ಅಂಚೆ ಕಚೇರಿಯಲ್ಲಿ ಆಧಾರ್‌ ನೋಂದಣಿ, ತಿದ್ದುಪಡಿ ಅಡೆತಡೆ


Team Udayavani, Sep 26, 2019, 5:50 AM IST

adhar

ಉಡುಪಿ: ಜಿಲ್ಲೆಯ ಕೆಲವು ಅಂಚೆ ಕಚೇರಿಗಳಲ್ಲಿ ವಿವಿಧ ಕಾರಣಗಳನ್ನು ನೀಡಿ ಆಧಾರ್‌ ಕಾರ್ಡ್‌ ತಿದ್ದುಪಡಿ ಹಾಗೂ ನೋಂದಣಿ ಕಾರ್ಯ ಸ್ಥಗಿತಗೊಳಿಸಿದ್ದು, ಸಾರ್ವಜನಿಕರು ತೊಂದರೆಗೆ ಸಿಲುಕಿದ್ದಾರೆ.

ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರವು ಈ ಹಿಂದೆ ಆಧಾರ್‌ ಕಾರ್ಡ್‌ ನೋಂದಣಿ ಮತ್ತು ತಿದ್ದುಪಡಿ ಅಧಿಕಾರವನ್ನು ಖಾಸಗಿ ಸಂಸ್ಥೆಗಳಿಗೆ ನೀಡಿತ್ತು. ಅನಂತರದ ದಿನದಲ್ಲಿ ಆದೇಶವನ್ನು ಹಿಂಪಡೆದು ಕೆಲ ಬ್ಯಾಂಕ್‌ ಮತ್ತು ಅಂಚೆ ಕಚೇರಿಗೆ ಈ ಸೇವೆಯ ಜವಾಬ್ದಾರಿಯನ್ನು ವರ್ಗಾಯಿಸಿತು.

ಪ್ರಾಧಿಕಾರದಿಂದಲೇ ಸೌಲಭ್ಯ ಪೂರೈಕೆ
ಪ್ರಾಧಿಕಾರದ ವತಿಯಿಂದ ಅಂಚೆ ಇಲಾಖೆಯ ಸಿಬಂದಿಗೆ ತರಬೇತಿ ನೀಡುವುದರ ಜತೆಗೆ ಆಧಾರ್‌ ಕಾರ್ಡ್‌ ನೋಂದಣಿ ಮತ್ತು ತಿದ್ದುಪಡಿಗೆ ಬೇಕಾಗುವ ಕಂಪ್ಯೂಟರ್‌ ಸೇರಿದಂತೆ ಯಂತ್ರೋಪ‌ಕರಣಗಳನ್ನು ಪೂರೈಸಿತು.

ಉಡುಪಿ ವಿಭಾಗದಲ್ಲಿ 62
ಉಡುಪಿ ವಿಭಾಗದ 62 ಅಂಚೆ ಕಚೇರಿಯಲ್ಲಿ ಆಯ್ದ 47 ಕಚೇರಿಗಳಲ್ಲಿ ಈ ಸೇವೆಯನ್ನು 2018ರಲ್ಲಿ ಪ್ರಾರಂಭಿಸಲಾಗಿತ್ತು. ಪ್ರಾರಂಭದಲ್ಲಿ ನಿತ್ಯ 15- 20 ಕಾರ್ಡ್‌ಗಳ ನೋಂದಣಿ ಹಾಗೂ ತಿದ್ದುಪಡಿ ಮಾಡಲಾಗುತ್ತಿತ್ತು. ಆದರೆ ಇದೀಗ ಕಚೇರಿ ಸಿಬಂದಿ ಬೇರೆ ಕೇಂದ್ರಗಳಿಗೆ ತೆರಳಿ ನೋಂದಣಿ ಮಾಡುವಂತೆ ಜನರ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನುವ ಆರೋಪಗಳಿವೆ.

ಸಿಬಂದಿ ಕೊರತೆಯಿಂದ ವಾಪಸು
ಅಂಚೆ ಕಚೇರಿಯಲ್ಲಿ ಸಿಬಂದಿ ಕೊರತೆ ಹಾಗೂ ಕಾರ್ಯ ಒತ್ತಡದಿಂದ ಸೇವೆ ಸ್ಥಗಿತಗೊಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿಯದ ಜನರು ದೂರದ ಪ್ರದೇಶದವರು ಆಧಾರ್‌ ನೋಂದಣಿಗೆ ಅಂಚೆ ಕಚೇರಿಗೆ ಬಂದು ಕೆಲಸವಾಗದೆ ಹಿಂದಿರುಗುತ್ತಿದ್ದಾರೆ.

ಬಂದದ್ದು ವ್ಯರ್ಥವಾಯ್ತು
ಬಾರಕೂರು ಅಂಚೆ ಕಚೇರಿಗೆ ಆಧಾರ್‌ ಕಾರ್ಡ್‌ ತಿದ್ದುಪಡಿಗೆ ಬಂದಿದ್ದೇನೆ. ಸಿಬಂದಿ ಆಧಾರ ನೋಂದಣಿ ಸಾಧ್ಯವಿಲ್ಲ ಎನ್ನುತ್ತಿದ್ದಾರೆ.
-ವಿಜೇಂದ್ರ, ಬಾರಕೂರು

ಸ್ಟೇಟ್‌ ಬ್ಯಾಂಕ್‌ ಸಂಪರ್ಕಿಸಲು ಹೇಳುತ್ತಿದ್ದಾರೆ
ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಆಧಾರ್‌ ಕಾರ್ಡ್‌ ನೋಂದಣಿ ಕುರಿತು ಸಿಬಂದಿಯನ್ನು ಕೇಳಿದರೆ ಈಗಾಗಲೇ 25 ಟೋಕನ್‌ ವಿತರಣೆಯಾಗಿದೆ. ಸ್ಟೇಟ್‌ ಬ್ಯಾಂಕ್‌ ಸಂಪರ್ಕಿಸುವಂತೆ ಉತ್ತರ ನೀಡುತ್ತಿದ್ದಾರೆ.
– ಸಂತೋಷ್‌, ಮಂದಾರ್ತಿ

ಕಾರ್ಡ್‌ ತಿದ್ದುಪಡಿ, ನೋಂದಣಿ ರದ್ದು ಅಸಾಧ್ಯ
ಜಿಲ್ಲೆಯ ಅಂಚೆಕಚೇರಿಯಲ್ಲಿ ಆಧಾರ್‌ ನೋಂದಣಿ ಹಾಗೂ ತಿದ್ದುಪಡಿ ಕಾರ್ಯ ನಡೆಯುತ್ತಿದೆ. ಕಾರ್ಯ ಒತ್ತಡ ಹಾಗೂ ಸರ್ವರ್‌ನಲ್ಲಿ ಸಮಸ್ಯೆ ಎದುರಾದಾಗ ಸಿಬಂದಿ ಸ್ವಲ್ಪ ಸಮಯ ಸ್ಥಗಿತಗೊಳಿಸುತ್ತಾರೆ. ಸಂಪೂರ್ಣವಾಗಿ ಕಾರ್ಡ್‌ ತಿದ್ದುಪಡಿ ಹಾಗೂ ನೋಂದಣಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ.
-ಸುಧಾಕರ್‌ ದೇವಾಡಿಗ, ಅಂಚೆ ಅಧೀಕ್ಷಕ, ಉಡುಪಿ ವಿಭಾಗ

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.