ಆದಿ ಉಡುಪಿ ಸಂತೆ: ನಗರಸಭೆಯಿಂದ ವರ್ತಕರಿಗೆ ಎಚ್ಚರಿಕೆ
Team Udayavani, Apr 16, 2020, 4:56 AM IST
ಸಾಂದರ್ಭಿಕ ಚಿತ್ರ.
ಉಡುಪಿ: ಕೋವಿಡ್ 19 ಸೋಂಕು ಭೀತಿ ಹಿನ್ನೆಲೆಯಲ್ಲಿ ಎಪಿಎಂಸಿ ವತಿಯಿಂದ ನಡೆಯುತ್ತಿದ್ದ ಜಿಲ್ಲೆಯ ಎಲ್ಲ ಸಂತೆಗಳನ್ನು ರದ್ದುಗೊಳಿಸಲಾಗಿದೆಯಾದರೂ ಬುಧವಾರ ಆದಿ ಉಡುಪಿಯಲ್ಲಿ ಸಂತೆ ನಡೆಸಲು ಪ್ರಯತ್ನಿಸಿದ ವರ್ತಕರನ್ನು ನಗರಸಭೆ ಅಧಿಕಾರಿಗಳು ಚದುರಿಸಿದ್ದಾರೆ.
ಸಂತೆಗೆ ರಾಜ್ಯದಲ್ಲಿ ನಿಷೇಧವಿದೆ. ಕೆಲವು ವರ್ತಕರು ಮಾತ್ರ ಸರಕಾರದ ಆದೇಶ ಉಲ್ಲಂಘಿಸಿ ಬುಧವಾರ ಆದಿ ಉಡುಪಿಯಲ್ಲಿ ಸಂತೆ ನಡೆಸುವ ಪ್ರಯತ್ನ ಮಾಡಿದ್ದಾರೆ. ಜನರು ಸಾಮಾಜಿಕ ಅಂತರವನ್ನು ಮರೆತು ತರಕಾರಿ ಹಣ್ಣು ಹಂಪಲು ಖರೀದಿಸಲು ಮುಗಿಬಿದ್ದರು. ಈ ಬಗ್ಗೆ ಮಾಹಿತಿ ದೊರಕುತ್ತಿದಂತೆ ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಬಂದ ವರ್ತಕರನ್ನು ಓಡಿಸಿದ್ದಾರೆ. ಎಪಿಎಂಸಿ ಪ್ರಾಂಗಣದೊಳಗೆ ಸಂತೆ ನಡೆದಿಲ್ಲ. ಹೊರಗೆ ಕೆಲವು ವರ್ತಕರು ಬಂದು ವ್ಯವಹಾರ ನಡೆಸಲು ಯತ್ನಿಸಿದರು ಎಂದು ತಿಳಿದುಬಂದಿದೆ.
ಹಿಂದೆ ಕಳುಹಿಸಲಾಗಿದೆ
ಕೋವಿಡ್ 19 ಭೀತಿಯಿಂದ ಸಂತೆಯನ್ನು ರದ್ದುಗೊಳಿಸಲಾಗಿದೆ. ಕೆಲವು ವರ್ತಕರು ಬಂದು ವ್ಯಾಪಾರ ಮಾಡಲು ಪ್ರಯತ್ನಿಸುತ್ತಿರುವುದು ಗಮನಕ್ಕೆ ಬಂದಿದ್ದು, ತತ್ಕ್ಷಣ ಅವರನ್ನು ವ್ಯಾಪಾರ ನಡೆಸದಂತೆ ಎಚ್ಚರಿಕೆ ನೀಡಿ ವರ್ತಕರನ್ನು ಹಿಂದೆ ಕಳುಹಿಸಲಾಗಿದೆ ಎಂದು ನಗರಸಭೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ