ತ್ರಾಸಿ:ಬಸ್ಗಳು ಮುಖಾಮುಖೀ ಢಿಕ್ಕಿ: ಹಲವರಿಗೆ ಗಾಯ
Team Udayavani, Sep 21, 2018, 11:22 AM IST
ಉಪ್ಪುಂದ: ತ್ರಾಸಿ ರಾ. ಹೆದ್ದಾರಿ 66ರ ಬೀಚ್ ಬಳಿ ಎರಡು ಬಸ್ಸುಗಳು ಮುಖಾಮುಖೀ ಢಿಕ್ಕಿಯಾದ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಗುಲ್ಬರ್ಗಕ್ಕೆ ಹೋಗುತ್ತಿದ್ದ ಹಾಗೂ ಭಟ್ಕಳದಿಂದ ಕುಂದಾಪುರಕ್ಕೆ ಬರುತ್ತಿದ್ದ ಎರಡು ಖಾಸಗಿ ಬಸ್ಸುಗಳು ತ್ರಾಸಿ ಕಡಲ ತೀರದ ಬಳಿ ಮುಖಾಮುಖೀ ಢಿಕ್ಕಿಯಾದ ಪರಿಣಾಮ ಚಾಲಕ ಸಹಿತ ಹಲವರು ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಒಂದು ಬಸ್ಸಿನ ನಿರ್ವಾಹಕನ ಕಾಲಿಗೆ ತೀವ್ರ ಸ್ವರೂಪದ ಗಾಯವಾಗಿದೆ. ಇತರ 8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ 6 ಮಂದಿ ಗಾಯಾಳುಗಳನ್ನು ಕುಂದಾಪುರ ಹಾಗೂ ಇಬ್ಬರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಟ್ರಾಫಿಕ್ ಜಾಮ್
ಅಪಘಾತದಿಂದಾಗಿ ರಾ.ಹೆದ್ದಾರಿಯಲ್ಲಿ ಕೆಲಕಾಲ ವಾಹನಗಳು ಸಾಲುಗಟ್ಟಿ ನಿಂತ ಪರಿಣಾಮ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಗಂಗೊಳ್ಳಿ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಎರಡು ಬಸ್ಸುಗಳ ಮುಂಭಾಗ ಜಖಂಗೊಂಡಿದೆ. ಗಂಗೊಳ್ಳಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?