ಫ್ರಾಲೀ, ಪಂದಳ ರಾಜವಂಶಜ ಕೊಲ್ಲೂರು ಭೇಟಿ
Team Udayavani, Nov 3, 2018, 10:14 AM IST
ಕೊಲ್ಲೂರು: ಪದ್ಮಭೂಷಣ ಡೇವಿಡ್ ಫ್ರಾಲೀ ಮತ್ತು ಪಂದಳ ರಾಜವಂಶಸ್ಥ ಶಶಿಕುಮಾರ ವರ್ಮ ಅವರು ಶುಕ್ರವಾರ ಸಕುಟುಂಬಿಕರಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಭಾರತೀಯ ಸಂಸ್ಕೃತಿ, ಸಂಸ್ಕಾರ, ಧರ್ಮ, ಯೋಗ, ಆಯುರ್ವೇದಗಳಲ್ಲಿ ವಿಶೇಷ ಅಧ್ಯಯನ ಮಾಡಿರುವ ಡೇವಿಡ್ ಫ್ರಾಲೀ ಶ್ರೀದೇವಿಯ ದರ್ಶನ, ಪೂಜೆಯ ಬಳಿಕ ಸುದ್ದಿಗಾರರೊಡನೆ ಮಾತನಾಡಿ, ಹಿಂದೂ ಧರ್ಮಕ್ಕೆ ಅದ್ಭುತವಾದ ಪರಂಪರೆಯಿದೆ. ಯೋಗದಿಂದ ದೈಹಿಕ ಹಾಗೂ ಮಾನಸಿಕ ವಿಕಸನ ಸಾಧ್ಯ. ನಿತ್ಯ ಯೋಗಾಭ್ಯಾಸ ಮಾಡುವುದರಿಂದ ಶರೀರದ ತ್ರಿದೋಷಗಳ ಹೊಂದಾಣಿಕೆ ಸಾಧ್ಯವಾಗಿ ವ್ಯಾಧಿಕ್ಷಮತ್ವ ಬಲ ವೃದ್ಧಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಆಯುರ್ವೇದದ ಮೂಲ ಸಿದ್ಧಾಂತದಂತೆ ಜೀವನಕ್ರಮ ರೂಪಿಸಿಕೊಂಡಲ್ಲಿ ದೈಹಿಕ ಮತ್ತು ಮಾನಸಿಕವಾಗಿ ಕ್ಷೇಮವಾಗಿರಲು ಸಾಧ್ಯ ಎಂದರು.
ಪಂದಳ ರಾಜವಂಶಜ ಭೇಟಿ
ಪಂದಳ ರಾಜ ಮನೆತನದ ಸದಸ್ಯ ಹಾಗೂ ಶಬರಿ ಕ್ಷೇತ್ರದ ಆಡಳಿತದಾರರಾದ ಶಶಿಕುಮಾರ ವರ್ಮ ಹಾಗೂ ಮೀರಾ ಶಶಿಕುಮಾರ ವರ್ಮ ಅವರು ಕೊಲ್ಲೂರು ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ದೇಗುಲದ ಕಾರ್ಯನಿರ್ವಹಣಾಧಿಕಾರಿ ಹಾಲಪ್ಪ, ಉಪಕಾರ್ಯ ನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಸಮಿತಿ ಸದಸ್ಯರಾದ ವಂಡಬಳ್ಳಿ ಜಯರಾಮ ಶೆಟ್ಟಿ, ಮಹೇಶ್ ಪೂಜಾರಿ, ರಮೇಶ ಗಾಣಿಗ ಕೊಲ್ಲೂರು, ಶಿವರಾಮಕೃಷ್ಣ ಭಟ್, ಸಂದೀಪ್, ಅಶೋಕ್ ಶೆಟ್ಟಿ, ಗಿರೀಶ್ ಶೆಟ್ಟಿ, ಸಂದೇಶ್, ಶಶಿಕುಮಾರ್ ಹಾಗೂ ದೇಗುಲದ ಅರ್ಚಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ