“ಜನಪ್ರಿಯ ಯೋಜನೆಯ ಯಶಸ್ವಿಗೆ ಕೈಜೋಡಿಸಬೇಕು’
Team Udayavani, Mar 2, 2019, 12:30 AM IST
ಕೋಟ: ಕೇಂದ್ರ ಸರಕಾರದ ಆಯುಷ್ಮಾನ್ ಯೋಜನೆ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಯೋಜನೆಯಾಗಿದ್ದು, ಇದರ ಕಾರ್ಡ್ಗಳನ್ನು ಅಂಚೆ ಮೂಲಕ ತಲುಪಿಸಲಾಗುತ್ತದೆ. ಆದರೆ ಕೆಲವು ಕಡೆಗಳಲ್ಲಿ ವಿಳಾಸದಲ್ಲಿ ಅಲ್ಪ-ಸ್ವಲ್ಪ ಬದಲಾವಣೆಯಾಗುವುದರಿಂದ ಕಾರ್ಡ್ಗಳು ಸರಿಯಾಗಿ ತಲುಪುತ್ತಿಲ್ಲ. ಹೀಗಾಗಿ ಸ್ವಲ್ಪ ಕಷ್ಟವಾದರೂ ಕಾರ್ಡ್ಗಳನ್ನು ಸರಿಯಾಗಿ ತಲುಪಿಸುವ ಕಾರ್ಯವನ್ನು ಅಂಚೆ ಇಲಾಖೆಯವರು ಮಾಡಬೇಕು. ಈ ಮೂಲಕ ಜನಪ್ರಿಯ ಯೋಜನೆಯ ಯಶಸ್ವಿಗೆ ಕೈಜೋಡಿಸಬೇಕು ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಅವರು ಮಾ. 1ರಂದು ಕೋಟ ಉಪ ಅಂಚೆ ಕಚೇರಿಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಸ್ಥಳೀಯಾಡಳಿತ ಪ್ರತಿನಿಧಿಗಳನ್ನು ವಿಶ್ವಾಸಕ್ಕೆಸೂಚನೆ
ಸ್ಥಳೀಯ ಜನಪ್ರತಿನಿಧಿಗಳು ಕಾರ್ಯಕ್ರಮಕ್ಕೆ ಗೈರಾಗಿದ್ದರು. ಈ ಕುರಿತು ವಿಷಯ ಪ್ರಸ್ತಾವಿಸಿ ಸಂಸದರು, ಇಲಾಖೆಯ ಸಂಹಿತೆಯಂತೆ ಆಮಂತ್ರಣವನ್ನು ಮುದ್ರಿಸಿದರು ಕೂಡ ತಳಮಟ್ಟದಲ್ಲಿ ಜನರ ಸೇವೆಯನ್ನು ಮಾಡುವ ಹಾಗೂ ಸರಕಾರಿ ಇಲಾಖೆಯ ಜತೆ ಸಮನ್ವಯಕ್ಕೆ ಸಹಕರಿಸುವ ಸ್ಥಳೀಯಾಡಳಿತ ಪ್ರತಿನಿಧಿಗಳ ಹೆಸರನ್ನು ಆಮಂತ್ರಣದಲ್ಲಿ ಮುದ್ರಿಸಬೇಕು ಎಂದು ಕಿವಿಮಾತು ಹೇಳಿದರು.
49ಲಕ್ಷ ರೂನಲ್ಲಿ ನೂತನ ಕಟ್ಟಡ
ಕೋಟ ಅಂಚೆ ಕಚೇರಿ 1954ರಲ್ಲಿ ಇ.ಡಿ.ಎಸ್.ಒ. ಆಗಿ ಕಾರ್ಯಾರಂಭಗೊಂಡಿತು ಹಾಗೂ 1958ರಲ್ಲಿ ಉಪ ಅಂಚೆಕಚೇರಿಯಾಗಿ ಮೇಲ್ದರ್ಜೆಗೇರಿ ಇದುವರೆಗೆ ಬಾಡಿಗೆ ಕಟ್ಟಡಲ್ಲಿ ಕಾರ್ಯನಿರ್ವಹಿಸುತಿತ್ತು. ಇದೀಗ 49ಲಕ್ಷ ರೂ.ವೆಚ್ಚದಲ್ಲಿ ಕಟ್ಟಡ ನಿರ್ಮಾಣಗೊಂಡಿದೆ ಎಂದು ಇಲಾಖೆಯ ಉಡುಪಿ ವಿಭಾಗದ ಅಧೀಕ್ಷಕ ಸುಧಾಕರ ದೇವಾಡಿಗ ತಿಳಿಸಿದರು.ದಕ್ಷಿಣ ಕರ್ನಾಟಕ ವಲಯ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಹಕರಿಸಿದವರಿಗೆ ಅಭಿನಂದನೆ
ಸಾಮಾಜಿಕ ಹೋರಾಟಗಾರರಾದ ಕೋಟ ಗಿರೀಶ್ ನಾಯಕ್ ಅವರು ಇಲಾಖೆಯೊಂದಿಗೆ ನಡೆಸಿದ ಸತತ ಪತ್ರ ವ್ಯವಹಾರ ಹಾಗೂ ಒತ್ತಡದಿಂದ ಕಟ್ಟದ ಮಂಜೂರಾಗಿದೆ ಎಂದು ಗಿರೀಶ್ ನಾಯಕ್ ಅವರಿಗೆ ಇಲಾಖೆಯ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು ಹಾಗೂ ಸಹಕರಿಸಿದ ಶ್ರೀಕಾಂತ್ ಶೆಣೈ ಅವರನ್ನು ಅಭಿನಂದಿಸಲಾಯಿತು. ಇಲಾಖೆಯ ಪೂರ್ಣಿಮ ಜನಾರ್ಧನ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ