ಆಧಾರ್, ಆರ್ಟಿಸಿ ಸಮಸ್ಯೆ ಬಗೆಹರಿಸಿ: ಸದಸ್ಯರ ಆಗ್ರಹ
Team Udayavani, Mar 2, 2019, 1:05 AM IST
ಕಾರ್ಕಳ: ಕಳೆದ ಹಲವಾರು ತಿಂಗಳಿನಿಂದ ಕಾರ್ಕಳ ತಾಲೂಕಿನಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ಕಾರ್ಡ್ ಪಡೆಯುವಲ್ಲಿ ನಾನಾ ಸಮಸ್ಯೆಗಳು ಕಂಡುಬರುತ್ತಿವೆ. ಆಧಾರ್ ಸರಿಪಡಿಸುವ ಸಲುವಾಗಿ ರಾತ್ರೋರಾತ್ರಿ ನಾಗರಿಕರು ದೂರದೂರಿನಿಂದ ತಾಲೂಕು ಕೇಂದ್ರಕ್ಕೆ ಬಂದು ಕಚೇರಿ ಮುಂದೆ ಕಾಯುತ್ತಿದ್ದಾರೆ. ಇದಕ್ಕೆ ಪರಿಹಾರ ಕಲ್ಪಿಸಿಕೊಡುವ ಕಾರ್ಯವಾಗಬೇಕೆಂದು ಸದಸ್ಯರಾದ ರಮೇಶ್ ಕುಮಾರ್ ಶಿವಪುರ ಹಾಗೂ ಹರೀಶ್ ಅಜೆಕಾರು ಆಗ್ರಹಿಸಿದ ಘಟನೆ ಕಾರ್ಕಳ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ನಡೆಯಿತು.
ತಾಲೂಕು ಪಂಚಾಯತ್ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಮಾ. 1ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯಿತು.
ಕೃಷಿ ಸಮ್ಮಾನ್ ನಿಧಿ ಯೋಜನೆಗಾಗಿ ಆರ್ಟಿಸಿಯ ಅಗತ್ಯವಿದ್ದು, ಇದೀಗ ಕಾರ್ಕಳದಲ್ಲಿ ಆರ್ಟಿಸಿ ಪಡೆಯಲು ಸಾಧ್ಯವಾಗುತ್ತಿಲ್ಲ. ಆಧಾರ್, ಆರ್ಟಿಸಿ ಪಡೆಯಲು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಹರೀಶ್ ಹಾಗೂ ರಮೇಶ್ ಒತ್ತಾಯಿಸಿದರು.
ಅರಣ್ಯ ಇಲಾಖೆಗೆ ಸಂಬಂಧಿಸಿದ ಪ್ರಶ್ನೆ ಕೇಳಿದ ಸದಸ್ಯೆ ಮಂಜುಳಾ ಅವರು ಅರಣ್ಯಧಿಕಾರಿ ಸಭೆಗೆ ಗೈರಾಗಿರುವುದನ್ನು ಪ್ರಶ್ನಿಸಿ ಅಧಿಕಾರಿಗಳು,ತಾ.ಪಂ.ಸಾಮಾನ್ಯ ಸಭೆ ಮತ್ತು ಗ್ರಾಮ ಸಭೆಗೆ ನಿರಂತರವಾಗಿ ಗೈರಾಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಈ ವೇಳೆ ಅನೇಕ ಸದಸ್ಯರು ಧ್ವನಿಗೂಡಿಸಿ ಮಾತನಾಡಿದರು.ಈ ನಿಟ್ಟಿನಲ್ಲೇ ಕೆಲ ಹೊತ್ತು ಚರ್ಚೆ ಸಾಗಿತು. ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸದಸ್ಯರು ಆಗ್ರಹಿಸಿದರು. ಈ ವೇಳೆ ಮಾತನಾಡಿದ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮೇ| ಹರ್ಷ, ಅಧಿಕಾರಿಗಳು ಗೈರಾದಲ್ಲಿ ಸಂಬಂಧಪಟ್ಟ ಇಲಾಖೆಯ ಮೇಲಾಧಿಕಾರಿಗಳಿಗೆ ನಾವು ತಿಳಿಸಬಹುದೇ ಹೊರತು ನಮಗೇನು ಕ್ರಮಕೈಗೊಳ್ಳುವಂತಿಲ್ಲ ಎಂದರು.
ಗ್ರಾಮಸಭೆಯಲ್ಲಿ ಇಲಾಖೆಗಳಿಂದ ಯಾವುದಾದರೂ ಒಬ್ಬ ಅಧಿಕಾರಿ ಪ್ರತಿನಿಧಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ವೇದಿಕೆಯಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಉಪಾಧ್ಯಕ್ಷ ಗೋಪಾಲ ಮೂಲ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೆ| ಹರ್ಷ, ಸ್ಥಾಯಿ ಸಮಿತಿ ಅಧ್ಯಕ್ಷ ಚಂದ್ರಶೇಖರ್, ಲೆಕ್ಕಪರಿಶೋಧಕ ನಿತಿನ್ ಉಪಸ್ಥಿತರಿದ್ದರು.
ವಿದ್ಯಾ ಎನ್. ಸಾಲ್ಯಾನ್, ನಿರ್ಮಲಾ, ಸುರೇಶ್ ಶೆಟ್ಟಿ, ಸುಲತಾ ನಾಯ್ಕ, ಹರಿಶ್ಚಂದ್ರ, ಪ್ರಮೀಳಾ ಮೂಲ್ಯ, ಆಶಾ ಡಿ. ಶೆಟ್ಟಿ, ಪುಷ್ಪಾ ಸತೀಶ್ ಪೂಜಾರಿ ಮತ್ತು ಮುಂಡ್ಕರು, ಚಾರಾ ಗ್ರಾ.ಪಂ. ಅಧ್ಯಕ್ಷರು ಸಭೆಯಲ್ಲಿ ಪಾಲ್ಗೊಂಡರು.
ಬೆಳ್ಮಣ್ ಮನೆ ಕೆಡವಿದ ವಿಚಾರ ಪ್ರಸ್ತಾವ
ಬೆಳ್ಮಣ್ನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿದ್ದಾರೆ ಎಂದು ಪಂಚಾಯತ್ ಪಿಡಿಒ ಮನೆ ತೆರವುಗೊಳಿಸಿದ ವಿಚಾರವು ತಾ.ಪಂ. ಸಾಮಾನ್ಯ ಸಭೆಯಲ್ಲೂ ಪ್ರಸ್ತಾಪವಾಯಿತು. ಈ ವೇಳೆ ಮಾತನಾಡಿದ ಇಒ 94 ಸಿ ಗೆ ಅರ್ಜಿ ಸಲ್ಲಿಸಿದಾಗ್ಯೂ ನಾನಾ ಕಾರಣಗಳಿಂದ ಅದು ತಿರಸ್ಕೃತಗೊಂಡಿರುತ್ತದೆ. ನನಗೆ ತಿಳಿದಂತೆ ಆ ಮನೆಯವರಿಗೆ ನೋಟಿಸ್ ಕೂಡ ನೀಡಲಾಗಿದೆ ಎಂದು ಸಭೆಗೆ ತಿಳಿಸಿದರು.
ಕಾಮಗಾರಿ ಶಿಲಾನ್ಯಾಸಕ್ಕೆ ಆಮಂತ್ರಣ ನೀಡುವುದಿಲ್ಲ
ಸದಸ್ಯ ಸುಧಾಕರ್ ಶೆಟ್ಟಿ ಮುಡಾರು ಮಾತನಾಡಿ, ಅಧಿಕಾರಿಗಳು ನಮ್ಮ ವ್ಯಾಪ್ತಿಯಲ್ಲಿ ನಡೆಯುವ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಮಾಹಿತಿ ನೀಡುವುದಿಲ್ಲ. ಸ್ಥಳೀಯ ಜನಪ್ರತಿನಿಧಿಗಳಿಗೆ ಯಾಕೆ ತಿಳಿಸುತ್ತಿಲ್ಲ ಎಂದು ಪ್ರಶ್ನಿಸಿದರು. ಈ ವೇಳೆ ಧ್ವನಿಗೂಡಿಸಿದ ಇತರ ಸದಸ್ಯರು ಆಯಾಯ ವ್ಯಾಪ್ತಿಯಲ್ಲಿ ನಡೆಯುವ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಸಂಬಂಧಪಟ್ಟ ಎಲ್ಲರಿಗೂ ಮಾಹಿತಿ ನೀಡುವ ಕಾರ್ಯವಾಗಬೇಕು ಎಂದರು.
ಅಭಿನಂದನಾ ನಿರ್ಣಯ
ಮರ್ಣೆ ಗ್ರಾಮ ಪಂಚಾಯತ್ನ ಎಣ್ಣೆಹೊಳೆಯಲ್ಲಿ ಸ್ವರ್ಣ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣವಾಗುವ ಮೂಲಕ ಸುಮಾರು 1200 ಹೆಕ್ಟೆರ್ ಪ್ರದೇಶದ ಕೃಷಿಕರಿಗೆ ಪ್ರಯೋಜನವಾಗಲಿದೆ. ಬಜೆಟ್ನಲ್ಲಿ ಈ ಯೋಜನೆಗೆ ರೂ. 40 ಕೋಟಿ ರೂ. ಅನುದಾನ ದೊರೆತಿರುವುದು ಸಂತಸದ ವಿಚಾರ. ಅನುದಾನ ಬಿಡುಗಡೆ ಮಾಡುವಲ್ಲಿ ಶಾಸಕ ಸುನಿಲ್ ಕುಮಾರ್ ಅವರ ಪ್ರಯತ್ನವಿದೆ. ಹೀಗಾಗಿ ಅಭಿನಂದನಾ ನಿರ್ಣಯ ಮಾಡುವಂತೆ ಹರೀಶ್ ಅಜೆಕಾರು ಅಭಿಪ್ರಾಯಪಟ್ಟರು. ಸದಸ್ಯರೆಲ್ಲರೂ ಚಪ್ಪಾಳೆ ತಟ್ಟುವ ಮೂಲಕ ಅನುಮೋದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ