ಮಳೆಕೊಯ್ಲು ಅಳವಡಿಸಿ ಮಾದರಿಯಾದ ಮರ್ಣೆ ಗ್ರಾ.ಪಂ.
Team Udayavani, Aug 23, 2019, 5:49 AM IST
ಅಜೆಕಾರು: ಬೇಸಗೆಯಲ್ಲಿ ಕಾಡುವ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಳೆಕೊಯ್ಲು ಕಾರ್ಯಕ್ರಮಕ್ಕೆ ಮರ್ಣೆ ಪಂಚಾಯತ್ ಆಡಳಿತವು ಹೆಚ್ಚಿನ ಒತ್ತು ನೀಡಿದೆ.
ಉದಯವಾಣಿಯ ಮಳೆಕೊಯ್ಲು ಕಾರ್ಯಕ್ರಮದಿಂದ ಪ್ರೇರಣೆಗೊಂಡ ಪಂಚಾಯತ್ ಆಡಳಿತ ಪಂಚಾಯತ್ ಕಚೇರಿ ಸಮೀಪದ ತೆರೆದ ಬಾವಿ ಬಳಿ ಮಳೆಕೊಯ್ಲು ನಡೆಸಿದೆ. ಪಂಚಾಯತ್ ವ್ಯಾಪ್ತಿಯಲ್ಲಿ ಮಳೆ ಕೊಯ್ಲು ಜಾಗೃತಿ ಮೂಡಿ ಸುವ ನಿಟ್ಟಿನಲ್ಲಿ ಅಧಿಕಾರಿ ಗಳು ಹಾಗೂ ಜನಪ್ರತಿನಿಧಿ ಗಳು ಪಂಚಾಯತ್ನಲ್ಲಿಯೇ ಮಳೆ ಕೊಯ್ಲು ಮಾಡಿ ಮಾದರಿಯಾ ಗಿದ್ದಾರೆ. ಪಂಚಾಯತ್ ಕಚೇರಿ 2 ಕಟ್ಟಡ ಗಳನ್ನು ಹೊಂದಿದ್ದು ಈ ಎರಡೂ ಕಟ್ಟಡಗಳ ನೀರನ್ನು ಗುಂಡಿಗೆ ಹಾಯಿಸಿ ಅಲ್ಲಿಂದ ಶುದ್ಧೀಕರಣಕ್ಕೆ ಒಳಪಡಿಸಿ ನೇರವಾಗಿ ಪೈಪ್ ಮೂಲಕ ಬಾವಿಗೆ ಹರಿಯಬಿಡ ಲಾಗುತ್ತಿದೆ. ಅಲ್ಲದೆ ಪಂಚಾಯತ್ ವ್ಯಾಪ್ತಿಯ ಪ್ರತಿ ಯೋರ್ವರೂ ಮಳೆ ಕೊಯ್ಲು ಮಾಡುವಂತೆ ಮನವರಿಕೆ ಮಾಡುವ ಕೆಲಸವನ್ನು ಪಂಚಾಯತ್ ಮಾಡುತ್ತಿದೆ. ಈಗಾಗಲೇ ಹೊಸ ಕಟ್ಟಡ ನಿರ್ಮಾಣ ಮಾಡುವವರಿಗೆ ಕಡ್ಡಾಯವಾಗಿ ಮಳೆಕೊಯ್ಲು ಮಾಡಲು ಸೂಚಿಸಲಾಗುತ್ತಿದೆ.
ಜಲಕ್ಷಾಮ ತಡೆಯುವ ಉದ್ದೇಶ
ಪಂಚಾಯತ್ ಕಚೇರಿ ಬಳಿ ಪಂಚಾಯತ್ ಕಟ್ಟಡದ ಹಾಗೂ ವಾಣಿಜ್ಯ ಕಟ್ಟಡದ ಸಂಪೂರ್ಣ ಮಳೆನೀರನ್ನು ಮಳೆಕೊಯ್ಲು ಮಾಡುವ ಸಲುವಾಗಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಪಂಚಾಯತ್ ಪಕ್ಕದ ಬಾವಿಗೆ ಜಲಮರುಪೂರಣ ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ಜಲಕ್ಷಾಮ ತಡೆಯುವ ಉದ್ದೇಶದಿಂದ ಕಾಮಗಾರಿ ಕೈಗೊಳ್ಳಲಾಗಿದೆ. -ದಿನೇಶ್ ಕುಮಾರ್, ಅಧ್ಯಕ್ಷರು, ಗ್ರಾ.ಪಂ. ಮರ್ಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ