ಸೇತುವೆಯಿಲ್ಲದೆ ಕುಳ್ಳಂಬಳ್ಳಿ ಶಾಲೆಗೆ ಭವಿಷ್ಯದಲ್ಲಿ ಬೀಗ…!

ವರ್ಷದಿಂದ ವರ್ಷಕ್ಕೆ ಮಕ್ಕಳ ಸಂಖ್ಯೆ ಇಳಿಮುಖ; ಸಂಪರ್ಕ ಸೇತುವೆಯಿಲ್ಲದೆ ಶಾಲೆ ಶಾಶ್ವತ ಮುಚ್ಚುವ ಭೀತಿ

Team Udayavani, Jul 6, 2019, 5:27 AM IST

0507KDPP1A

ಕೆರಾಡಿ: ಈ ಶಾಲೆ ಮುಖ್ಯ ರಸ್ತೆಯಿಂದ ಅನತಿ ದೂರದಲ್ಲಿದೆ. ಆದರೂ ಅಲ್ಲಿಂದ ಈ ಶಾಲೆಗೆ ಬರಬೇಕಾದರೆ 3 ಕಿ.ಮೀ. ಸುತ್ತು ಬಳಸಿ ಬೇರೊಂದು ರಸ್ತೆಯಲ್ಲಿ ಬರಬೇಕು. ಕಾರಣ ಈ ಮುಖ್ಯ ರಸ್ತೆ ಹಾಗೂ ಶಾಲೆ ಮಧ್ಯೆ ಹೊಳೆಯೊಂದು ಅಡ್ಡವಿದ್ದು, ಇದಕ್ಕೆ ಸೇತುವೆಯಿಲ್ಲ. ಮಕ್ಕಳು ಕಾಲು ಸಂಕದಲ್ಲಿ ಬರಬೇಕು. ಇದರಿಂದ ಈ ಬಾರಿ ಆ ಶಾಲೆಯಲ್ಲಿ ಮಕ್ಕಳ ದಾಖಲಾತಿ ಪ್ರಮಾಣವು ಗಣನೀಯವಾಗಿ ಕುಸಿದಿದೆ.

ಇದು ಕೆರಾಡಿ ಗ್ರಾಮದ ಕುಳ್ಳಂಬಳ್ಳಿ ಕಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿ. 3-4 ವರ್ಷಗಳ ಹಿಂದೆ 70 – 80 ಮಂದಿ ಮಕ್ಕಳಿದ್ದ ಶಾಲೆಯೀಗ ಸಂಪರ್ಕ ಸೇತುವೆ ಸಮಸ್ಯೆಯಿಂದ ಬರೀ 16 ಮಂದಿ ವಿದ್ಯಾರ್ಥಿಗಳಷ್ಟೇ ಇರುವ ಸ್ಥಿತಿಗೆ ತಲುಪಿದೆ. ಈ ಬಾರಿ ಬರೀ 4 ಮಕ್ಕಳಷ್ಟೇ 1 ನೇ ತರಗತಿಗೆ ದಾಖಲಾಗಿದ್ದಾರೆ.

ಇಳಿಮುಖಕ್ಕೆ ಕಾರಣವೇನು?
ಕುಳ್ಳಂಬಳ್ಳಿ ಕಿ.ಪ್ರಾ. ಶಾಲೆಗೆ ಮೈಪಾಡಿ, ಕಕ್ಕುಂಜೆ, ಸಿದ್ಧಕೋಣ, ತೆಂಕಬೆಟ್ಟು, ಹೊಸಳ್ಳಿ, ಕೋಣಬೇರು, ಕೊಗ್ರಿ, ನಾಡೊಳ್ಳಿ, ಕುಳ್ಳಂಬಳ್ಳಿ ಕಡೆಯಿಂದ ಮಕ್ಕಳು ಶಾಲೆಗೆ ಬರುತ್ತಿದ್ದರು. ಒಟ್ಟಾರೆ ಈ ಶಾಲೆಯ ಗಣತಿ ಲೆಕ್ಕಾಚಾರ ಪ್ರಕಾರ 150 ಮನೆಗಳಿವೆ. ಅದರಲ್ಲೂ ಪ್ರಮುಖವಾಗಿ ಕೊಗ್ರಿ ಮತ್ತು ನಾಡೊಳ್ಳಿಯಿಂದ ಹೆಚ್ಚಿನ ಮಕ್ಕಳು ಈ ಶಾಲೆಗೆ ಹಿಂದೆ ಬರುತ್ತಿದ್ದರು. ಆದರೆ ಸೇತುವೆಯಿಲ್ಲದೆ ಮಳೆಗಾಲದಲ್ಲಿ ಶಿಕ್ಷಕರು ಹಾಗೂ ಸ್ಥಳೀಯರು ತಾತ್ಕಾಲಿಕವಾಗಿ ನಿರ್ಮಿಸುತ್ತಿದ್ದ ಕಾಲು ಸಂಕದಲ್ಲಿ ಮಕ್ಕಳನ್ನು ಕಳುಹಿಸಲು ಹಿಂದೇಟು ಹಾಕಿದ ಕಾರಣ ಶಾಲೆಯಲ್ಲಿ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ.

ಕೊಗ್ರಿ ಹಾಗೂ ನಾಡೊಳ್ಳಿಯಿಂದ ಕೇವಲ 1ಕಿ.ಮೀ. ಅಂತರದಲ್ಲಿದೆ ಈ ಶಾಲೆ. ಆದರೆ ಕೆರಾಡಿ ಶಾಲೆಗೆ ಸುಮಾರು 3 ಕಿ.ಮೀ. ದೂರವಿದೆ. ಆದರೂ ಅಷ್ಟು ದೂರವಿದ್ದರೂ, ಕಷ್ಟಪಟ್ಟಾದರೂ ವಿದ್ಯಾರ್ಥಿಗಳು ಅಲ್ಲಿಗೆ ಹೋಗುತ್ತಿದ್ದಾರೆ.

50 ವರ್ಷಗಳ ಇತಿಹಾಸ
ಈ ಶಾಲೆ 1960ರಲ್ಲಿ ಪ್ರಾರಂಭವಾಗಿದ್ದು, ಸುಮಾರು 59 ವರ್ಷಗಳ ಇತಿಹಾಸವಿದೆ. ಸಾವಿರಾರು ಮಂದಿ ವಿದ್ಯಾರ್ಜನೆ ಮಾಡಿರುವ, ಬದುಕು ರೂಪಿಸಿಕೊಟ್ಟ ಶಾಲೆಯಿದು. ಆದರೆ ಕೇವಲ ಸೇತುವೆಯೊಂದರ ಸಮಸ್ಯೆಯಿಂದಾಗಿ ಮುಚ್ಚುವ ಹಂತಕ್ಕೆ ಬಂದಿರುವುದು ಮಾತ್ರ ಊರುವರನ್ನು ಚಿಂತೆಗೀಡು ಮಾಡಿದೆ. ಕಳೆದ ವರ್ಷ 17 ಮಂದಿ, ಈ ಸಲ 16 ಮಂದಿ ಮಕ್ಕಳಿದ್ದಾರೆ. ಇಬ್ಬರು ಶಿಕ್ಷಕರಿದ್ದಾರೆ. ಹಿಂದೊಮ್ಮೆ 80ಕ್ಕೂ ಹೆಚ್ಚು ಮಕ್ಕಳಿದ್ದ ಕಾಲವು ಇತ್ತು.

ವಾಹನ ವ್ಯವಸ್ಥೆ
ಕಳೆದ 2 ವರ್ಷಗಳಿಂದ ಊರಿನ ಒಬ್ಬರು ದಾನಿಯೇ ಮುಂದೆ ಬಂದು ಮಕ್ಕಳಿಗೆ ಈ ಕಾಲು ಸಂಕದಲ್ಲಿ ಬರಲು ತೊಂದರೆಯಾಗುತ್ತೆಂದು, ವಾಹನದ ವ್ಯವಸ್ಥೆಯನ್ನು ಮಾಡಿದ್ದಾರೆ. ಆದರೂ ಮಕ್ಕಳ ಸಂಖ್ಯೆ ಮಾತ್ರ ಹೆಚ್ಚಾಗಿಲ್ಲ.

ಕಿಂಡಿ ಅಣೆಕಟ್ಟು ಮಂಜೂರಾಗಿತ್ತು
ಕೆರಾಡಿಯಿಂದ ಕುಳ್ಳಂಬಳ್ಳಿ ಶಾಲೆಗೆ ಹೋಗುವ ದಾರಿ ಮಧ್ಯದ ಹೊಳೆಗೆ ಸುಮಾರು 2 ವರ್ಷಗಳ ಹಿಂದೆ ಕಿಂಡಿ ಅಣೆಕಟ್ಟು ಮಂಜೂರಾಗಿತ್ತು, ಕಾಮ ಗಾರಿಗೆ ಬೇಕಾದ ಎಲ್ಲ ಸವಲತ್ತುಗಳು ಬಂದಿತ್ತು. ಕಿಂಡಿ ಅಣೆಕಟ್ಟು ನಿರ್ಮಿಸಿ, ಅದರಲ್ಲಿ ಮಕ್ಕಳು ಸಹಿತ ಎಲ್ಲರಿಗೂ ನಡೆದಾಡಲು ಅನುಕೂಲವಾಗುವಂತೆ ಮಾಡುವ ಯೋಜನೆ ಇದಾಗಿತ್ತು. ಆದರೆ ಇಲ್ಲಿ ಒಬ್ಬರ ಪಟ್ಟಾ ಜಾಗ ಆಗಿರುವುದರಿಂದ ಸಮಸ್ಯೆಯಾಗಿದೆ.

ಸೇತುವೆಯಾದರೆ ಅನುಕೂಲ
ಕುಳ್ಳಂಬಳ್ಳಿ ಶಾಲೆಯ ಭವಿಷ್ಯದ ದೃಷ್ಟಿಯಿಂದ ಸೇತುವೆ ಅಥವಾ ಕಿಂಡಿ ಅಣೆಕಟ್ಟು ಆದಲ್ಲಿ ಬಹಳಷ್ಟು ಅನುಕೂಲವಾಗಲಿದೆ. ಆದರೆ ಇಲ್ಲೊಂದು ಸಮಸ್ಯೆಯಿದೆ. ಸೇತುವೆಗೆ ಪ್ರಸ್ತಾವಿತ ಪ್ರದೇಶದಲ್ಲಿ ಪಟ್ಟಾ ಜಾಗ ಬರುವುದರಿಂದ, ಸರಕಾರದಿಂದ ಪಟ್ಟಾ ಜಾಗಕ್ಕೆ ಪರಿಹಾರ ಕೊಡುವುದಿಲ್ಲವಾದ್ದರಿಂದ ಸೇತುವೆ ಕಷ್ಟ. ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಶಾಲೆಯ ಉಳಿವಿನ ದೃಷ್ಟಿಯಲ್ಲಿ ಮುತುವರ್ಜಿ ವಹಿಸಲಿ.
– ನಾಗಪ್ಪ ಕೊಠಾರಿ, ಸ್ಥಳೀಯರು

ಸೇತುವೆಗೆ ಪ್ರಯತ್ನ
ಯಾವುದೇ ಊರಲ್ಲಿ ಶಾಲೆ ಮುಚ್ಚುವ ಸಂದರ್ಭ ಬಂದರೆ ಎಲ್ಲ ಅಡೆ- ತಡೆಗಳನ್ನು ನಿವಾರಿಸಿ, ಶಾಲೆಯನ್ನು ಉಳಿಸುವುದೇ ನಮ್ಮ ಮೊದಲ ಆದ್ಯತೆಯಾಗಿದೆ. ಕುಳ್ಳಂಬಳ್ಳಿಯಲ್ಲಿಯೂ ಶಾಲಾ ಮಕ್ಕಳ ಅನುಕೂಲಕ್ಕಾಗಿ ಸೇತುವೆ ಅಥವಾ ಅಗತ್ಯವಿರುವ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಎಲ್ಲ ರೀತಿಯಿಂದಲೂ ಪ್ರಯತ್ನಿಸಲಾಗುವುದು.
– ಬಿ.ಎಂ. ಸುಕುಮಾರ್‌ ಶೆಟ್ಟಿ, ಬೈಂದೂರು ಶಾಸಕರು

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.