ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸ್ತಬ್ಧಚಿತ್ರ ಮೆರವಣಿಗೆ: ಜಿಲ್ಲಾಧಿಕಾರಿ


Team Udayavani, Jul 30, 2019, 5:10 AM IST

DC

ಉಡುಪಿ: ಬೀಡಿನಗುಡ್ಡೆಯಲ್ಲಿ ಅ. 15ರಂದು ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯ ಕ್ರಮದಲ್ಲಿ ಜನಜಾಗೃತಿ ಮೂಡಿಸುವ ವಿವಿಧ ಸ್ತಬ್ಧ ಚಿತ್ರಗಳನ್ನು ತಯಾರಿಸಿ, ನಗರದ ವಿವಿಧೆಡೆಗಳಲ್ಲಿ ಮೆರವಣಿಗೆ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮ ವಾರ ನಡೆದ ಸ್ವಾತಂತ್ರ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಬಾರಿಯ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮಳೆ ನೀರು ಕೊಯ್ಲು ಕುರಿತು ಮಹತ್ವ ಸಾರುವ ಸ್ತಬ್ಧಚಿತ್ರವನ್ನು ಕೃಷಿ ಇಲಾಖೆ, ತಾರಸಿ ತೋಟ ನಿರ್ಮಾಣ ಕುರಿತಂತೆ ತೋಟಗಾರಿಕಾ ಇಲಾಖೆ, ರಸ್ತೆ ಸುರಕ್ಷತೆ ಕುರಿತಂತೆ ಪ್ರಾದೇಶಿಕ ಸಾರಿಗೆ ಇಲಾಖೆ, ಮಲೇರಿಯಾ ಮತ್ತು ಡೆಂಗ್ಯೂ ಕುರಿತು ಎಚ್ಚರಿಕೆ ನೀಡುವ ಕುರಿತು ಆರೋಗ್ಯ ಇಲಾಖೆ, ಜಿಲ್ಲೆಯ ಪ್ರವಾಸೋದ್ಯಮ ಕುರಿತು ಪ್ರವಾಸೋದ್ಯಮ ಇಲಾಖೆ, ವನ್ಯಜೀವಿ ಸಂರಕ್ಷಣೆ ಕುರಿತಂತೆ ಅರಣ್ಯಇಲಾಖೆಯ ಮೂಲಕ ಆಕರ್ಷಕ ಸ್ತಬ್ಧಚಿತ್ರಗಳನ್ನು ನಿರ್ಮಾಣ ಮಾಡುವುದರೊಂದಿಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಈ ಎಲ್ಲ ಸ್ತಬ್ಧಚಿತ್ರಗಳನ್ನು ಬೀಡಿನ ಗುಡ್ಡೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ದ ಪೆರೇಡ್‌ನ‌ಲ್ಲಿ ಮೆರವಣಿಗೆ ಮಾಡಿ, ಅನಂತರ ನಗರದ ವಿವಿಧ ವಾರ್ಡ್‌ಗಳನ್ನು ಸಂಚರಿಸುವ ಕುರಿತು ನಗರಸಭೆಯ ಪೌರಾಯುಕ್ತರು ಅಗತ್ಯ ಕ್ರಮ ಕೈಗೊಳ್ಳುವಂತೆ ಡಿ.ಸಿ.ಸೂಚಿಸಿದರು.

ಸ್ವಾತಂತ್ರ್ಯೋತ್ಸವ ದ ಪಥ ಸಂಚಲನದಲ್ಲಿ ಈ ಬಾರಿ ಇತರೆ ತಂಡಗಳ ಜೊತೆಗೆ ಸ್ಟೂಡೆಂಟ್‌ ಕೆಡೆಟ್‌ ತಂಡ ಮತ್ತು ವಸತಿ ಶಾಲೆಗಳ ವಿದ್ಯಾರ್ಥಿಗಳನ್ನು ಒಳಗೊಂಡ ತಂಡವನ್ನು ಸೇರ್ಪಡೆಗೊಳಿಸುವಂತೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ತಂಡದಲ್ಲಿ ರಸ್ತೆ ಸುರಕ್ಷತೆ ಕುರಿತು ಯಕ್ಷಗಾನ ನೀಡುವ ತಂಡವನ್ನು ಸೇರ್ಪಡೆ ಮಾಡುವಂತೆ ತಿಳಿಸಿದ ಅವರು ಪಥಸಂಚಲನದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಮತ್ತು ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯ ಸಾರಿಗೆ ಸೌಲಭ್ಯ ಒದಗಿಸುವಂತೆ ಆರ್‌.ಟಿ.ಒ. ಅಧಿಕಾರಿಗಳಿಗೆ ಸೂಚಿಸಿದರು.

ಸ್ವಾತಂತ್ರ್ಯೋತ್ಸವ ಆಚರಣೆ ಕುರಿತಂತೆ ವಿವಿಧ ಸಮಿತಿಗಳನ್ನು ಜಿಲ್ಲಾಧಿಕಾರಿಗಳು ರಚಿಸಿದರು. ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಲ್ಲಾ ಕ.ಸಾ.ಪ.ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಮ್ಮಾನ
ಎಸೆಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಗುವುದು ಮತ್ತು ರಸ್ತೆ ಸುರಕ್ಷೆ ಕುರಿತಂತೆ ಶಾಲೆಗಳಲ್ಲಿ ಚಿತ್ರಕಲೆ ಮೂಲಕ ಅರಿವು ಮೂಡಿಸಿರುವ ಅತ್ಯುತ್ತಮ ಚಿತ್ರ ರಚಿಸಿರುವ ಶಾಲೆಗಳ ಮುಖ್ಯೋಪಾಧ್ಯಾಯರು, ಚಿತ್ರಕಲೆ ಬಿಡಿಸಿದ ಶಿಕ್ಷಕರು ಮತ್ತು ಶಾಲೆಯ ಇಬ್ಬರು ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಗುವುದು ಎಂದು ಡಿಸಿ ಹೇಳಿದರು.

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.