ಅಭಿನಂದನ್‌ ಬಿಡುಗಡೆ ರಾಜತಾಂತ್ರಿಕ ಗೆಲುವು: ಶೋಭಾ


Team Udayavani, Mar 2, 2019, 12:30 AM IST

shobha-karandlaje-750.jpg

ಉಡುಪಿ: ಪಾಕಿಸ್ಥಾನದ ಭಯೋತ್ಪಾದಕ ಚಟುವಟಿಕೆಯನ್ನು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಬಹಿರಂಗ ಪಡಿಸುವಲ್ಲಿ ಕೇಂದ್ರ ಸರಕಾರ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ರಾಷ್ಟ್ರಗಳು ಇಂದು ಭಾರತ ಪರ ನಿಂತಿವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ವಿದೇಶ ಯಾತ್ರೆಯನ್ನು ಕಾಂಗ್ರೆಸ್‌ ಗೇಲಿ ಮಾಡಿತ್ತು. ಆದರೆ ಪ್ರಧಾನಿ ಮೋದಿ ಅವರು ವಿದೇಶಗಳಿಗೆ ಭೇಟಿ ನೀಡಿ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ಥಾನವು ಭಯೋತ್ಪಾದಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ‌ ದೇಶ ಎಂಬುದನ್ನು ಸಾಬೀತು ಮಾಡಿದೆ. ಪಾಕಿಸ್ಥಾನವು ಅಭಿನಂದನ್‌ ಅವರನ್ನು ಬಿಡುಗಡೆ ಮಾಡಿರುವುದು ರಾಜತಾಂತ್ರಿಕ ಗೆಲುವಿಗೆ ಸಾಕ್ಷಿ ಯಾಗಿದೆ ಎಂದು ಹೇಳಿದರು. 

ತಪ್ಪಾಗಿ ಅರ್ಥೈಸಲಾಗಿದೆ
ಬಿ.ಎಸ್‌. ಯಡಿಯೂರಪ್ಪ ಅವರು ಪಾಕಿಸ್ಥಾನದ ಜತೆಗಿನ ಕದನದಿಂದ 22 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿಲ್ಲ. ಸರ್ಜಿಕಲ್‌ ಸ್ಟ್ರೈಕ್‌ಗೂ ಇದಕ್ಕೂ ಸಂಬಂಧವಿಲ್ಲ. ಎಲ್ಲ ಸಂದರ್ಭದಲ್ಲೂ ಅವರು 22 ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದರು. ಅದನ್ನೇ ಹೇಳಿದ್ದಾರೆ. ಇದನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದರು.

ಪರಿಹಾರ ನೀಡಲಿ
ಸುವರ್ಣ ತ್ರಿಭುಜ ನಾಪತ್ತೆಯಾಗಿ 2 ತಿಂಗಳಾದರೂ ಕುರುಹು ಲಭಿಸದೇ ಇರುವುದರಿಂದ ರಾಜ್ಯ ಸರಕಾರ ಮೀನುಗಾರರ ಕುಟುಂಬಕ್ಕೆ ಪರಿಹಾರ ನೀಡಬೇಕು. ನೌಕಾದಳದ ಢಿಕ್ಕಿಯಾಗಿರುವ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಎಂದರು. 

ಓಲೈಕೆ ರಾಜಕಾರಣ
ಎಚ್‌.ಡಿ. ದೇವೇಗೌಡ ಪ್ರಧಾನಿಯಾಗಿದ್ದ ಸಂದರ್ಭ ಕಾಶ್ಮೀರ ಬಿಕ್ಕಟ್ಟು ಹೆಚ್ಚಾಗಿರಲಿಲ್ಲ ಎಂಬ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಶೋಭಾ, ದೇವೇಗೌಡ ಅವರು ಕೆಲವು ತಿಂಗಳು ಮಾತ್ರ ಪ್ರಧಾನಿಯಾಗಿದ್ದರು. ಇಲ್ಲಿಯ ವರೆಗಿನ ಪ್ರಧಾನಿಗಳು ಗಡಿ ಭಾಗದ ಭಯೋತ್ಪದನೆ ಚಟುವಟಿಕೆ ಬಗ್ಗೆ ಕ್ರಮ ಕೈಗೊಳ್ಳದೆ ನಿಷ್ಕ್ರಿಯರಾಗಿದ್ದರು. ಆದರೆ ಪ್ರಧಾನಿ ಮೋದಿ ದಿಟ್ಟ ಕ್ರಮ ಕೈಗೊಂಡಿದ್ದಾರೆ. ಕುಮಾರಸ್ವಾಮಿ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಪುಲ್ವಾಮಾ ಘಟನೆಯನ್ನು ಸಹಿಸಿಕೊಂಡು ಸುಮ್ಮನಿರಬೇಕಿತ್ತೇ ಎಂದು ಪ್ರಶ್ನಿಸಿದರು. 

ಎಂಪಿ ಖಾತೆಯಿಂದ 15 ಲ. ರೂ. ಕಳವು
ಒಂದೂವರೆ ವರ್ಷದಿಂದ ನನ್ನ ಬ್ಯಾಂಕ್‌ ಖಾತೆಯಲ್ಲಿ ಜಮೆಯಾಗಿದ್ದ 15.62 ಲ.ರೂ. ಹಣವನ್ನು ಆನ್‌ಲೈನ್‌ ಮೂಲಕ ಲಪಟಾಯಿಸಲಾಗಿದೆ. ಈ ಬಗ್ಗೆ ದಿಲ್ಲಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಆತನಿಂದ 25 ಸಾವಿರ ರೂ. ಮರುಪಾವತಿಯಾಗಿದೆ. ಹಿರಿಯ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ. ನಗದು ವ್ಯವಹಾರ ಭ್ರಷ್ಟಾಚಾರಕ್ಕೆ ಕಾರಣವಾಗುತ್ತದೆ ಎಂಬ ಕಾರಣಕ್ಕೆ ಪ್ರಧಾನಿ ಕ್ಯಾಶ್‌ಲೆಸ್‌ ಪಾವತಿಗೆ ಆದ್ಯತೆ ನೀಡಿದ್ದಾರೆ. ಡಿಜಿಟಲ್‌ ಇಂಡಿಯಾ ಯಶಸ್ವಿಯಾಗುತ್ತದೆ. ಎಂದು ಶೋಭಾ ಕರಂದ್ಲಾಜೆ  ಹೇಳಿದರು. 

ಪಕ್ಷದ ತೀರ್ಮಾನಕ್ಕೆ ಬದ್ಧ
ಮತ್ತೂಮ್ಮೆ ಲೋಕಸಭಾ ಚುನಾವಣೆ ಸ್ಪರ್ಧಿಸುವ ಬಗ್ಗೆ ತೀರ್ಮಾನವಾಗಿಲ್ಲ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧ. ಸ್ಪರ್ಧಿಸಬೇಕೇ ಬೇಡವೇ ಎಂಬುದನ್ನು ಹೈಕಮಾಂಡ್‌ ತೀರ್ಮಾನಿಸಲಿದೆ.
– ಶೋಭಾ ಕರದ್ಲಾಂಜೆ,ಉಡುಪಿ-ಚಿಕ್ಕಮಗಳೂರು ಸಂಸದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.