Malpe ಬೀಚ್ಗೆ ಹರಿದು ಬಂದ ಜನಸಾಗರ
Team Udayavani, Nov 15, 2023, 11:32 PM IST
ಮಲ್ಪೆ: ವಾರಾಂತ್ಯ, ಸರಣಿ ರಜೆ, ದೀಪಾವಳಿ ಪಾಡ್ಯದ ಸಂಭ್ರಮದ ಹಿನ್ನೆಲೆಯಲ್ಲಿ ಮಲ್ಪೆ ಬೀಚ್ನಲ್ಲಿ ಜನವೋ ಜನ. ಪ್ರತೀ ವರ್ಷದಂತೆ ಈ ಬಾರಿಯೂ ಮಲ್ಪೆ ಬೀಚ್ ಫ್ರೆಂಡ್ಸ್ ಮಂಗಳವಾರ ಸಾಮಾಜಿಕ ಹಾಗೂ ಮನೋರಂಜನೆ ಕಾರ್ಯಕ್ರಮ ಆಯೋಜಿಸಿತ್ತು.
ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ಡಾ| ಜಿ. ಶಂಕರ್ ಕಾರ್ಯಕ್ರಮ ಉದ್ಘಾಟಿಸಿದರು. ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮೊದಲಾದವರು ಭಾಗವಹಿಸಿದ್ದರು. ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ನರೇಂದ್ರ ಕುಮಾರ್ ಕೋಟ, ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ಭಾವಚಿತ್ರ ಕಲಾವಿದ ಸಂತೋಷ್ ಕುಮಾರ್ ಅವರನ್ನು ಸಮ್ಮಾನಿಸಲಾಯಿತು. ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.