ಮಕ್ಕಳೊಂದಿಗೆ ಸಂವಾದದಲ್ಲಿ ಯೋಧ ಸಂತೋಷ್‌ ಹೇಳಿಕೆ

370ನೇ ವಿಧಿ ರದ್ದತಿ ಬಳಿಕ ಕಲ್ಲೆಸೆತ ನಿಲುಗಡೆ

Team Udayavani, Feb 11, 2020, 6:00 AM IST

kemmu-38

ಸಾಂದರ್ಭಿಕ ಚಿತ್ರ

ಉಡುಪಿ: ಜಮ್ಮು ಕಾಶ್ಮೀರದಲ್ಲಿ ಅಸ್ತಿತ್ವದಲ್ಲಿದ್ದ 370ನೇ ವಿಧಿಯನ್ನು ಕೇಂದ್ರ ಸರಕಾರ ರದ್ದುಗೊಳಿಸಿದ ಅನಂತರ ಸೈನಿಕರ ಮೇಲೆ ಜನರು ಕಲ್ಲೆಸೆಯುವುದು ಸಂಪೂರ್ಣ ನಿಂತಿದೆ. ಸೈನಿಕರಿಗೆ ಸರಕಾರ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿರುವುದರಿಂದ ಜನರು ಸೈನಿಕರಿಗೆ ಪ್ರತಿರೋಧ ಒಡ್ಡುವುದನ್ನು ಬಿಟ್ಟಿದ್ದಾರೆ ಎಂದು ಪಾಕ್‌ ಆಕ್ರಮಿತ ಕಾಶ್ಮೀರ ಭಾಗದ ಸೇನಾ ಕಮಾಂಡರ್‌, ಮೂಲತಃ ವಿಜಯಪುರದ ಸಂತೋಷ್‌ ಹೇಳಿದರು.

ರಜೆಯ ಹಿನ್ನೆಲೆಯಲ್ಲಿ ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ಆಗಮಿಸಿದ್ದ ಅವರು ನಿಟ್ಟೂರು ಪ್ರೌಢಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಸಿಎಎ, ಎನ್‌ಪಿಆರ್‌ ಅನಿವಾರ್ಯ ಪ್ರಪಂಚದ ಬಹುತೇಕ ರಾಷ್ಟ್ರಗಳು ಸಿಎಎ, ಎನ್‌ಪಿಆರ್‌ನಂತಹ ಕಾನೂನುಗಳನ್ನು ಕಡ್ಡಾಯವಾಗಿ ಜಾರಿಗೆ ತಂದಿವೆ. ಭಾರತದಲ್ಲಿ ಮಾತ್ರ ಇದು ಜಾರಿ ಇರಲಿಲ್ಲ. ಪ್ರಸ್ತುತ ಕೇಂದ್ರ ಸರಕಾರ ಇದನ್ನು ಜಾರಿಗೊಳಿಸಲು ಮುಂದಾಗಿರುವುದು ಒಳ್ಳೆಯ ಕೆಲಸ. ಇದು ಆಗಲೇ ಬೇಕು. ಪ್ರತಿಯೊಂದು ದೇಶವೂ ಅಕ್ರಮ ನುಸುಳುಕೋರರನ್ನು, ಭಯೋತ್ಪಾದಕರನ್ನು ಹಿಮ್ಮೆಟ್ಟಿಸದೆ ಹೋದಲ್ಲಿ ಆ ದೇಶಕ್ಕೆ ಉಳಿಗಾಲವಿಲ್ಲ. ಜನರಿಗೆ ನೆಮ್ಮದಿಯಿಂದ ಜೀವನ ಮಾಡಲು ಕಷ್ಟವಾಗುತ್ತದೆ. ಆದ್ದರಿಂದ ಈ ಕಾನೂನು ಬರಲೇಬೇಕಿತ್ತು ಎಂದರು.

ಸೇನೆಗೆ ಸೇರ್ಪಡೆ ಸುಲಭ ಸಾಧ್ಯ
ಯುವಕರು ಸೇನೆಗೆ ಸೇರ್ಪಡೆಗೊಳ್ಳುವುದು ಈಗ ಹಿಂದಿಗಿಂತ ಸರಳ ಮತ್ತು ಸುಲಭವಾಗಿದೆ. ಸೇನೆ ಸೇರ್ಪಡೆಯ ಪ್ರತಿ ಮಾಹಿತಿಗಳನ್ನು ಆನ್‌ಲೈನ್‌ ತಂತ್ರಜ್ಞಾನದಂತಹ ಸುಧಾರಿತ ವ್ಯವಸ್ಥೆಗೆ ಅಳವಡಿಸಲಾಗಿದೆ. ತರಬೇತಿಯೂ ಉತ್ತಮವಾಗಿದ್ದು ಯುವಕರು ಸೇನೆಗೆ ಸೇರ್ಪಡೆಗೊಳ್ಳಲು ಮನಸ್ಸು ಮಾಡಬೇಕು ಎಂದರು.

ಸದ್ಯದಲ್ಲೇ ಯುವತಿಯರೂ ಕಮಾಂಡರ್‌
ಜಗತ್ತಿನ ಅನ್ಯ ರಾಷ್ಟ್ರಗಳಲ್ಲಿ ಈಗಾಗಲೇ ಸೇನೆಯ ಸೇವೆಗೆ ಯುವತಿಯರನ್ನು ಸೇರ್ಪಡೆಗೊಳಿ ಸಲಾಗು ತ್ತಿದೆ. ಇಸ್ರೇಲ್‌ ಸೇನೆಯಲ್ಲಿ ಯುವತಿಯರೇ ಅಧಿಕ ಸಂಖ್ಯೆಯಲ್ಲಿದ್ದಾರೆ. ಸದ್ಯದಲ್ಲೇ ನಮ್ಮ ಯುವತಿ ಯರು ಸೇನೆಯಲ್ಲಿ ಕಮಾಂಡರ್‌ಗಳಾಗಿ ಗಡಿ ಕಾಯುವ ಅವಕಾಶ ಸಿಗಲಿಏಆ ಎಂದರು.

ರಾಜ್ಯದಲ್ಲಿ ನಮ್ಮ ಉತ್ತರ ಕರ್ನಾಟಕ ಭಾಗಕ್ಕೆ ಹೋಲಿಸಿದರೆ ಕರಾವಳಿಯಲ್ಲಿ ಶಿಕ್ಷಣ ವ್ಯವಸ್ಥೆ ಅತ್ಯುತ್ತಮವಾಗಿದೆ. ಆದರೆ ಉತ್ತರ ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿ ಶಿಕ್ಷಣ ಸೇರಿದಂತೆ ಜನಜೀವನ ವ್ಯವಸ್ಥೆ ಇನ್ನೂ ನಿರೀಕ್ಷಿತ ಸುಧಾರಣೆ ಕಾಣದಿರುವುದು ವಿಷಾದನೀಯ. ಹುತಾತ್ಮ ಯೋಧ ಹನುಮಂತಪ್ಪ ಅವರ ಗ್ರಾಮಕ್ಕೆ ಇತ್ತೀಚೆಗೆ ಹೋಗಿದ್ದೆ. ಅಲ್ಲಿನ ರಸ್ತೆ, ಶಾಲೆ ಮತ್ತು ಆ ಯೋಧನ ಮನೆಯ ಗಂಭೀರ ಸ್ಥಿತಿ ಕಂಡು ಕಣ್ಣೀರು ಬಂತು ಎಂದರು. ಮುಖ್ಯೋಪಾಧ್ಯಾಯ ಮುರಳಿ ಕಡೆಕಾರ್‌, ಸಾಮಾಜಿಕ ಕಾರ್ಯಕರ್ತರಾದ ವಾಸುದೇವ ಭಟ್‌ ಪೆರಂಪಳ್ಳಿ ಮತ್ತು ಪ್ರಶಾಂತ್‌ ಶೆಟ್ಟಿ ಅಂಜಾರು ಉಪಸ್ಥಿತರಿದ್ದರು.

ಗುಮಾಸ್ತನಿಂದ ಕಮಾಂಡರ್‌ ತನಕ
ಸೈನಿಕನಾಗಬೇಕೆಂಬ ಹಂಬಲದಿಂದ ಗುಮಾಸ್ತನಾಗಿ ಸೇನೆಗೆ ಸೇರಿಕೊಂಡೆ. ಅನಂತರ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿ ಕಮಾಂಡರ್‌ ಆಗಿ ಭಡ್ತಿ ಪಡೆದ ಅವರು ಸಿಯಾಚಿನ್‌, ಲಡಾಖ್‌, ಪೂಂಛ… ಸುಂದರಬನಿ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಂತಹ ಅತೀ ಕೊರೆಯುವ ಚಳಿ ಇರುವ ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ ಕ್ಷಣಗಳನ್ನು ಎಳೆ ಎಳೆಯಾಗಿ ಮಕ್ಕಳೊಡನೆ ತೆರೆದಿಟ್ಟರು.

ಟಾಪ್ ನ್ಯೂಸ್

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.