ಚಾರ್ಮಾಡಿಯಲ್ಲಿ ಕುಕ್ಕಾಜೆಯ ಯುವಕನ ಶವ ಪತ್ತೆ

ಮನೆಯಿಂದ ನಾಪತ್ತೆಯಾಗಿದ್ದ ಯುವಕ; ಕಾರಣ ನಿಗೂಢ

Team Udayavani, Jun 10, 2023, 5:47 AM IST

ಚಾರ್ಮಾಡಿಯಲ್ಲಿ ಕುಕ್ಕಾಜೆಯ ಯುವಕನ ಶವ ಪತ್ತೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಕುಕ್ಕಾಜೆ ನಿವಾಸಿ ಸವಾದ್‌ (35) ಎಂಬವರ ಮೃತದೇಹ ಚಾರ್ಮಾಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿಗೆ ಕಾರಣವೇನು ಎಂದು ಇನ್ನಷ್ಟೇ ತಿಳಿದು ಬರಬೇಕಿದೆ.

ಸವಾದ್‌ ಕಳೆದ ಸುಮಾರು 10 ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ. ಈತ ಗಾಂಜಾ ವ್ಯಸನಿಯಾಗಿದ್ದು, ಈ ಹಿಂದೆಯೂ ಕೆಲವು ಬಾರಿ ನಾಪತ್ತೆಯಾಗಿ ಹಲವು ದಿನಗಳ ಬಳಿಕ ಮನೆಗೆ ವಾಪಾಸಾಗುತ್ತಿದ್ದ. ಆದ್ದರಿಂದ ಈ ಬಾರಿಯೂ ಅದೇ ರೀತಿ ಆಗಿರಬಹುದು ಎಂದು ಮನೆಯವರು ಅಂದು ಕೊಂಡಿದ್ದರು.

ಆದರೆ ಆತನೊಂದಿಗೆ ಇರುತ್ತಿದ್ದ ಮಾರಿಪಳ್ಳದ ವ್ಯಕ್ತಿಯೊಬ್ಬ ಸವಾದ್‌ನ ಅಣ್ಣನಿಗೆ ನಿನ್ನ ತಮ್ಮ ಚಾರ್ಮಾಡಿಯಲ್ಲಿ ಕೊಲೆಯಾಗಿದ್ದಾನೆ ಎಂದು ತಿಳಿಸಿದ್ದಾನೆ. ಈ ಬಗ್ಗೆ ವಿಚಾರಿಸಿದಾಗ ಚಾರ್ಮಾಡಿಯಲ್ಲಿ ಮೃತದೇಹವೊಂದು ಪತ್ತೆಯಾಗಿರುವ ಬಗ್ಗೆ ಮನೆಯವರಿಗೆ ಮಾಹಿತಿ ಲಭ್ಯವಾಗಿದೆ. ಮೃತದೇಹ ಪತ್ತೆಯಾದ ಸ್ಥಳದ ವ್ಯಾಪ್ತಿಯ ಚಿಕ್ಕಮಗಳೂರು ಜಿಲ್ಲೆಗೆ ಸೇರಿದೆ. ಅಲ್ಲಿನ ಬಣಕಲ್‌ ಠಾಣೆಗೆ ತೆರಳಿ ವಿಚಾರಿಸಿದ್ದು, ಮೃತದೇಹದ ಮೈಮೇಲಿನ ಬಟ್ಟೆ ಮತ್ತು ಕೈಯಲ್ಲಿರುವ ನೂಲನ್ನು ಆಧರಿಸಿ ಅದು ಸವಾದ್‌ನದ್ದೇ ಮೃತದೇಹ ಎಂದು ಅಭಿಪ್ರಾಯಪಟ್ಟಿದ್ದಾರೆ. ಸವಾದ್‌ನೊಂದಿಗೆ ಇದ್ದ ಇತರ ಮೂವರು ಆತನನ್ನು ಕರೆದು ಕೊಂಡು ಹೋಗಿ ಕೊಲೆ ಮಾಡಿ ಬಿಸಾಕಿರಬಹುದು ಎಂದು ಶಂಕೆ ವ್ಯಕವಾಗಿದೆ.

ಮೃತದೇಹವನ್ನು ಚಿಕ್ಕಮಗಳೂರು ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ಇರಿಸಲಾಗಿದ್ದು, ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.

ಅಸಹಜ ಸಾವು ಪ್ರಕರಣ ದಾಖಲು:
ಚಾರ್ಮಡಿಯ ಬಣಕಲ್‌ ವ್ಯಾಪ್ತಿಯಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿತ್ತು. ಈ ಸಂಬಂಧ ಅಸಹಜ ಸಾವು ಪ್ರಕರಣ ದಾಖಲು ಮಾಡಲಾಗಿದೆ. ಈ ನಡುವೆ ಮೃತ ವ್ಯಕ್ತಿಯ ಮನೆಯವರು ಬಂದು ಮೃತದೇಹವನ್ನು ನೋಡಿದ್ದು, ಶೇ.90ರಷ್ಟು ಹೋಲಿಕೆ ಇದೆ ಎಂದು ತಿಳಿಸಿದ್ದಾರೆ. ಶನಿವಾರ ಮರಣೋತ್ತರ ಪರೀಕ್ಷೆ ನಡೆಯಲಿದೆ. ಶೇ.100 ರಷ್ಟು ಹೋಲಿಕೆಯಾಗದಿದ್ದರೆ ಡಿಎನ್‌ಎ ಟೆಸ್ಟ್‌ ನಡೆಸಿ, ಅವನದ್ದೇ ಆಗಿದ್ದರೆ ಎಫ್‌ಐಆರ್‌ ದಾಖಲಿಸಲಾಗುವುದು ಎಂದು ಬಣಕಲ್‌ ಠಾಣಾ ಪೊಲೀಸ್‌ ನಿರೀಕ್ಷಕರು ಉದಯವಾಣಿಗೆ ತಿಳಿಸಿದ್ದಾರೆ.

ಗಾಂಜಾ ಹಾವಳಿ ವ್ಯಾಪಕ:
ಕುಕ್ಕಾಜೆ ಸಹಿತ ಗ್ರಾಮಾಂತರ ಭಾಗದಲ್ಲಿ ಗಾಂಜಾ ಹಾವಳಿ ವ್ಯಾಪಕವಾಗಿದ್ದು, ಯುವಜನತೆ ಅದಕ್ಕೆ ಬಲಿ ಬೀಳುತ್ತಿದ್ದಾರೆ. ಸವಾದ್‌ ಸಾವಿಗೂ ಗಾಂಜಾ ಪ್ರಕರಣವೇ ಕಾರಣವಾಗಿರಬಹುದು. ಕೇರಳ ಗಡಿ ಭಾಗವಾಗಿರುವುದರಿಂದ ಸಾಕಷ್ಟು ಪ್ರಮಾಣದಲ್ಲಿ ಗಾಂಜಾ ಪೂರೈಕೆಯಾಗುತ್ತಿದೆ. ಪೊಲೀಸರು ಹಾಗೂ ಸಂಬಂಧ ಪಟ್ಟ ಇಲಾಖೆಯವರು ಈ ಕುರಿತು ಗಮನ ಹರಿಸಿ, ಗಾಂಜಾ ಹಾವಳಿಯನ್ನು ತಡೆಯಬೇಕು ಎಂದು ಸ್ಥಳೀಯರಾದ ರಝಾಕ್‌ ಕುಕ್ಕಾಜೆ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.