2ನೇ ವರ್ಷದತ್ತ ತ್ಯಾಜ್ಯ ಮುಕ್ತ ಮಾದರಿ ಗ್ರಾಮ ವಂಡ್ಸೆ

ಗೊಬ್ಬರದಿಂದ ತಿಂಗಳಿಗೆ 20 ಸಾವಿರ ರೂ. ಆದಾಯ

Team Udayavani, Jul 13, 2019, 5:39 AM IST

1107KLRE1-A

ವಿಶೇಷ ವರದಿ- ಕೊಲ್ಲೂರು: ಸ್ವಚ್ಛ ಗ್ರಾಮ ಪರಿಕಲ್ಪನೆಯಲ್ಲಿ ವಂಡ್ಸೆ ಗ್ರಾ.ಪಂ. ಸ್ಥಾಪಿಸಿರುವ ಘನ, ದ್ರವ ತ್ಯಾಜ್ಯ ವಿಲೇವಾರಿ ಘಟಕ ಯಶಸ್ವಿ 2ನೇ ವರ್ಷಕ್ಕೆ ಪಾದಾರ್ಪಣೆಗೈದಿದ್ದು, ರಾಜ್ಯಕ್ಕೆ ಮಾದರಿಯಾಗಿದೆ.

ತಿಂಗಳಿಗೆ 20 ಸಾ. ರೂ. ಲಾಭ
ಮುಂದಿನ ಸೆಪ್ಟಂಬರ್‌ಗೆ 2 ವರ್ಷ ತುಂಬುತ್ತಿರುವ ಘಟಕದಲ್ಲಿ ಹಸಿ ಹಾಗೂ ಒಣ ಕಸಗಳನ್ನು ಪ್ರತ್ಯೇಕವಾಗಿ ವಿಲೇವಾರಿಗೊಳಿಸಿ, ಅವುಗಳನ್ನು ನಾನಾ ರೀತಿಯಲ್ಲಿ ಬಳಸಲಾಗುತ್ತಿದೆ. ಇದರಿಂದ 20 ಸಾವಿರ ರೂ. ಲಾಭವೂ ಸಾಧ್ಯವಾಗಿದೆ.

ಮಾದರಿ ಕಾರ್ಯ
ಎಸ್‌.ಎಲ್‌.ಆರ್‌.ಎಂ. ಸಂಘ ವಂಡ್ಸೆ ಹೆಸರಿನಲ್ಲಿ ಸಂಘ ನೋಂದಣಿಯಾಗಿ 1 ವರ್ಷ ಪೂರೈಸಿದೆ. ಇದರಲ್ಲಿ ಮೇಲ್ವಿಚಾರಕಿ, ವಾಹನ ಚಾಲಕ, ಕಾರ್ಮಿಕರು ಸಹಿತ 8 ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಮಾಸಿಕ ಸಂಬಳ ಸಹಿತ ರೂ. 95000 ಸಾವಿರ ಖರ್ಚು ವೆಚ್ಚವಿದೆ. ಇವೆಲ್ಲವನ್ನೂ ನಿಭಾಯಿಸಿ 2019ರ ಜನವರಿಯಿಂದ ಈವರೆಗೆ ಪ್ರತೀ ತಿಂಗಳು ರೂ. 15000 ದಿಂದ 20000 ದಷ್ಟು ಲಾಭ ಪಡೆದಿದೆ. ಲಾಭಾಂಶವನ್ನು ಸಂಘದ ಬ್ಯಾಂಕ್‌ ಖಾತೆಯಲ್ಲಿ ಠೇವಣಿ ಇಡಲಾಗಿದೆ.

ವ್ಯವಸ್ಥಿತ ಪ್ರಯತ್ನ
ಹರವರಿ, ಕಳಿ, ಅಡಿಕೆಕೊಡ್ಲು, ನೂಜಾಡಿ, ಅಬ್ಬಿ, ಮಾವಿನಕಟ್ಟೆ, ಉದ್ದಿನಬೆಟ್ಟು, ಶಾರ್ಕೆ ಸಹಿತ ಸಮೀಪದ ಚಿತ್ತೂರು ಗ್ರಾಮದ ಮಾರಣಕಟ್ಟೆ, ಕಂಚಿನಕೊಡ್ಲು, ಹಾರ್ಮಣ್ಣು ಗ್ರಾಮಗಳನ್ನು ಆಯ್ಕೆ ಮಾಡಿ ಕಸ ಸಂಗ್ರಹಿಸಲಾಗುತ್ತಿದೆ.

ಪ್ರತಿ ಮನೆಗಳಿಂದ ರೂ. 30 ರೂ., ಸಣ್ಣ ಅಂಗಡಿಗಳಿಗೆ 150 ರೂ., ದೊಡ್ಡ ಅಂಗಡಿಗಳಿಗೆ 200 ರೂ. ರಿಂದ 300 ರೂ. ವರೆಗೆ ತ್ಯಾಜ್ಯ ಸಂಗ್ರಹದ ಶುಲ್ಕ ವಿಧಿಸಲಾಗುತ್ತದೆ. ರೆಸ್ಟೋರೆಂಟ್‌ ಹಾಗೂ ಬಾರ್‌ಗಳಿಗೆ 1 ಸಾವಿರ ರೂ., ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ 500 ರೂ. ವಿಧಿಸಲಾಗುತ್ತದೆ.

ವಂಡ್ಸೆ ಗ್ರಾಮದ 700 ಮನೆ, 150 ಅಂಗಡಿಗಳಿಗೆ 850 ಹಸಿರು ಹಾಗೂ ಕೆಂಪು ಬಕೆಟ್‌ ವ್ಯವಸ್ಥೆಗೊಳಿಸಲಾಗಿದೆ. ಚಿತ್ತೂರು ಗ್ರಾ.ಪಂ ವ್ಯಾಪ್ತಿಯಲ್ಲಿ 262 ಪ್ರತ್ಯೇಕ ಬಕೆಟ್‌ ನೀಡಲಾಗಿದೆ.

ವಿವಿಧ ರಾಜ್ಯಗಳ ತಂಡ ವೀಕ್ಷಣೆ
ಉತ್ತರ ಭಾರತ ಸಹಿತ ದಕ್ಷಿಣ ಭಾರತದ ನಾನಾ ಕಡೆಗಳಿಂದ ವಂಡ್ಸೆ ಎಸ್‌.ಎಲ್‌.ಆರ್‌.ಎಂ. ವೀಕ್ಷಣೆಗೆ ತಂಡಗಳು ಬಂದಿವೆ. ಇಲ್ಲಿನ ಕೆಲಸ ಅವರ ಮುಕ್ತ ಶ್ಲಾಘನೆಗೆ ಪಾತ್ರವಾಗಿದೆ.

ಪ್ಲಸ್‌ ಪಾಯಿಂಟ್‌
ಗ್ರಾಮಸ್ಥರ ಸಂಪೂರ್ಣ ಸಹಕಾರದೊಡನೆ ಸ್ವಚ್ಛ ಗ್ರಾ.ಪಂ ಎಂಬ ಹೆಗ್ಗಳಿಕೆಗೆ ವಂಡ್ಸೆ ಸಾಕ್ಷಿಯಾಗಿದೆ. ನಿರ್ವಹಣೆಯ ಜವಾಬ್ದಾರಿ ಹೊತ್ತಿರುವ ಸಂಘವು ವ್ಯವಸ್ಥಿತವಾಗಿ ನಿರ್ವಹಿಸುತ್ತಿರುವುದು ಪ್ಲಸ್‌ ಪಾಯಿಂಟ್‌.
-ಉದಯ ಕುಮಾರ್‌ ಶೆಟ್ಟಿ,
ಅಧ್ಯಕ್ಷರು, ವಂಡ್ಸೆ ಗ್ರಾ.ಪಂ

ಕ್ರಮಬದ್ಧ ಕಾರ್ಯ
ಕಳೆದ ಜನವರಿಯಿಂದ ಲಾಭದಿಂದ ಸಾಗುತ್ತಿರುವ ಎಸ್‌.ಎಲ್‌.ಆರ್‌.ಎಂ. ಘಟಕವು ಕ್ರಮಬದ್ಧವಾಗಿ ಕಾರ್ಯವನ್ನು ನಡೆಸಿಕೊಂಡು ಹೋಗುತ್ತಿದೆ.
-ವಿಜಯಲಕ್ಷ್ಮೀ, ಮೇಲ್ವಿಚಾರಕಿ,
ಎಸ್‌.ಎಲ್‌.ಆರ್‌.ಎಂ. ಘಟಕ ವಂಡ್ಸೆ

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.