ಬಸ್ರೂರು ಪೇಟೆಯಲ್ಲಿ ಬೇಕು ಸುಸಜ್ಜಿತ ಸರ್ಕಲ್‌


Team Udayavani, Jan 26, 2020, 8:40 PM IST

2401BAS5

ಬಸ್ರೂರು :ಬಸ್ರೂರು ಬಸ್‌ ನಿಲ್ದಾಣದಲ್ಲಿ ವಾಹನಗಳ ಸಂಚಾರ ಈಗ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ಕಂಡ್ಲೂರು, ಸಿದ್ಧಾಪುರ ಕಡೆಯಿಂದ, ಹುಣ್ಸೆಮಕ್ಕಿ ಹಾಲಾಡಿ ಕಡೆಯಿಂದ ಬರುವ ವಾಹನಗಳು ಹಾಗೂ ಕುಂದಾಪುರ ಕಡೆಯಿಂದ ಬರುವ ವಾಹನಗಳು ನಿರಂತರವಾಗಿ ಸಂಚರಿಸುತ್ತಿವೆ. ಇಲ್ಲಿ ಮುಂದಿನ ದಿನಗಳಲ್ಲಿ ಸುಸಜ್ಜಿತ ಸರ್ಕಲ್‌ ಅಗತ್ಯವಿದ್ದು, ಈ ಬೇಡಿಕೆಯನ್ನು ಈಡೇರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಬಸ್‌ ನಿಲ್ದಾಣದಲ್ಲಿ ದಿ| ರಮೇಶ್‌ ಶೆಟ್ಟಿ ಸ್ಮಾರಕದ ಒಂದು ಬಸ್‌ ನಿಲ್ದಾಣವಿದ್ದು ಎದುರುಗಡೆ ವಿಧಾನ ಪರಿಷತ್‌ ಸದಸ್ಯರ ಅನುದಾನದಿಂದ ನಿರ್ಮಾಣವಾದ ಮತ್ತೂಂದು ತಂಗುದಾಣವಿದೆ. ದಿ| ರಮೇಶ್‌ ಶೆಟ್ಟಿ ಸ್ಮಾರಕದ ಒಂದು ಬಸ್‌ ನಿಲ್ದಾಣ ಭಿಕ್ಷುಕರು ನೆಲೆಸುವ ತಾಣವಾಗಿದೆ. ಇವೆಲ್ಲವನ್ನು ಪಕ್ಕಕ್ಕಿಟ್ಟು ಸೂಕ್ಷವಾಗಿ ಅವಲೋಕಿಸಿದಾಗ ವಿಶಾಲವಾದ ಬಸ್‌ ತಂಗುದಾಣದ ಎದುರು ಒಂದು ಸರ್ಕಲ್‌ ನಿರ್ಮಿಸಿದರೆ ಉತ್ತಮ ಎನ್ನುವುದು ಊರವರ ವಾದ.

ಕನಿಷ್ಠ ಬಸ್‌ ನಿಲ್ದಾಣದಿಂದ ನೂರು ಮೀ. ಪಶ್ವಿ‌ಮಕ್ಕೆ, ನೂರು ಮೀ. ಪೂರ್ವ ದಿಕ್ಕಿಗೆ ರಸ್ತೆಯನ್ನು ಅಗಲ ಮಾಡಿದಾಗ ಎರಡು ರಸ್ತೆಗಳನ್ನು ನಿರ್ಮಿಸಬಹುದಾಗಿದೆ. ಸರಕಾರಿ ಹಾಗೂ ಖಾಸಗಿ ಬಸ್‌ಗಳ ಸ್ಪರ್ಧಾತ್ಮಕ ಓಟ ಇಲ್ಲಿ ನಡೆಯುತ್ತಿದ್ದು ಇದಕ್ಕೆ ಸರ್ಕಲ್‌ ಪರ್ಯಾಯ ವ್ಯವಸ್ಥೆಯಾಗಿ ಕಂಡು ಬರುತ್ತದೆ. ಈ ಹಿನ್ನೆಲೆಯಲ್ಲಿ ಬಸ್ರೂರು ಬಸ್‌ ನಿಲ್ದಾಣದಲ್ಲಿ ಒಂದು ಸರ್ಕಲ್‌ ನಿರ್ಮಾಣ ಅಗತ್ಯವಾಗಿದೆ ಎನ್ನುವುದು ಗ್ರಾಮಸ್ಥರ ಅನಿಸಿಕೆ.

ಸುಗಮ ಸಂಚಾರ
ಬಸ್ರೂರು ಬಸ್‌ ನಿಲ್ದಾಣದ ಸಮೀಪ ವಿಶಾಲವಾದ ಜಾಗ ವಿದ್ದು ಲೋಕೋಪಯೋಗಿ ಇಲಾಖೆ ಅಥವಾ ರಾಜ್ಯ ಹೆದ್ದಾರಿ ವಿಭಾಗದವರು ಇಲ್ಲೊಂದು ಸರ್ಕಲ್‌ ನಿರ್ಮಿಸಿದರೆ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಂತಾಗುತ್ತದೆ. ಶೀಘ್ರ ಬಸ್ರೂರುಬಸ್‌ ನಿಲ್ದಾಣದ ಸಮೀಪ ಸರ್ಕಲ್‌ ನಿರ್ಮಾಣವಾಗುತ್ತದೆ ಎನ್ನುವ ಆಶಯ ನಮ್ಮದು. ಈ ಜಾಗ ಗ್ರಾ.ಪಂ. ವ್ಯಾಪ್ತಿಗೆ ಬರುವುದಿಲ್ಲ.
-ನಾಗರಾಜ ಗಾಣಿಗ,
ಅಧ್ಯಕ್ಷರು, ಬಸ್ರೂರು ಗ್ರಾ.ಪಂ.

ಟಾಪ್ ನ್ಯೂಸ್

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.