ಅಗರಬತ್ತಿ ಉದ್ಯಮಕ್ಕೆ ಅಗತ್ಯದ ವಿನಾಯಿತಿ: ಶೋಭಾ ಕರಂದ್ಲಾಜೆ
Team Udayavani, May 27, 2022, 11:24 PM IST
ಉಡುಪಿ: ಬಿದಿರು ಕಡ್ಡಿ ಸೂಕ್ತ ಸಮಯಕ್ಕೆ ಒದಗಿಸಲು ಅನುಕೂಲ ಆಗುವಂತೆ ಅಗರಬತ್ತಿ ಉದ್ಯಮಕ್ಕೆ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ವಿನಾಯಿತಿ ಕಲ್ಪಿಸಿದ್ದಾರೆ.
ಕಾರ್ಮಿಕ ಆಧಾರಿತ ಉದ್ಯಮವಾದ ಅಗರಬತ್ತಿ ನಿರ್ಮಾಣಕ್ಕೆ ಅಗತ್ಯದ ಕಚ್ಚಾ ವಸ್ತುವಾದ ಬಿದಿರು ಕಡ್ಡಿ ಹೊರದೇಶದಿಂದ ಅಮದುಗೊಳ್ಳುತ್ತಿತ್ತು. ಕೇಂದ್ರ ಸರಕಾರದ ಆಮದು ನಿಯಮಗಳ ಪ್ರಕಾರ ಈ ಬಿದಿರು ಕಡ್ಡಿಗಳು “ಪ್ಲಾಂಟ್ ಕ್ವಾರಂಟೇನ್’ ಪರೀಕ್ಷೆಗೆ ಒಳ ಪಡಬೇಕಾದ ಅನಿವಾರ್ಯತೆಯಿಂದ ಅಗರಬತ್ತಿ ಉದ್ಯಮಕ್ಕೆ ಅಗತ್ಯವಾದ ಬಿದಿರು ಕಡ್ಡಿಗಳು ತಕ್ಕ ಸಮಯಕ್ಕೆ ಕಾರ್ಖಾನೆ/ಕಂಪೆನಿಗಳಿಗೆ ತಲುಪುತ್ತಿರಲಿಲ್ಲ.
ಈ ಕಾರಣದಿಂದ 10 ಲಕ್ಷಕ್ಕೂ ಹೆಚ್ಚಿನ ಜನರು ಅವಲಂಬಿತವಾಗಿರುವ ಅಗರಬತ್ತಿ ಉದ್ಯಮವು ಕಚ್ಚಾವಸ್ತುವಿನ ಕೊರತೆ ಅನುಭವಿಸಿತ್ತು. ಈ ಸಂದರ್ಭದಲ್ಲಿ ಅಖೀಲ ಭಾರತೀಯ ಅಗರಬತ್ತಿ ಉತ್ಪಾದಕರ ಸಂಘ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಭೇಟಿಯಾಗಿ ಉದ್ಯಮದ ಸಮಸ್ಯೆಯನ್ನು ತೋಡಿಕೊಂಡಿದ್ದರು.
ಅಗರಬತ್ತಿ ಉದ್ಯಮದ ಸಮಸ್ಯೆಯನ್ನು ಮನಗೊಂಡ ಸಚಿವರು ತತ್ಕ್ಷಣದÇÉೇ ಕೇಂದ್ರ ಕೃಷಿ ಇಲಾಖೆಯ ಪ್ಲಾಂಟ್ ಕ್ವಾರಂಟೈನ್ ವಿಭಾಗಕ್ಕೆ ಸೂಚನೆ ನೀಡಿ, ಅಗರಬತ್ತಿ ಉದ್ಯಮಕ್ಕೆ ಅಗತ್ಯದ ವಿನಾಯಿತಿ ನೀಡುವಂತೆ ಆದೇಶಿಸಿದರು.
ಅದರಂತೆ ಕೃಷಿ ಇಲಾಖೆಯು 6.00 ಎಂಎಂ ಕೆಳಗಿನ ಬಿದಿರು ಕಡ್ಡಿಗಳಿಗೆ ಪ್ಲಾಂಟ್ ಕ್ವಾರಂಟೈನ್ ಪ್ರಕ್ರಿಯೆಯಿಂದ ವಿನಾಯಿತಿ ನೀಡುವಂತೆ ಆದೇಶ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಚಿಕ್ಕಮಗಳೂರು : ವೀಲಿಂಗ್ ಶೋಕಿ ಮಾಡಿದವರಿಗೆ ಖಾಕಿಗಳ ಬುಲ್ಡೋಜರ್ ಟ್ರೀಟ್ಮೆಂಟ್
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಹೊಸ ಸೇರ್ಪಡೆ
‘ಓ ಮೈ ಲವ್’ ನಲ್ಲಿ ಕ್ಯೂಟ್ ಲವ್ ಸ್ಟೋರಿ: ಶಶಿಕುಮಾರ್ ಪುತ್ರನ ಹೊಸ ಕನಸಿದು
ಕಸದ ವಾಹನದಲ್ಲಿ ಕೆಂಪೇಗೌಡರ ಭಾವಚಿತ್ರ ಮೆರವಣಿಗೆ: ಉಗ್ರ ಹೋರಾಟದ ಎಚ್ಚರಿಕೆ
30 ನಿಮಿಷದಲ್ಲಿ 3.5 ಕೆ.ಜಿ.ರಾಗಿ ಮುದ್ದೆ ತಿಂದ ಶಿವಲಿಂಗುಗೆ ಬಹುಮಾನ
ಪಕ್ಷಿಗಳ ಹೆರಿಗೆ ಆಸ್ಪತ್ರೆಯಂತಾದ ಭದ್ರಾ ಜಲಾಶಯ ಹಿನ್ನೀರು ಪ್ರದೇಶ
ಮೀನು ಸಾಯುವ, ವಲಸೆ ಹಕ್ಕಿ ಬರುವುದನ್ನು ನಿಲ್ಲಿಸುವ ಮೊದಲು ಕೆರೆ ಸ್ವಚ್ಛಗೊಳಿಸಿ: ಬಿಜ್ಜೂರ್