ಬಳಸುವವರಿಲ್ಲದೆ ಮೂಲೆಗುಂಪಾದ ಶುದ್ಧ ನೀರಿನ ಘಟಕ

ಕುಂಭಾಸಿ ವಿನಾಯಕ ನಗರ

Team Udayavani, May 14, 2019, 6:00 AM IST

0705TKE1

ತೆಕ್ಕಟ್ಟೆ: ಕುಂಭಾಸಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ವಿನಾಯಕ ನಗರದಲ್ಲಿ ಶುದ್ಧ ನೀರಿನ ಘಟಕ ಸ್ಥಾಪನೆಯಾಗಿ ವರ್ಷ ಕಳೆಯಿತು. ಆದರೆ ಅದರ ಬಳಕೆ ನಿರೀಕ್ಷಿತ ಪ್ರಮಾಣದಲ್ಲಿರದೆ ಯೋಜನೆ ವ್ಯರ್ಥವಾಗಿದೆ.

ಶುದ್ಧ ಕುಡಿಯುವ ನೀರಿನ ಯೋಜನೆ
ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ 2 ಸಾವಿರ ಲೀ. ಸಾಮರ್ಥ್ಯ ಹೊಂದಿದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲಾಗಿದೆ. ಇಲ್ಲಿ 600 ಮಂದಿ ನಿವಾಸಿ ಗಳಿದ್ದು ಪ್ರಯೋಜನವಾಗಬಹುದು ಎನ್ನಲಾಗಿತ್ತು. ಇದಕ್ಕಾಗಿ ಲಕ್ಷಾಂತರ ರೂ. ವಿನಿಯೋಗಿಸಲಾಗಿತ್ತು. ಆದರೆ ಇದನ್ನು ಈಗ ಬಳಸುವವರಿಲ್ಲ.

ನಾಣ್ಯ ಹಾಕಿದರೆ ನೀರು ಬರುತ್ತಿಲ್ಲ!
ಘಟಕದಲ್ಲಿ 1 ರೂ. ನಾಣ್ಯ ಹಾಕಿದರೆ 10 ಲೀ. ಶುದ್ಧ ನೀರು ಲಭ್ಯವಾಗುತ್ತದೆ. ಈ ಬಗ್ಗೆ ಬೋರ್ಡ್‌ ಕೂಡ ಇಲ್ಲಿದೆ. ಆದರೆ ನಾಣ್ಯ ಹಾಕಿದರೆ ಪ್ರಯೋಜನವಿಲ್ಲವಾಗಿದೆ. ನಾಣ್ಯವನ್ನು ಮೆಶೀನ್‌ ಸ್ವೀಕರಿಸದೇ ಇರುವುದರಿಂದ ನೀರು ಬರದೇ ಇರುವುದು ಕಂಡುಬಂದಿದೆ.

ನಿತ್ಯ 75 ಸಾವಿರ ಲೀ.ನೀರು ಪೂರೈಕೆ
ಕುಂಭಾಸಿ ಗ್ರಾ.ಪಂ.ವ್ಯಾಪ್ತಿಯ ವಿನಾಯಕ ನಗರದಲ್ಲಿ ಸುಮಾರು 40 ಬಾವಿಗಳು , 3 ಹ್ಯಾಂಡ್‌ ಪಂಪ್‌ ಹಾಗೂ ನಿತ್ಯ ಬಳಕೆಗಾಗಿ ಪ್ರತಿ ಮನೆಗಳಿಗೂ ಕೂಡಾ ಪೈಪ್‌ ಲೈನ್‌ ವ್ಯವಸ್ಥೆ ಕಲ್ಪಿಸಲಾಗಿದ್ದು ಹಳೆ ಗ್ರಾ.ಪಂ.ಕಟ್ಟಡದ ಸಮೀಪದ ತೆರೆದ ಬಾವಿಯಿಂದ ನಿತ್ಯ 75 ಸಾವಿರ ಲೀ.ನೀರು ಪೂರೈಕೆ ಮಾಡಲಾಗುತ್ತಿದೆ.

ಬಳಸಲು ಹಿಂದೇಟು
ಈ ಹಿಂದೆ ಶುದ್ಧ ಕುಡಿಯುವ ನೀರಿನ ಘಟಕದಿಂದ ಸಂಗ್ರಹಿಸಿದ ನೀರು ಕಂದು ಬಣ್ಣ ಬಂದಿದೆ ಎನ್ನುವ ಕಾರಣಕ್ಕೆ ಕೆಲವರು ಈ ನೀರನ್ನು ಉಪಯೋಗಿಸಲು ಸಾರ್ವಜನಿಕರು ಹಿಂದೇಟು ಹಾಕು ತ್ತಿದ್ದಾರೆ. ಈಗಾಗಲೇ ಘಟಕದ ಸಮೀಪದ ಬಾವಿಯಿಂದ ನೀರು ಸರಬರಾಜಾಗುತ್ತಿದ್ದು ಮೋಟರ್‌ ಸುಟ್ಟು ಹೋಗಿರುವುದರಿಂದ ದುರಸ್ತಿಗೆ ಕಳುಹಿಸಲಾಗಿದೆ.
– ಲಕ್ಷ್ಮಣ ಕಾಂಚನ್‌, ಸದಸ್ಯರು, ಗ್ರಾ.ಪಂ. ಕುಂಭಾಸಿ

ಅಗತ್ಯ ಇರುವಲ್ಲಿ ನಿರ್ಮಿಸಿ
ಸರಕಾರ ಲಕ್ಷಾಂತರ ರೂ. ವ್ಯಯಿಸಿ ಇಂತಹ ಶುದ್ಧ ನೀರಿನ ಘಟಕ ನಿರ್ಮಿಸಿದೆ. ಅನಗತ್ಯ ಪ್ರದೇಶಗಳಲ್ಲಿ ಇಂತಹ ಘಟಕ ನಿರ್ಮಿಸುವ ಬದಲು ಕುಡಿಯುವ ನೀರಿಗೆ ಸಮಸ್ಯೆಗಳಿರುವ ಸ್ಥಳದಲ್ಲಿ ನಿರ್ಮಿಸಿದ್ದರೆ ಸಾರ್ವಜನಿಕರು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುತ್ತಿದ್ದರು.
– ವಿಶ್ವನಾಥ ಹಂದೆ,
ಮಾಜಿ ಸೈನಿಕರು

ಬಳಕೆಯಾಗದಿರುವುದು ಬೇಸರದ ಸಂಗತಿ
ಕುಂಭಾಸಿ ಮೂಡುಗೋಪಾಡಿಯ ಸುಮಾರು 40 ಮನೆಗಳಿಗೆ ಈಗಾಗಲೇ ಕುಡಿಯುವ ನೀರಿನ ಸಮಸ್ಯೆಗಳಿದ್ದು ಟ್ಯಾಂಕರ್‌ ಮೂಲಕ ಎರಡು ದಿನಗಳಿಗೊಮ್ಮೆ ಸುಮಾರು 18 ಸಾವಿರ ಲೀಟರ್‌ ನೀರು ಟ್ಯಾಂಕರ್‌ ಮೂಲಕ ಪೂರೈಕೆ ಮಾಡುತ್ತಿದ್ದೇವೆ. ಶುದ್ಧ ಕುಡಿಯುವ ನೀರಿನ ಘಟಕ ಸಮರ್ಪಕವಾಗಿ ಬಳಸಿಕೊಳ್ಳುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದೇವೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಬಳಕೆಯಾಗದಿರುವುದು ಬೇಸರದ ಸಂಗತಿ.
– ಜಯರಾಮ ಶೆಟ್ಟಿ , ಪಿಡಿಒ ಕುಂಭಾಸಿ

ಟಾಪ್ ನ್ಯೂಸ್

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.