ಅಚ್ಚಡ – ಚೊಕ್ಕಾಡಿ : ಹಲವು ವರ್ಷಗಳ ಸಮಸ್ಯೆಗೆ ಮುಕ್ತಿ

ಸುಮಾರು 29 ಕ್ಕೂ ಅಧಿಕ ಕುಟುಂಬಗಳಿಗೆ ಪ್ರಯೋಜನ

Team Udayavani, Apr 27, 2019, 10:09 AM IST

udupi-3-tdy..

••ವಿಜಯ ಆಚಾರ್ಯ, ಉಚ್ಚಿಲ

ಕಟಪಾಡಿ,ಎ.26: ಅಚ್ಚಡ – ಚೊಕ್ಕಾಡಿ ಭಾಗದಲ್ಲಿ ನೀರು ಪೂರೈಕೆಗೆ ಇದ್ದ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿ ಇದೀಗ ಕುಡಿಯುವ ನೀರು ಮನೆಮನೆಗೆ ಸರಬರಾಜು ಆಗುತ್ತಿದೆ. ಇದರಿಂದ 29 ಕುಟುಂಬಗಳಿಗೆ ಪ್ರಯೋಜನವಾಗಿದೆ.

ಕಟಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಚೊಕ್ಕಾಡಿ ಭಾಗದ ಸುಮಾರು 19 ಮನೆಗಳಿಗೆ ಮತ್ತು ಅಚ್ಚಡ ಕ್ರಾಸ್‌ ಬಳಿಯ ಸುಮಾರು 10 ಮನೆಗಳಿಗೆ ಪೈಪು ಲೈನ್‌ ಮೂಲಕ ನೀರಿನ ಟ್ಯಾಂಕ್‌ ಅಳವಡಿಸಿ ಕುಡಿಯುವ ನೀರನ್ನು ಕೊಡಲಾಗುತ್ತಿದೆ.

ಬಾಕಿಯಾದ ಯೋಜನೆ:

ಚೊಕ್ಕಾಡಿ ಬಳಿ ಕಳೆದ 5 ವರ್ಷಗಳ ಹಿಂದೆಯೇ ಕುಡಿಯುವ ನೀರಿನ ಪೂರೈಕೆಗಾಗಿ ಅಂದಿನ ಜಿಲ್ಲಾ ಪಂಚಾಯತ್‌ ಆಡಳಿತಾವಧಿಯಲ್ಲಿ ಗೋಕುಲ್ ಕಂಪೌಂಡು ಬಳಿಯಲ್ಲಿ ಬೋರ್‌ವೆಲ್ ತೋಡಲಾಗಿತ್ತು. ಬೋರ್‌ವೆಲ್ ನೀರನ್ನು ಇತರೆಡೆಗಳಿಗೆ ಸರಬರಾಜು ಮಾಡಲು ಬಳಸುತ್ತಾರೆ ಎಂಬ ಬಗ್ಗೆ ಆ ಭಾಗದ ಸಾರ್ವಜನಿಕರಿಂದ ಆಕ್ಷೇಪಣೆ ವ್ಯಕ್ತವಾಗಿದ್ದು, ಇದರಿಂದ ಕುಡಿಯುವ ನೀರಿನ ಯೋಜನೆಯು ನನೆಗುದಿಗೆ ಬಿದ್ದಿತ್ತು. ಪ್ರಸ್ತುತ ಈ ಭಾಗದ ಜನರ ಕುಡಿಯುವ ನೀರಿನ ಬೇಡಿಕೆಯು ಹೆಚ್ಚಾಗಿದ್ದು, ಆದ್ದರಿಂದ ಜನರನ್ನು ವಿಶ್ವಾಸಕ್ಕೆ ಪಡೆದು ಸಮಸ್ಯೆ ಪರಿಹಾರಕ್ಕೆ ಸ್ಥಳೀಯಾಡಳಿತ ಮುಂದಾಗಿದೆ.

ಅನಂತರದಲ್ಲಿ ಗ್ರಾಮ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎನ್‌ಆರ್‌ಡಿ ಡಬ್ಲ್ಯೂಪಿ ಟಾಸ್ಕ್ ಫೋರ್ ಅಡಿ 2 ಲಕ್ಷ ರೂ. ಅನುದಾನ ಬಳಸಿಕೊಂಡು ಕೊಳವೆಬಾವಿ ಪಂಪು ಮತ್ತು ವಿದ್ಯುದೀಕರಣ ಮಾಡಿ ಪೈಪ್‌ ಲೈನ್‌ ಕಾಮಗಾರಿ ಮೂಲಕ ಚೊಕ್ಕಾಡಿ ಭಾಗದ ಜನತೆಗೆ ನೀರು ಪೂರೈಸಲಾಗಿದೆ. ಜತೆಗೆ ಕಟಪಾಡಿ ಗ್ರಾಮ ಪಂಚಾಯತ್‌ಮೂಲಕ 14ನೇ ಹಣಕಾಸು ಯೋಜನೆಯಡಿ 1 ಲಕ್ಷ ರೂ. ಅನುದಾನವನ್ನು ಬಳಸಿ ಪೈಪ್‌ಲೈನ್‌ ಮತ್ತು ನೀರಿನ ಟ್ಯಾಂಕ್‌ಗಳನ್ನು ಅಳವಡಿಸಿ ಸುಮಾರು 29 ಮನೆಗಳಿಗೆ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ.

 

ಸಾರ್ವಜನಿಕ ಆಕ್ಷೇಪಣೆ ಇದ್ದುದರಿಂದ ಈ ಭಾಗದ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಸ್ವಲ್ಪ ಕಷ್ಟವಾಗಿತ್ತು. ಇದೀಗ ಸಮಸ್ಯೆ ಬಗೆಹರಿಸಲಾಗಿದೆ. ಪಂಚಾಯತ್‌ 14ನೇ ಹಣಕಾಸು ಮೂಲಕ ಒಂದು ಲಕ್ಷ ರೂ. ಅನುದಾನ ಬಳಸಿ ಪೈಪ್‌ಲೈನ್‌ ವಿಸ್ತರಣೆ ಕಾಮಗಾರಿ ಪೂರೈಸಿ, ಟ್ಯಾಂಕ್‌ಗಳನ್ನು ಅಳವಡಿಸಿ ನೀರು ಸರಬರಾಜು ಮಾಡಲಾಗುತ್ತಿದೆ.
– ಇನಾಯತುಲ್ಲಾ ಬೇಗ್‌,

ಪಿ.ಡಿ.ಒ., ಕಟಪಾಡಿ ಗ್ರಾಮ ಪಂಚಾಯತ್‌
ಏಣಗುಡ್ಡೆಯ ಗೋಕುಲ ಕಂಪೌಂಡ್‌ ಮತ್ತು ಅಚ್ಚಡ ಕ್ರಾಸ್‌ ನಿವಾಸಿಗಳು ನೀರಿಗಾಗಿ ಬಹಳಷ್ಟು ಕಷ್ಟ ಪಡಬೇಕಿತ್ತು. ಅದಕ್ಕಾಗಿ ಸ್ಥಳೀಯರ ಮನವೊಲಿಸಿ ಇದೀಗ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆ ಮಾಡಲಾಗಿದೆ. ಜನರ ಸಹಕಾರಕ್ಕೆ ಋಣಿಯಾಗಿದ್ದೇನೆ.

ರಾಜೇಶ್‌ ಪೂಜಾರಿ,ಗ್ರಾ.ಪಂ. ಸದಸ್ಯ, ಕಟಪಾಡಿ

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.