ಕಸಾಪದಿಂದ ಸರಕಾರಿ ಶಾಲೆಗಳಲ್ಲಿ ಗ್ರಂಥಾಲಯಗಳಿಗೆ ಓದುವ ಸ್ಪರ್ಶ

ಜಿಲ್ಲಾ ಗ್ರಂಥಾಲಯದಿಂದ ಕಾರ್ಕಳ ತಾ|ನ ಹನ್ನೆರಡು ಸರಕಾರಿ ಶಾಲೆಗಳಿಗೆ 1 ಲಕ್ಷ ರೂ. ಮೌಲ್ಯದ ಪುಸ್ತಕ ಕೊಡುಗೆ

Team Udayavani, Nov 24, 2019, 5:32 AM IST

LIBRARY

ಬೆಳ್ಮಣ್‌: ಸರಕಾರ ಹಾಗೂ ಶಿಕ್ಷಣ ಇಲಾಖೆ ಕನ್ನಡ ಮಾಧ್ಯಮ ಶಾಲೆಗಳ ಮೇಲೆ ಅದರಲ್ಲೂ ಸರಕಾರಿ ಶಾಲೆಗಳ ಕೇವಲ ಪ್ರಚಾರಕ್ಕಾಗಿ ವಿವಿಧ ಕೊಡುಗೆಗಳ ಘೋಷಣೆ ಮಾಡುತ್ತಿದ್ದಂತೆಯೇ ಉಡುಪಿ ಜಿಲ್ಲಾ ಗ್ರಂಥಾಲಯ ಇಲಾಖೆ ಕಾರ್ಕಳ ತಾಲೂಕಿನ 12 ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ ಸುಮಾರು 1 ಲಕ್ಷ ರೂ. ಮೌಲ್ಯದ ವಿವಿಧ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದೆ.

ಕಾರ್ಕಳ ಕಸಾಪ ಉಸ್ತುವಾರಿ
ಕಾರ್ಕಳ ತಾ| ಕನ್ನಡ ಸಾಹಿತ್ಯ ಪರಿಷತ್‌ನ ಮುತುವರ್ಜಿಯಲ್ಲಿ ಈ ಪುಸ್ತಕಗಳನ್ನು ಆಯಾ ಶಾಲೆಗಳ ಗ್ರಂಥಾಲಯಗಳಿಗೆ ನೀಡಲಾಗಿದ್ದು ಮುಂದೆ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಹೈಟೆಕ್‌ ಆಂಗ್ಲ ಮಾಧ್ಯಮ ಶಾಲೆಗಳ ಮಕ್ಕಳಂತೆ ತಮ್ಮ ಶಾಲೆಗಳಲ್ಲಿ ಲೈಬ್ರೆರಿಯಲ್ಲಿ ಕುಳಿತು ಕತೆ, ಕವನ, ಕಾದಂಬರಿ ಓದಬಹುದಾಗಿದೆ. ಜಿಲ್ಲಾ ಗ್ರಂಥಾಲಯ, ಕಾರ್ಕಳ ತಾ| ಕಸಾಪದ ಈ ಶೈಕ್ಷಣಿಕ ನಡೆ ಸಾಹಿತ್ಯಾಸಕ್ತರ ಮೆಚ್ಚುಗೆಗೆ ಪಾತ್ರವಾಗಿದೆ. ಕಾರ್ಕಳ ತಾ| ಕಸಾಪ ಅಧ್ಯಕ್ಷ, ಮುಂಡ್ಕೂರು ವಿದ್ಯಾವರ್ಧಕ ಪ್ರೌಢ ಶಾಲೆಯ ಕನ್ನಡ ಅಧ್ಯಾಪಕರು ಈ ವಿಶೇಷ ಸಾಹಿತ್ಯಿಕ ಪರಿಕಲ್ಪನೆಯ ರೂವಾರಿ ಯಾಗಿದ್ದು, ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿ ನಳಿನಿ ಜಿ.ಐ. ಪುಸ್ತಕಗಳ ಕೊಡುಗೆಗೆ ಬೆನ್ನುಡಿಯಾಗಿದ್ದರು.

12 ಶಾಲೆಗಳಿಗೆ ತಲಾ 500 ಪುಸ್ತಕ
ಬೆಳ್ಮಣ್‌ ಸರಕಾರಿ ಪ.ಪೂ. ಕಾಲೇಜಿನಲ್ಲಿ ನಡೆದ ನಂದಳಿಕೆ ಕವಿ ಮುದ್ದಣನ 150ನೇ ವರ್ಷಾಚರಣೆಯ ಕಾರ್ಯಕ್ರಮದಲ್ಲಿ ಕಾರ್ಕಳ ತಾ|ನ 10 ಸರಕಾರಿ ಕನ್ನಡ ಶಾಲೆಗಳಿಗೆ ತಲಾ 500 ಪುಸ್ತಕ ವಿತರಿಸಲಾಯಿತು. ಕಾರ್ಕಳ ಶಾಸಕ ವಿ.. ಸುನಿಲ್‌ ಕುಮಾರ್‌ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗರ ಸಹಿತ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಸರಕಾರಿ ಪ.ಪೂ. ಕಾಲೇಜು ಶಿರ್ಲಾಲು, ಬೆಳ್ಮಣ್‌, ಸರಕಾರಿ ಪ್ರೌಢಶಾಲೆ ಕಲ್ಯಾ, ಎಣ್ಣೆಹೊಳೆ, ಭುವನೇಂದ್ರ, ಸರಕಾರಿ ಮಾದರಿ ಹಿ. ಪ್ರಾ. ಶಾಲೆ ಮುಂಡ್ಕೂರು, ಬಸ್ರಿ ಬೈಲೂರು, ನಲ್ಲೂರು, ಕೂಡಬೆಟ್ಟು ಮಾಳ, ಹೊಸ್ಮಾರು, ಮುಂಡ್ಲಿ ಬಂಗ್ಲೆಗುಡ್ಡೆ ಕೆರ್ವಾಸೆ, ಬಜಗೋಳಿ ಶಾಲೆಗಳಿಗೆ ಈ ಪುಸ್ತಕದ ಹಸ್ತಾಂತರ ನಡೆಯಿತು.

ಮುದ್ದಣನ ಸಂಸ್ಮರಣೆ ಗ್ರಂಥಾಲಯ
ಈ ಮೇಲಿನ ಎಲ್ಲ ಶಾಲೆಗಳಲ್ಲಿ ನಂದಳಿಕೆಯ ವರಕವಿ ಮುದ್ದಣನ ಹೆಸರಲ್ಲಿ ಗ್ರಂಥಾಲಯಗಳನ್ನು ಆರಂಭಿಸಲು ಕಸಾಪ ದ್ದೇಶಿಸಿದ್ದು ಎಲ್ಲ ಶಾಲೆಗಳಿಂದ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ. ಈ ಬಗ್ಗೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಹಿತ ಇತರ ಸಾಹಿತ್ಯಾಸಕ್ತರಿಂದಲೂ ಸಕಾರಾತ್ಮಕ ಬೆಂಬಲ ಪ್ರಕಟವಾಗಿತ್ತು.ಪಂಚಾಯತ್‌ಗಳ ಗ್ರಂಥಾಲಯ ಚುರುಕಾಗಬೇಕಾಗಿದೆ ಪ್ರಸ್ತುತ ಸರಕಾರ, ಇಲಾಖೆಗಳ ಯೋಜನೆಯಂತೆ ಎಲ್ಲ ಪಂಚಾಯತ್‌ಗಳಲ್ಲಿಯೂ ಸುಸಜ್ಜಿತ ಗ್ರಂಥಾಲಯ ಇರಬೇಕೆಂಬ ಆದೇಶ ಇದೆ. ಈಗಾಗಲೇ ಹೆಚ್ಚಿನ ಪಂಚಾ ಯತ್‌ಗಳಲ್ಲಿ ಅನುಷ್ಠಾನಕ್ಕೆ ಬಂದಿದ್ದರೂ ಗ್ರಾಮಸ್ಥರಿಗೆ ಈ ಬಗ್ಗೆ ಮಾಹಿತಿ ಕೊರತೆ ಇದ್ದು ಆಯಾ ಪಂಚಾಯತ್‌ ಆಡಳಿತ ಈ ಬಗ್ಗೆ ಇನ್ನಷ್ಟು ಕ್ರಿಯಾಶೀಲವಾಗಬೇಕಾದ ಅನಿವಾರ್ಯತೆ ಇದೆ.

ಶಾಲೆಗಳಲ್ಲೂ ಲೈಬ್ರೆರಿ ಅವಧಿ ಕಡ್ಡಾಯವಾಗಲಿ
ಶಾಲೆಗಳ ಗ್ರಂಥಾಲಯಗಳಲ್ಲಿ ಬಿಡುವಿನ ಅವಧಿಗಳಲ್ಲಿ ಮಕ್ಕಳು ಗ್ರಂಥಾಲಯದ ಬಳಕೆ ಮಾಡಿದರೆ ಸಾಕಷ್ಟು ಸಮಯ ಸಾಲದೆನ್ನುವ ಉದ್ದೇಶದಿಂದ ಲೈಬ್ರೆರಿ ಗಾಗಿಯೇ ಪ್ರತ್ಯೇಕ ಅವಧಿಯನ್ನು ಸೀಮಿತ ಗೊಳಿಸಿದರೆ ಉತ್ತಮ ಎಂಬ ಮಾತೂ ಕೇಳಿ ಬರುತ್ತಿದೆ. ಈ ಬಗ್ಗೆ ಸಾಕಷ್ಟು ಚಿಂತನೆಯ ಅಗತ್ಯವೂ ಇದೆ. ಜಿಲ್ಲಾ ಗ್ರಂಥಾಲಯ ಹಾಗೂ ಕಾರ್ಕಳ ತಾ| ಕಸಾಪದ ಈ ನಡೆ ಸಾರ್ವತ್ರಿಕ ಶ್ಲಾಘನೆಗೆ ಪಾತ್ರವಾಗಿದೆ.

ಇಲಾಖೆಯ ಸಹಕಾರ ಇದೆ
ಕಾರ್ಕಳ ತಾ| ಕನ್ನಡ ಸಾಹಿತ್ಯ ಪರಿಷತ್‌ನ ಉತ್ತಮ ಪರಿಕಲ್ಪನೆಗೆ ನಮ್ಮ ಇಲಾಖೆ ಕೈ ಜೋಡಿಸಿದೆ. ಈ ಹಿಂದೆಯೂ ಬೈಂದೂರು ಶಾಲೆಯಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿಯೂ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಗಿತ್ತು. ಅರ್ಥಪೂರ್ಣ ಸಾಹಿತ್ಯಿಕ ಚಟುವಟಿಕೆ ನಡೆಸುವವರಿಗೆ ನಮ್ಮ ಇಲಾಖೆಯ ಸಹಕಾರ ಇದೆ.
-ನಳಿನಿ ಜಿ.ಐ., ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿ

ಓದುವ ಅಭಿರುಚಿ ಹೆಚ್ಚಿಸಲು ನೆರವು
ಕವಿ ಮುದ್ದಣನ ಸ್ಮರಣೆ ಮಾಡಬೇಕಾದುದು ನಮ್ಮ ಕರ್ತವ್ಯ, ಈ ನಿಟ್ಟಿನಲ್ಲಿ ಸರಕಾರಿ ಕನ್ನಡ ಮಾಧ್ಯಮ ಶಾಲೆಯ ಮಕ್ಕಳಲ್ಲಿ ಓದುವ ಅಭಿರುಚಿ ಹುಟ್ಟಿಸಲು ಜಿಲ್ಲಾ ಕೇಂದ್ರ ಗ್ರಂಥಾಲಯದ ನೆರವಿನಿಂದ ಸುಮಾರು 12 ಶಾಲೆಗಳಿಗೆ ತಲಾ 500 ಪುಸ್ತಕ ನೀಡಿದ್ದೇವೆ. ಮುಂದೆಯೂ ನಮ್ಮ ಸಾಹಿತ್ಯಿಕ ಸೇವೆ ನಿರಂತರವಾಗಲಿದೆ.
-ಪ್ರಭಾಕರ ಶೆಟ್ಟಿ ಕೊಂಡಳ್ಳಿ,ಕಾರ್ಕಳ ತಾಲೂಕು ಕಸಾಪ ಅಧ್ಯಕ್ಷ

ಟಾಪ್ ನ್ಯೂಸ್

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.