“ಅಡಿಗರು ನವ್ಯ ಸಾಹಿತ್ಯದ ಅಮೂಲ್ಯ ರತ್ನ’
Team Udayavani, Mar 22, 2018, 8:35 AM IST
ಹೆಬ್ರಿ: ಮೊಗೇರಿ ಗೋಪಾಲಕೃಷ್ಣ ಅಡಿಗರು ಕನ್ನಡ ನವ್ಯ ಸಾಹಿತ್ಯದ ಅಮೂಲ್ಯ ರತ್ನ. ಅಡಿಗರ ಸಾಹಿತ್ಯವನ್ನು ವಿದ್ಯಾರ್ಥಿಗಳು ಅಧ್ಯಯನ ನಡೆಸುವ ಅಗತ್ಯವಿದೆ ಎಂದು ಡಾ|ಟಿ.ಎಂ.ಎ ಪೈ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ಮಹಾಬಲೇಶ್ವರ ರಾವ್ ಹೇಳಿದರು.
ಅವರು ಉಡುಪಿ ಜಿಲ್ಲಾ ಕ.ಸಾ.ಪ. ಮತ್ತು ಸ.ಪ್ರ.ದ.ಕಾಲೇಜು ಹಿರಿಯಡಕ ಇವರ ಸಹಯೋಗದೊಂದಿಗೆ ಹಿರಿಯಡಕ ಸ.ಪ್ರ.ದ.ಕಾಲೇಜಿನಲ್ಲಿ ನಡೆದ ಕುರಾಡಿ ಸೀತಾರಾಮ ಅಡಿಗ , ಟಿ. ಕಮಲಾಕ್ಷಿ ಎಸ್.ಅಡಿಗ ದತ್ತಿನಿಧಿ ಕಾರ್ಯಕ್ರಮ, ಮೊಗೇರಿ ಗೋಪಾಲಕೃಷ್ಣ ಅಡಿಗ ನೂರೊಂದು ನೆನಪು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹಿರಿಯಡಕ ಸ. ಪ್ರ. ದ. ಕಾಲೇಜಿನ ಪ್ರಾಂಶುಪಾಲ ಜಿ.ಆರ್.ರಾಯ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಲೋಕಕ್ಕೆ ಗೋಪಾಲಕೃಷ್ಣ ಅಡಿಗರ ಕೊಡುಗೆಯನ್ನು ಕುರಿತು ಪ್ರತಾಪ್ ಚಂದ್ರ ಶೆಟ್ಟಿ ಹಳ್ನಾಡು ಉಪನ್ಯಾಸ ನೀಡಿದರು. ಎಚ್. ಚಂದ್ರಶೇಖರ ಕೆದ್ಲಾಯ ಅವರಿಂದ ಅಡಿಗರ ಗೀತಗಾಯನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಚಿತ್ರಪಾಡಿ ಉಪೇಂದ್ರ ಸೋಮಯಾಜಿ, ಡಾ| ಪಾದೇಕಲ್ಲು ವಿಷ್ಣು ಭಟ್, ಡಾ| ನಿಕೇತನ, ಸುಜಯ ಕೆ.ಎಸ್. ಮೊದಲಾದವರು ಉಪಸ್ಥಿತರಿದ್ದರು. ಉಡುಪಿ ಜಿ.ಕ.ಸಾ.ಪ. ಗೌರವಾಧ್ಯಕ್ಷ ನಾರಾಯಣ ಮಡಿ ಸ್ವಾಗತಿಸಿ, ಉಪನ್ಯಾಸಕ ಸುಭಾಷ್ ಹೆಚ್.ಕೆ ನಿರೂಪಿಸಿ, ರಾಘವೇಂದ್ರ ಪಿ.ಕೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ