ಅಪಘಾತ:ಕಾಲನ್ನೇ ಕಳೆದುಕೊಂಡ ವಿದ್ಯಾರ್ಥಿ;ಸಹಾಯಕ್ಕೆ ಮನವಿ


Team Udayavani, Jan 25, 2018, 4:47 PM IST

8522.jpg

ಉಡುಪಿ: ಕುಟುಂಬಕ್ಕೆ ಆಸರೆಯಾಗಬೇಕೆಂದು ಭಾರೀ ಕನಸು ಹೊತ್ತುಕೊಂಡು ಕಾಲೇಜು ಕಲಿಯುತ್ತಿದ್ದ 18ರ ಹರೆಯದ ಯುವಕ ಅಪಘಾತಕ್ಕೆ ತುತ್ತಾಗಿ ಕಾಲನ್ನೇ ಕಳೆದುಕೊಂಡಿದ್ದಾರೆ. ಅವರಿಗೆ ಚಿಕಿತ್ಸೆ ಕೊಡಲಾಗುತ್ತಿದೆ. ಮುಂದಕ್ಕೆ ಚಿಕಿತ್ಸೆಯೊಂದಿಗೆ ಕೃತಕ ಕಾಲು ಕೂಡ ಜೋಡಣೆ ಮಾಡಬೇಕಾಗಿದ್ದು, ಮನೆಮಂದಿ ಸಾರ್ವಜನಿಕ ಸಹಾಯ ಯಾಚಿಸಿದ್ದಾರೆ.

ಬ್ರಹ್ಮಾವರದ ಆಟೋರಿಕ್ಷಾ ಚಾಲಕ ಚಾಂತಾರು ಗ್ರಾಮದ ಅಂಗಡಿಬೆಟ್ಟುವಿನ ಪಾಂಡುರಂಗ ನಾಯಕ್‌ ಅವರ ಪುತ್ರ ಪ್ರಶಾಂತ್‌ ಅವರು ಕಾಲು ಕಳೆದುಕೊಂಡ ಯುವಕ. ಅವರು ಕಡಿಯಾಳಿಯ ಇಂದಿರಾ ಶಿವರಾವ್‌ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಲೆಕ್ಟ್ರಾನಿಕ್ಸ್‌ ಆ್ಯಂಡ್‌ ಕಮ್ಯುನಿಕೇಶನ್‌ ವಿಭಾಗದಲ್ಲಿ  ಕಲಿಯುತ್ತಿದ್ದರು.

ಘಟನೆಯ ಹಿನ್ನೆಲೆ
ಸ್ನೇಹಿತನ ಬೈಕಿನಲ್ಲಿ ಪೇಟೆ ಕಡೆಗೆ ಹೋಗುತ್ತಿದ್ದಾಗ ಸವಾರನ ನಿಯಂತ್ರಣ ತಪ್ಪಿ ಬೈಕ್‌ ಪಲ್ಟಿಯಾಗಿತ್ತು. ಸವಾರ ದೂರಕ್ಕೆ ಎಸೆಯಲ್ಪಟ್ಟರೆ, ಸಹಸವಾರನಾಗಿದ್ದ ಪ್ರಶಾಂತ ಬೈಕಿನಡಿ ಸಿಲುಕಿ ಕಾಲಿಗೆ ಗಂಭೀರ ಸ್ವರೂಪದ ಪೆಟ್ಟಾಗಿತ್ತು.

ಮಣಿಪಾಲದಲ್ಲಿ ಚಿಕಿತ್ಸೆ
ಮಣಿಪಾಲದ ಕೆಎಂಸಿಯಲ್ಲಿ  ಚಿಕಿತ್ಸೆ ಪಡೆಯುತ್ತಿರುವ ಪ್ರಶಾಂತನ ಕಾಲಿನ ಶಸ್ತ್ರಚಿಕಿತ್ಸೆಯನ್ನು ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಡಕಾಲಿನ ರಕ್ತನಾಳಕ್ಕೆ ಗಂಭೀರವಾಗಿ ಪೆಟ್ಟಾಗಿದ್ದ ಕಾರಣ ಮೊಣಗಂಟಿನಿಂದ ಕೆಳಗಿನ ಕಾಲನ್ನೇ ಕಟ್‌ ಮಾಡಬೇಕು ಎಂದು ವೈದ್ಯರು ತಿಳಿಸಿದ್ದರು. ಅದರಂತೆ ಮೊಣಗಂಟಿನಿಂದ ಕೆಳಗಿನ ಎಡಕಾಲು ಕತ್ತರಿಸಲಾಗಿದೆ.

ಶಸ್ತ್ರಚಿಕಿತ್ಸೆ, ಕೃತಕ ಕಾಲು ಜೋಡಣೆ
ಶಸ್ತ್ರಚಿಕಿತ್ಸೆಗೆ ಭಾರೀ ಹಣ ಖರ್ಚಾಗಿದ್ದು, ಕೃತಕ ಕಾಲಿನ ಜೋಡಣೆ ಹಾಗೂ ಮುಂದಿನ ವೈದ್ಯಕೀಯ ವೆಚ್ಚಕ್ಕೆ ಲಕ್ಷಾಂತರ ರೂ, ವ್ಯಯವಾಗಲಿದ್ದು , ಹೆತ್ತವರು ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಮುಂದಿನ ವಿದ್ಯಾಭ್ಯಾಸದ ಕುರಿತು ಕಾಲೇಜಿನ ಪ್ರಾಂಶುಪಾಲರು ಮಾನವೀಯ ಸ್ಪಂದನೆ ನೀಡಿದ್ದಾರೆ ಎಂದು ಯುವಕನ ತಂದೆ ತಿಳಿಸಿದ್ದಾರೆ.

ಆರ್ಥಿಕ ಸಹಾಯ ಮಾಡಿ
ಇನ್ನೂ ಹದಿಹರೆಯದ ವಯಸ್ಸಿನಲ್ಲಿರುವ ಪ್ರಶಾಂತನ ಭವಿಷ್ಯ ರೂಪಣೆ ಸದ್ಯ ಸಮಾಜದ ದಾನಿಗಳ ಕೈಯಲ್ಲಿದೆ. ಸಹೃದಯೀ, ಮಾನವೀಯ ಮನಸ್ಸುಳ್ಳ ದಾನಿಗಳು ಸ್ಪಂದಿಸಿ ಹಣಕಾಸಿನ ಸಹಾಯವನ್ನು ಯುವಕನಿಗೆ ಮಾಡಬೇಕಿದೆ. ಸಹಾಯ ಮಾಡಲಿಚ್ಛಿಸುವ ಮಾನವೀಯ ದಾನಿಗಳು ಸಿಂಡಿಕೇಟ್‌ ಬ್ಯಾಂಕಿನ ಬ್ರಹ್ಮಾವರ ಶಾಖೆಯಲ್ಲಿರುವ ಪ್ರಶಾಂತ್‌ ಅವರ ಉಳಿತಾಯ ಖಾತೆಗೆ (01122210027744) ಹಣ ಜಮೆ ಮಾಡಬಹುದು. ಬ್ಯಾಂಕ್‌ನ ಐಎಫ್ಎಸ್‌ಸಿ ಕೋಡ್‌-SYNB0000112. ನೇರವಾಗಿ ಸಂಪರ್ಕಿಸಲು ಇಚ್ಛಿಸುವವರು ಪ್ರಶಾಂತನ ತಂದೆ ಪಾಂಡುರಂಗ ನಾಯಕ್‌ ಅವರ ಮೊಬೈಲ್‌ ಸಂಖ್ಯೆಯನ್ನು  (9448770285) ಸಂಪರ್ಕಿಸಿ ಸಹಾಯ ಮಾಡಬಹುದು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.