ಹಲವು ಬ್ಯಾಂಕ್ ಗಳಲ್ಲಿ ಆದಿತ್ಯ ರಾವ್ ಸೇಫ್ ಲಾಕರ್: ಉಡುಪಿಯಲ್ಲಿ ಪರಿಶೀಲನೆ
Team Udayavani, Jan 25, 2020, 1:33 PM IST
ಉಡುಪಿ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿ ಆದಿತ್ಯ ರಾವ್ ಹಲವು ಬ್ಯಾಂಕ್ ಗಳಲ್ಲಿ ಸೇಫ್ ಲಾಕರ್ ಹೊಂದಿದ್ದ ಎಂಬ ವಿಚಾರ ಬಯಲಾಗಿದೆ.
ಮೂಲತಃ ಉಡುಪಿಯ ಮಣಿಪಾಲದವನಾಗಿರುವ ಆರೋಪಿ ಆದಿತ್ಯ ರಾವ್ ಉಡುಪಿಯ ಕುಂಜಿಬೆಟ್ಟಿನಲ್ಲಿರುವ ಕರ್ಣಾಟಕ ಬ್ಯಾಂಕ್ ನಲ್ಲಿ ಸೇಫ್ ಲಾಕರ್ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ಹಿನ್ನಲೆಯಲ್ಲಿ ಮಂಗಳೂರು ಪೊಲೀಸರು ಆರೋಪಿಯನ್ನು ಉಡುಪಿಗೆ ಕರೆದುಕೊಂಡು ಬಂದು ತಪಾಸಣೆ ನಡೆಸಲಾಗಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಮಂಗಳೂರು ಉತ್ತರ ಪೊಲೀಸ್ ಉಪವಿಭಾಗದ ಎಸಿಪಿ ಬೆಳ್ಳಿಯಪ್ಪ ಅವರ ತಂಡ ಆರೋಪಿ ಆದಿತ್ಯ ರಾವ್ ನನ್ನು ಉಡುಪಿಗೆ ಕರೆದುಕೊಂಡು ಬಂದಿದ್ದರು. ಉಡುಪಿಯಲ್ಲಿ ನಗರ ಪೊಲೀಸರು ಸಾಥ್ ನೀಡಿದ್ದಾರೆ.
ಕುಂಜಿಬೆಟ್ಟು ಕರ್ಣಾಟಕ ಬ್ಯಾಂಕ್ ಶಾಖೆಯಲ್ಲಿರುವ ಸೇಫ್ ಲಾಕರ್ ಪರಿಶೀಲನೆ ನಡೆಸಲಾಗಿದೆ. ಲಾಕರ್ ನಲ್ಲಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಲಾಕರ್ ನಲ್ಲಿ ಒಂದು ಪ್ಯಾಕೆಟ್ ಪತ್ತೆಯಾಗಿದ್ದು ಅದನ್ನು ಪ್ರಯೋಗ ಶಾಲೆಗೆ ನೀಡಿ ಪರಿಶೀಲಿಸಲಾಗುವುದು ಎಂಬ ಮಾಹಿತಿ ಲಭ್ಯವಾಗದೆ. ಉಳಿದಂತೆ ಕೆಲವು ಕಾಗದ ಪತ್ರಗಳು ಲಭ್ಯವಾಗಿದೆ.
ಉಡುಪಿಯಿಂದ ಪೊಲೀಸರ ತಂಡ ಮಲ್ಪೆಗೆ ತೆರಳಿದ್ದು ಅಲ್ಲಿಯೂ ಆರೋಪಿಯಿಂದ ಇನ್ನಷ್ಟು ಮಾಹಿತಿ ಕಲೆಹಾಕಲಿದ್ದಾರೆ.
ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ವಿಮಾನ ನಿಲ್ದಾಣ ಬಾಂಬ್ ಪತ್ತೆ ಪ್ರಕರಣದ ಆರೋಪಿ ಆದಿತ್ಯ ರಾವ್ ನನ್ನು ಪೊಲೀಸರು ಉಡುಪಿ ಬ್ಯಾಂಕ್ ಗೆ ಕರೆದುಕೊಂಡು ಬಂದಾಗ ಬ್ಯಾಂಕ್ ಮುಂಭಾಗದಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಆರೋಪಿಯು ಬ್ಯಾಂಕ್ ನಲ್ಲಿ ಏನು ಇರಿಸಿರಬಹುದು ಎಂಬ ಕುತೂಹಲ ಎಲ್ಲರಲ್ಲೂ ಮನೆಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ