ಡಿವೈಡರ್ ಹಾರಿ ಗುದ್ದಿದ ಕಾರು : ಟೆಂಪೋ ಚಾಲಕ ಸೇರಿ ಇಬ್ಬರು ಬಲಿ
Team Udayavani, Jul 14, 2018, 11:40 AM IST
ಉಡುಪಿ : ಇಲ್ಲಿನ ಸಂತೆಕಟ್ಟೆಯ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಭೀಕರ ಅಪಘಾತ ನಡೆದಿದ್ದು ಇಬ್ಬರು ಚಾಲಕರು ಸಾವನ್ನಪ್ಪಿದ್ದು, ವೈದ್ಯ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬ್ರಹ್ಮಾವರ ಕಡೆಯಿಂದ ಉಡುಪಿಗೆ ತೆರಳುತ್ತಿದ್ದ ವೈದ್ಯರೊಬ್ಬರ ಕಾರು ಡಿವೈಡರ್ ಹಾರಿ ಉಡುಪಿಯಿಂದ ಬ್ರಹ್ಮಾವರ ಕಡೆಗೆ ತೆರಳುತ್ತಿದ್ದ ಟೆಂಪೋಗೆ ಮುಖಾಮುಖೀ ಢಿಕ್ಕಿಯಾಗಿದೆ. ಪರಿಣಾಮವಾಗಿ ಟೆಂಪೋ ಚಾಲಕ ಟೆಂಪೋ ಚಾಲಕ ಬೈಲೂರು ಕೊರಂಗರಪಾಡಿಯ ಸುಂದರ್ ಎನ್ನುವವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಟೆಂಪೋದಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರಿನಲ್ಲಿದ್ದ ಚಾಲಕ ಮತ್ತು ವೈದ್ಯ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಯಿತು , ಚಾಲಕ ಅನುಪ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ವೈದ್ಯರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ರಸ್ತೆಯಲ್ಲಿದ್ದ ಹೊಂಡ ತಪ್ಪಿಸಲು ಹೋಗಿ ಕಾರು ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎಂದು ಪ್ರತ್ಯಕ್ಷ ದರ್ಶಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಉಡುಪಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ