ಆಧಾರ್ ನೋಂದಣಿ ಕೇಂದ್ರ ಕಾಪು ತಾಲೂಕು ಕಚೇರಿ ಸಂಕೀರ್ಣಕ್ಕೆ ಸ್ಥಳಾಂತರ
Team Udayavani, Nov 29, 2018, 1:45 AM IST
ಕಾಪು: ಕಾಪು ಬಂಗ್ಲೆ ಮೈದಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಟಲ್ ಜೀ ಜನಸ್ನೇಹಿ ಕೇಂದ್ರ ಮತ್ತು ಆಧಾರ್ ನೋಂದಣಿ ಕೇಂದ್ರವನ್ನು ರಾ.ಹೆ. 66ರ ಸನಿಹದಲ್ಲಿರುವ ಹಳೆ ಪುರಸಭಾ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಪು ತಾಲೂಕು ಕಚೇರಿ ಸಂಕೀರ್ಣಕ್ಕೆ ಸ್ಥಳಾಂತರಗೊಳಿಸಲಾಗಿದೆ.
ಆರಂಭದಲ್ಲಿ ಕಾಪು ಪೇಟೆಯ ಅನಂತ ಮಹಲ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜನಸ್ನೇಹಿ ಕೇಂದ್ರ ಬಳಿಕ ಕಾಪು ಬಂಗ್ಲೆ ಮೈದಾನದಲ್ಲಿದ್ದ ಪ್ರವಾಸಿ ಬಂಗಲೆಗೆ ಸ್ಥಳಾಂತರಗೊಂಡಿತ್ತು. ಬಳಿಕ ಕಾಪು ತಾಲೂಕು ಘೋಷಣೆಯಾದ ಬಳಿಕ ತಾಲೂಕು ಕಚೇರಿಯೊಂದಿಗೇ ಇತ್ತು. ಆದರೆ ಕಳೆದೆರಡು ತಿಂಗಳ ಹಿಂದೆ ತಾಲೂಕು ಕಚೇರಿ ಹಳೆ ಪುರಸಭೆ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದರೂ ಜನಸ್ನೇಹಿ ಕೇಂದ್ರ ಸ್ಥಳಾಂತರಗೊಂಡಿರಲಿಲ್ಲ. ಇದೀಗ ಕಚೇರಿ ಸ್ಥಳಾಂತರಗೊಂಡಿರುವುದರಿಂದ ಕಂದಾಯ ಇಲಾಖೆ ಸಂಬಂಧಿತ ಹಾಗೂ ಇನ್ನಿತರ ಅರ್ಜಿಗಳ ಸೇವೆಯನ್ನು ಸಾರ್ವಜನಿಕರು ಒಂದೇ ಕಡೆ ಪಡೆಯಲು ಅವಕಾಶ ಮಾಡಿಕೊಟ್ಟಂತಾಗಿದೆ. ಕಾಪು ಪುರಸಭಾ ವ್ಯಾಪ್ತಿಯ ಮಲ್ಲಾರು, ಪಡು, ಉಳಿಯಾರಗೋಳಿ ಮತ್ತು ಮೂಳೂರು ಗ್ರಾಮಗಳ ಜನರ ಸೇವೆಗಾಗಿ ಕಾರ್ಯ ನಿರ್ವಹಿಸುತ್ತಿರುವ ಆಟಲ್ ಜೀ ಜನಸ್ನೇಹಿ ಕೇಂದ್ರದಲ್ಲಿ ಕಾಪು ತಾಲೂಕು ವ್ಯಾಪ್ತಿಯ ಎಲ್ಲಾ ಗ್ರಾಮಗಳ ಕಂದಾಯ ಇಲಾಖೆ ಸಂಬಂಧಿತ ವಿವಿಧ ಅರ್ಜಿಗಳ ಸ್ವೀಕಾರ ಮತ್ತು ವಿಲೇವಾರಿಯೂ ನಡೆಯಲಿದೆ.
ಜನಸ್ನೇಹಿ ಕೇಂದ್ರದಲ್ಲಿ 36 ಸೇವೆಗಳು ಲಭ್ಯ
ಸ್ಥಳಾಂತರಗೊಂಡಿರುವ ಅಟಲ್ ಜೀ ಜನಸ್ನೇಹಿ ಕೇಂದ್ರದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆರ್ಟಿಸಿ, ಆಧಾರ್ ನೋಂದಣಿ, ತಿದ್ದುಪಡಿ, ವಾಸ್ತವ್ಯ ದೃಢ ಪತ್ರ, ಮೋಜಿನಿ ಅರ್ಜಿ, 94ಸಿ, 94ಸಿಸಿ, ಜನನ ಮತ್ತು ಮರಣ ಪ್ರಮಾಣ, ವಿವಿಧ ಪಿಂಚಣಿ ಯೋಜನೆಗಳ ಸಹಿತ ಸರಕಾರದ 36 ಸೇವೆಗಳು ಲಭ್ಯವಿವೆ ಎಂದು ಇಲಾಖಾ ಮೂಲಗಳು ತಿಳಿಸಿವೆ.
ಒಂದೇ ಕಡೆ ಅವಕಾಶ
ಕಂದಾಯ ಇಲಾಖೆಗೆ ಸಂಬಂಧಿತ ಹಾಗೂ ಇನ್ನಿತರ ಅರ್ಜಿಗಳ ಸೇವೆಯನ್ನು ಒಂದೇ ಕಡೆ ಪಡೆಯಲು ಸಾರ್ವಜನಿಕರಿಗೆ ಅವಕಾಶ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ