ಚಿಕಿತ್ಸೆಗಾಗಿ ವೇಷ ಧರಿಸಿ ಹಣ ಸಂಗ್ರಹಕ್ಕೆ ಮುಂದಾದ ಯುವಕ

ಮಾರಕ ಕಾಯಿಲೆಯಿಂದ ಬಳಲುತ್ತಿರುವ ಹೆಂಗವಳ್ಳಿಯ ಪುಟ್ಟ ಬಾಲೆ

Team Udayavani, Feb 14, 2020, 7:47 AM IST

1202KDPP9

ಬೋನ್‌ ಮ್ಯಾರಿಯೋ' ಮಾರಕ ಕಾಯಿಲೆಯಿಂದ ಬಳಲುತ್ತಿರುವ 4ರ ಹರೆಯದ ತನುಶ್ರೀ.

ಕುಂದಾಪುರ: ಅನಾರೋಗ್ಯದಿಂದ ಬಳಲುತ್ತಿರುವ ಪುಟ್ಟ ಬಾಲೆಯ ಚಿಕಿತ್ಸೆಯ ವೆಚ್ಚಕ್ಕಾಗಿ ಲಕ್ಷಾಂತರ ರೂ. ಹಣದ ಅಗತ್ಯವಿದ್ದು, ಅದಕ್ಕಾಗಿ ವರ್ಲ್ಡ್ ಕುಂದಾಪುರಿಯನ್‌ ಹಾಗೂ ನೆರಳು ಸಂಘಟನೆಯ ಯುವಕರ ಸಹಕಾರದೊಂದಿಗೆ ಯುವಕನೊಬ್ಬ ವಿಶೇಷ ವೇಷ ಧರಿಸಿ ಫೆ. 14 ರ ಮಂದಾರ್ತಿ ಜಾತ್ರೆ, ಬಳಿಕ ಕುಂದಾಪುರ, ಕೋಟೇಶ್ವರ ಪೇಟೆಗಳಲ್ಲಿ ಹಣ ಸಂಗ್ರಹಿಸುವ ಮೂಲಕ ನೆರವಾಗಲು ಮುಂದಾಗಿದ್ದಾರೆ.

ತೊಂಭತ್ತು ಗ್ರಾಮದ ಹೆಂಗವಳ್ಳಿ ಮೂಡಬೆಟ್ಟಿನ ಬಾಬಣ್ಣ ಪೂಜಾರಿ ಹಾಗೂ ಗೀತಾ ಪೂಜಾರ್ತಿ ಅವರ ಪುತ್ರಿ 4 ಹರೆಯದ ತನುಶ್ರಿ “ಬೋನ್‌ ಮ್ಯಾರಿಯೋ’ ಎನ್ನುವ ಮಾರಕ ಕಾಯಿಲೆಯಿಂದ ಬಳಲುತ್ತಿದ್ದಾಳೆ. ಪುಟ್ಟ ಬಾಲಕಿಯ ಚಿಕಿತ್ಸೆಗೆ ಹಣದ ಅವಶ್ಯಕತೆಯಿದೆ. ಇದನ್ನು ತಿಳಿದ ನೆರಳು ಸಂಘಟನೆಯ ಸದಸ್ಯ ಹೆಬ್ರಿಯ ವಿಜೇಂದ್ರ ಆಚಾರ್ಯ ಅವರು ವೇಷ ಹಾಕಿ, ಈ ಮಗುವಿಗೆ ಧನ ಸಹಾಯ ಮಾಡಲು ಮುಂದಾಗಿದ್ದಾರೆ.

ಫೆ. 14ರಂದು ಬೆಳಗ್ಗೆಯಿಂದ ಸಂಜೆಯವರೆಗೆ ವಿಜೇಂದ್ರ ಆಚಾರ್ಯ ಅವರು ಮಂದಾರ್ತಿ ಜಾತ್ರೆಯಲ್ಲಿ ಹಾಗೂ ಫೆ. 15ರಂದು ಕುಂದಾಪುರ, ಕೋಟೇಶ್ವರದ ಆಸುಪಾಸು ಪ್ರದೇಶಗಳಲ್ಲಿ ವಿಶೇಷ ವೇಷ ಧರಿಸಿ ಹಣ ಸಂಗ್ರಹಿಸಲಿದ್ದಾರೆ.

ವಿಜೇಂದ್ರ ಆಚಾರ್ಯ ಅವರಿಗೆ ನೆರಳು ಸಂಘಟನೆ, ವರ್ಲ್ಡ್ ಕುಂದಾಪುರಿಯನ್‌ ಯುವಕರ ತಂಡ ಸಹಕಾರ ನೀಡಿದ್ದು, ಇವರು ಕೂಡ ಧನ ಸಂಗ್ರಹಕ್ಕೆ ಕೈಜೋಡಿಸಿದ್ದಾರೆ. ವಿಜೇಂದ್ರ ಆಚಾರ್ಯ ಅವರು ಹಾಕಲಿರುವ ವೇಷಕ್ಕೆ ಸುಮಾರು 12 ಸಾವಿರ ರೂ. ಖರ್ಚಾಗಲಿದ್ದು, ಅದನ್ನು ಈ ವರ್ಲ್ಡ್ ಕುಂದಾ ಪುರಿಯನ್‌, ನೆರಳು ತಂಡದವರೇ ಭರಿಸಲಿದ್ದಾರೆ.

ಮಾರಕ ಕಾಯಿಲೆಗೆ ತುತ್ತಾಗಿ, ಚಿಕಿತ್ಸೆಗೊಳಗಾಗಿ ಹೊಸ ಬದುಕಿಗೆ ಹಂಬಲಿಸುತ್ತಿರುವ ಪುಟ್ಟ ಬಾಲೆಯ ಚಿಕಿತ್ಸೆಗೆ ಎಲ್ಲ ಒಟ್ಟಾಗಿ ಮಾನವೀಯ ನೆಲೆಯಲ್ಲಿ ಸ್ಪಂದಿಸಲು ಮುಂದಾದ ವಿಜೇಂದ್ರ ಆಚಾರ್ಯ ಅವರ ಪ್ರಯತ್ನ ಹಾಗೂ ಯುವಕರ ಶ್ರಮಕ್ಕೆ ಎಲ್ಲೆಡೆಯಿಂದ ಶ್ಲಾಘನೆ ವ್ಯಕ್ತವಾಗಿದೆ.

ನೀವೂ ನೆರವಾಗಬಹುದು
ಈ ಬಾಲೆಯ ಚಿಕಿತ್ಸೆಗೆ 18ರಿಂದ 20 ಲಕ್ಷ ರೂ. ಬೇಕಾಗಬಹುದು ಎಂದು ಬೆಂಗಳೂರಿನ ನಾರಾಯಣ ಹೃದಯಾಲಯದ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆದರೆ ಇವರದು ಬಡ ಕುಟುಂಬವಾಗಿದ್ದು, ಈ ಪುಟ್ಟ ಬಾಲೆ ತನುಶ್ರೀಗೆ ನೀವು ನೆರವಾಗಬಹುದು. ತನುಶ್ರೀ ತಂದೆ ಬಾಬಣ್ಣ ಪೂಜಾರಿ ಅವರ ಕೆನರಾ ಬ್ಯಾಂಕಿನ ವಿಳಾಸ ಹೀಗಿದೆ. ಬ್ಯಾಂಕ್‌ ಖಾತೆ ಸಂಖ್ಯೆ – 0647101057574, ಐಎಫ್‌ಸಿ ಕೋಡ್‌ – ಸಿಎನ್‌ಆರ್‌ಬಿ0000647,

ಒಳ್ಳೆಯ ಕೆಲಸ ಮಾಡುತ್ತಿರುವ ಖುಷಿ
ರವಿ ಕಟಪಾಡಿಯಂತವರು ಶ್ರೀ ಕೃಷ್ಣಾಷ್ಟಮಿ, ವಿಟ್ಲಪಿಂಡಿ ಉತ್ಸವದ ಸಂದರ್ಭದಲ್ಲಿ ವಿಭಿನ್ನ ವೇಷಗಳನ್ನು ಹಾಕಿ ಹಣ ಸಂಗ್ರಹಿಸಿ ಅಶಕ್ತರಿಗೆ ನೆರವಾಗುತ್ತದ್ದು, ನನ್ನ ಈ ಕೆಲಸಕ್ಕೆ ಅವರೇ ಪ್ರೇರಣೆ. ಇತ್ತೀಚೆಗೆ ನನ್ನ ಅಣ್ಣನ ಸ್ನೇಹಿತರೊಬ್ಬರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಜೀವರ¾ಣ ಹೋರಾಟದಲ್ಲಿದ್ದಾಗ ಆತನ ಚಿಕಿತ್ಸೆಗಾಗಿ ಈ ರೀತಿ ವೇಷ ಹಾಕಿ ಹಣ ಸಂಗ್ರಹಿಸಲು ಚಿಂತಿಸಿದ್ದೆ. ಆದರೆ ದುರದೃಷ್ಟಾವಶಾತ್‌ ಅವರು ಬದುಕುಳಿಯಲಿಲ್ಲ. ಆದರೆ ಅದೇ ವೇಷವನ್ನು ತನುಶ್ರೀ ಚಿಕಿತ್ಸೆಗಾಗಿ ಹಾಕುತ್ತಿದ್ದೇನೆ. ಒಳ್ಳೆಯ ಕೆಲಸ ಮಾಡುತ್ತಿದ್ದೇನೆ ಎನ್ನುವ ಖುಷಿಯಿದೆ.
– ವಿಜೇಂದ್ರ ಆಚಾರ್ಯ,
ವೇಷ ಹಾಕಲು ಮುಂದಾದ ಯುವಕ

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.