ಮೀನುಗಾರರ ರಕ್ಷಣೆಗೆ ಕ್ರಮ: ಡಾ| ಜಯಮಾಲಾ


Team Udayavani, Jan 5, 2019, 12:30 AM IST

x-117.jpg

ಮಲ್ಪೆ: ಮಲ್ಪೆ ಬಂದರಿನಿಂದ 20 ದಿನಗಳ ಹಿಂದೆ ತೆರಳಿದ್ದ 7 ಮಂದಿ ಮೀನುಗಾರರಿದ್ದ ಸುವರ್ಣ ತ್ರಿಭುಜ ದೋಣಿಯನ್ನು ಪತ್ತೆ ಹಚ್ಚಿ ಮೀನುಗಾರರನ್ನು ರಕ್ಷಿಸಲು ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ| ಜಯಮಾಲಾ ತಿಳಿಸಿದ್ದಾರೆ.

ಅತಿ ಶೀಘ್ರ ಎಲ್ಲರನ್ನೂ ಸುರಕ್ಷಿತವಾಗಿ ಕರೆತರುವ ವಿಶ್ವಾಸವಿದೆ ಎಂದವರು ಪತ್ರಿಕಾ ಹೇಳಿಕೆಯಲ್ಲಿ  ತಿಳಿಸಿದ್ದಾರೆ. ದೋಣಿ ನಾಪತ್ತೆಯಾದ ವಿಷಯ ತಿಳಿದ ತತ್‌ಕ್ಷಣವೇ ಕರಾವಳಿ ಕಾವಲು ಪೊಲೀಸ್‌, ಕೋಸ್ಟ್‌ ಗಾರ್ಡ್‌ ಮತ್ತು ಮೀನುಗಾರಿಕಾ ಇಲಾಖೆಯವರಿಗೆ ಮಾಹಿತಿ ನೀಡಿ ಅವರನ್ನು ಜಾಗೃತಗೊಳಿಸಿದ್ದಲ್ಲದೇ ಈ ಎಲ್ಲ ವಿಭಾಗಗಳ ಸಿಬಂದಿಗಳ ಕಾರ್ಯಪಡೆ ರಚಿಸಿ ಶೋಧನಾ ಕಾರ್ಯವನ್ನು ಅತ್ಯಂತ ಆದ್ಯತೆಯಿಂದ ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಸೂಚಿಸಲಾಗಿದೆ. ಅಗತ್ಯ ಇದ್ದಲ್ಲಿ ನೌಕಾದಳದ ಸಹಾಯ ಪಡೆದುಕೊಳ್ಳುವಂತೆ ಮಾರ್ಗದರ್ಶನ  ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ವ್ಯಾಪ್ತಿಯಲ್ಲಷ್ಟೇ ಅಲ್ಲದೆ ಗೋವಾ ಮತ್ತು ಮಹಾರಾಷ್ಟ್ರ  ವ್ಯಾಪ್ತಿಯಲ್ಲಿಯೂ  ಈ ಶೋಧ ಕಾರ್ಯ ಅತ್ಯಂತ ವ್ಯಾಪಕವಾಗಿ ನಡೆಯುವಂತೆ ನಿಗಾ ವಹಿಸಲಾಗಿದೆ. ಮಹಾರಾಷ್ಟ್ರದ ಬಂದರುಗಳು ಮತ್ತು ಸಮುದ್ರ ಪ್ರದೇಶದಲ್ಲಿ  ಶೋಧ ಕಾರ್ಯಕ್ಕೆ ಸೈನ್ಯದ ನೆರವು ಪಡೆದು ಕೊಂಡು ಮುಂದು ವರಿಯುವ ಸಾಧ್ಯತೆಗಳ ಬಗ್ಗೆಯೂ  ಈಗಾಗಲೇ ಪರಿಶೀಲಿಸಿ ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಲಾಗಿದೆ. ಇದಕ್ಕೆ ಬೇಕಾದ ಅನುಮತಿ ಪಡೆದುಕೊಳ್ಳುವ ಪ್ರಕ್ರಿಯೆ ನಡೆಸಲಾಗಿದೆ.  ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಸಹ ಶನಿವಾರ ಉಡುಪಿಗೆ ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಟ್ವೀಟ್‌
ಮೀನುಗಾರಿಕೆಗೆ ಹೋಗಿ ಸಮುದ್ರದಲ್ಲಿ ನಾಪತ್ತೆಯಾಗಿರುವ ಮೀನುಗಾರರನ್ನು ಪತ್ತೆ ಹಚ್ಚಿ ಮರಳಿ ಕರೆತರುವ ಕಾರ್ಯಾಚರಣೆಯನ್ನು ಸಂಬಂಧಪಟ್ಟ ಇಲಾಖೆಗಳು ಇನ್ನಷ್ಟು ಚುರುಕಾಗಿ ನಡೆಸಬೇಕು. ಇದಕ್ಕೆ ಅಗತ್ಯ ಇರುವ ಎಲ್ಲ ರೀತಿಯ ನೆರವು ಸರಕಾರದಿಂದ ನೀಡುವಂತೆ ನಾನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರ ಜತೆಯಲ್ಲಿಯೂ ಮಾತನಾಡುತ್ತೇನೆ. ಕಾಣೆಯಾಗಿರುವ ಎಲ್ಲರೂ ಸುರಕ್ಷಿತವಾಗಿ ತಮ್ಮವರನ್ನು ಸೇರಿಕೊಳ್ಳುವಂತಾಗಲಿ.
ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

ಟಾಪ್ ನ್ಯೂಸ್

1

Sikandar Movie: ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

11-kushtagi

SSLC Result: ಉದಯವಾಣಿ ಪತ್ರಿಕೆಯ ಬೈಕ್ ರೂಟ್ ವಿತರಕನ ಮಗಳು ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್

10-uv-fusion

UV Fusion: ವ್ಯಾಪ್ತಿ ಪ್ರದೇಶದ ಹೊರಗೆ

Floor Test: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದುಷ್ಯಂತ್ ಚೌಟಾಲ

Floor Test: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದುಷ್ಯಂತ್ ಚೌಟಾಲ

Delhi Police; 9 people belonging to Lawrence Bishnoi-Goldy Brar gang arrested

Delhi Police; ಲಾರೆನ್ಸ್ ಬಿಷ್ಣೋಯ್-ಗೋಲ್ಡಿ ಬ್ರಾರ್ ಗ್ಯಾಂಗ್‌ ಗೆ ಸೇರಿದ 9 ಜನರ ಬಂಧನ

9-muddebihala

SSLC Result: ರಾಜ್ಯಕ್ಕೆ 3, ಜಿಲ್ಲೆಗೆ ಮೊದಲ ಸ್ಥಾನ ಪಡೆದ ಪವಿತ್ರಾ

IPL 2024; Trending Come to RCB: What happened to the LSG team ?

IPL 2024; ಟ್ರೆಂಡ್ ಆಗುತ್ತಿದೆ Come to RCB: ಅಷ್ಟಕ್ಕೂ ಎಲ್ಎಸ್ ಜಿ ತಂಡದಲ್ಲಿ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ನಾಳೆ ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1

Sikandar Movie: ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

11-kushtagi

SSLC Result: ಉದಯವಾಣಿ ಪತ್ರಿಕೆಯ ಬೈಕ್ ರೂಟ್ ವಿತರಕನ ಮಗಳು ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್

10-uv-fusion

UV Fusion: ವ್ಯಾಪ್ತಿ ಪ್ರದೇಶದ ಹೊರಗೆ

Floor Test: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದುಷ್ಯಂತ್ ಚೌಟಾಲ

Floor Test: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದುಷ್ಯಂತ್ ಚೌಟಾಲ

Delhi Police; 9 people belonging to Lawrence Bishnoi-Goldy Brar gang arrested

Delhi Police; ಲಾರೆನ್ಸ್ ಬಿಷ್ಣೋಯ್-ಗೋಲ್ಡಿ ಬ್ರಾರ್ ಗ್ಯಾಂಗ್‌ ಗೆ ಸೇರಿದ 9 ಜನರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.