷ್ಠ ಮೂರು ಎಕ್ರೆ ನಿವೇಶನ ಬೇಕು ಎಂಬ ಉತ್ತರ ಅಧಿಕಾರಿಗಳಿಂದ ಬಂದಿದೆ. ಆದರೆ ನಾನು ಈಗ ಎರಡು ವಾಹನಳ ಸೇವೆಯಾದರೂ ಅಗತ್ಯ ಇದೆ. ಯೋಜನೆ ಆರಂಭಗೊಳಿಸುವಂತೆ ಪತ್ರ ಬರೆದಿದ್ದೇನೆ. ಪ್ರಸ್ತಾವನೆ ಸರಕಾರದಲ್ಲಿ ಕೈಯಲ್ಲಿದೆ. ನಾನು ಶತಪ್ರಯತ್ನ ಮಾಡಿ ಮೂಲ್ಕಿಗೆ ಈ ಸವಲತ್ತು ದೊರೆಯುವಂತೆ ಶ್ರಮಿಸುವೆ.
*ಉಮಾನಾಥ ಕೋಟ್ಯಾನ್‌, ಶಾಸಕರು, ಮೂಡುಬಿದಿರೆ

ಸರ್ವೋತ್ತಮ ಅಂಚನ್‌

ಟಾಪ್ ನ್ಯೂಸ್

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಮೂಳೂರು: ಲಾರಿಯಿಂದ ಬಿದ್ದು ಗಾಯ

Kapu ಮೂಳೂರು: ಲಾರಿಯಿಂದ ಬಿದ್ದು ಗಾಯ

Kollur ಹಾಲ್ಕಲ್‌: ಬಸ್‌ ಢಿಕ್ಕಿ; ಕಾರಿಗೆ ಹಾನಿ

Kollur ಹಾಲ್ಕಲ್‌: ಬಸ್‌ ಢಿಕ್ಕಿ; ಕಾರಿಗೆ ಹಾನಿ

Mandarthi: ಮಳೆಗಾಲದ ಯಕ್ಷಗಾನ

Mandarthi: ಜೂ.18 ರಂದು ಮಳೆಗಾಲದ ಯಕ್ಷಗಾನ ಸೇವೆ ಆಟಕ್ಕೆ ಚಾಲನೆ

udupi-1

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.