ಸಾಲಿಗ್ರಾಮ ಪ.ಪಂ. ಆಡಳಿತ ವ್ಯವಸ್ಥೆ  ಸ್ತಬ್ಧ; ಸಮಸ್ಯೆ ಕೇಳುವವರಿಲ್ಲ


Team Udayavani, Oct 30, 2018, 2:35 AM IST

panchayat-29-10.jpg

ಕೋಟ: ಸಿಬಂದಿ ಕೊರತೆ, ಸೇವೆಯಲ್ಲಿರುವವರ ದೀರ್ಘ‌ ರಜೆ, ಆಯ್ಕೆಯಾದ ಸದಸ್ಯರಿಗೆ ಅಧಿಕಾರವಿಲ್ಲದಿರುವುದು ಈ ಎಲ್ಲಾ ಸಮಸ್ಯೆಯಿಂದಾಗಿ ಸಾಲಿಗ್ರಾಮ ಪ.ಪಂ. ಆಡಳಿತ ವ್ಯವಸ್ಥೆ ಸುಮಾರು 2ತಿಂಗಳಿಂದ ಸಂಪೂರ್ಣ ಸ್ತಬ್ಧಗೊಂಡಿದೆ. ಕಟ್ಟಡ ಪರವಾನಿಗೆ, ತೆರಿಗೆ ನಿರ್ಧಾರ, ಮನೆ ಪರವಾನಿಗೆ, ಬೀದಿ ದೀಪದ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಹೀಗೆ ಹತ್ತಾರು  ಕೆಲಸಗಳಿಗೆ ಅರ್ಜಿ ಸಲ್ಲಿಸಿದವರು ಕೆಲಸವಾಗದೆ ತಿಂಗಳುಗಟ್ಟಲೆಯಿಂದ ಕಾಯುತ್ತಿದ್ದಾರೆ.

ದೀರ್ಘ‌ ರಜೆ; ಆಡಳಿತಾಧಿಕಾರಿಗಳ ಭೇಟಿ ಇಲ್ಲ
ಪ.ಪಂ.ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಂಜಿನಿಯರ್‌ ಆರೋಗ್ಯದ ಸಮಸ್ಯೆ ಹೇಳಿ  ಒಂದು ತಿಂಗಳಿಂದ ರಜೆಯಲ್ಲಿದ್ದಾರೆ ಹಾಗೂ ಅನಧಿಕೃತವಾಗಿ ರಜೆಯಲ್ಲಿ ತೆರಳಿರುವ ಕಾರಣಕ್ಕೆ ಇವರಿಗೆ ನೋಟೀಸ್‌ ನೀಡಲಾಗಿದೆ.  ಅದೇ ರೀತಿ ಆರ್‌.ಒ. ಕೂಡ ಆರೋಗ್ಯದ ಕಾರಣಕ್ಕಾಗಿ 15 ದಿನಗಳಿಂದ ರಜೆಯಲ್ಲಿದ್ದಾರೆ. ಅಧ್ಯಕ್ಷರ ನೇಮಕವಾಗದಿರುವುದರಿಂದ ಆಡಳಿತಾಧಿಕಾರಿಗಳ ಆಡಳಿತವಿದ್ದು, ಈ ಮೊದಲು ಬ್ರಹ್ಮಾವರ ತಹಶೀಲ್ದಾರ್‌ ಆಡಳಿತಾಧಿಕಾರಿಯಾಗಿದ್ದರು. ಆದರೆ ಅವರು ಒಂದೂವರೇ ತಿಂಗಳಲ್ಲಿ ಕೇವಲ ಎರಡು-ಮೂರು ಬಾರಿ ಪ.ಪಂ.ಗೆ ಭೇಟಿ ನೀಡಿದ್ದಾರೆ. ಇದೀಗ ಅವರು ವರ್ಗಾವಣೆಗೊಂಡಿದ್ದು, ಉಡುಪಿ ತಹಶೀಲ್ದಾರ್‌ ಅಧಿಕಾರ ವಹಿಸಿಕೊಂಡಿದ್ದಾರೆ. ಇವರಿಗೂ ಕೂಡ ಕಂದಾಯ ಇಲಾಖೆಯಲ್ಲಿನ ಕಾರ್ಯದೊತ್ತಡ, ಮೂರು ತಾಲೂಕುಗಳ ದೊಡ್ಡ ಹೊಣೆಗಾರಿಕೆ ಇರುವುದರಿಂದ ಪ.ಪಂ.ಗೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ. ಪ್ರಮುಖ ಕಡತಗಳಿದ್ದರೆ ಮುಖ್ಯಾಧಿಕಾರಿಗಳೇ ಇವರ ಬಳಿ ತೆರಳಿ ಸಹಿ ಹಾಕಿಸಿಕೊಂಡು ಬರುತ್ತಾರೆ.

ಖಾಯಂ ಅಧಿಕಾರಿಗಳಿಲ್ಲ
ಇಲ್ಲಿನ ಇಂಜಿನಿಯರ್‌ ಹಾಗೂ ಆರ್‌.ಒ. ಹುದ್ದೆಗೆ ಖಾಯಂ ಅಧಿಕಾರಿಗಳಿಲ್ಲ. ಹೀಗಾಗಿ ಬೇರೆ ಕಡೆಯ ಹೆಚ್ಚುವರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಆರೋಗ್ಯ ನಿರೀಕ್ಷಕರು ಕೂಡ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.  ಬಿಲ್‌ ಕಲೆಕ್ಟರ್‌, ಪ್ರಥಮದರ್ಜೆ ಸಹಾಯಕ ಅಧಿಕಾರಿ ಹೀಗೆ ಹಲವು ಹುದ್ದೆಗಳು ಖಾಲಿ ಇವೆೆ. ಇದರ ಜತೆಗೆ ಇದೀಗ ಅಧಿಕಾರಿಗಳ ಸಾಲು-ಸಾಲು ರಜೆ ಗಾಯದ ಮೇರೆ ಬರೆ ಎಳೆದಂತಾಗಿದೆ.

ಹೊಸ ಸದಸ್ಯರ ಮಾತು ನಡೆಯುತ್ತಿಲ್ಲ
ಅಧ್ಯಕ್ಷರ ಆಯ್ಕೆಯಾಗದಿರುವುದರಿಂದ ಹೊಸ ಸದಸ್ಯರಿಗೆ ಇನ್ನೂ ಕೂಡ ಪೂರ್ಣ ಪ್ರಮಾಣದ ಅಧಿಕಾರ ಸಿಕ್ಕಿಲ್ಲ. ಹೀಗಾಗಿ ನಮ್ಮ  ಮಾತನ್ನು ಯಾರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಜನರು ಪ್ರತಿದಿನ ಸಮಸ್ಯೆಗಳೊಂದಿಗೆ ನಮ್ಮ ಮುಂದೆ ನಿಲ್ಲುತ್ತಾರೆ ಎಂದು ಸದಸ್ಯರು ಅಸಹಾಯಕತೆ ತೋಡಿಕೊಳ್ಳುತ್ತಿದ್ದಾರೆ.

ಸಾಲು-ಸಾಲು ಸಮಸ್ಯೆ; ಕೆಲಸವಾಗುತ್ತಿಲ್ಲ
ಆಡಳಿತದಲ್ಲಿ ಮಹತ್ವದ ಹೊಣೆಗಾರಿಕೆ ಹೊಂದಿರುವ ಇಂಜಿನಿಯರ್‌ ಒಂದು ತಿಂಗಳಿಂದ ರಜೆಯಲ್ಲಿರುವುದರಿಂದ ಕಟ್ಟಡ ಪರವಾನಿಗೆಯ 35ಕ್ಕೂ ಹೆಚ್ಚು ಕಡತ ಹಾಗೂ ತೆರಿಗೆ ನಿರ್ಧಾರಕ್ಕಾಗಿ ಸಲ್ಲಿಕೆಯಾದ 30ಕ್ಕೂ ಹೆಚ್ಚು ಕಡತ ಬಾಕಿ ಇದೆ. ಗುತ್ತಿಗೆದಾರರ 7ಕ್ಕೂ ಹೆಚ್ಚು ಬಿಲ್‌ ಬಾಕಿ ಇದೆ.

ಎಸ್‌.ಎಫ್‌.ಸಿ. ಅನುದಾನದಲ್ಲಿ ಅನುಷ್ಠಾನಗೊಳ್ಳಬೇಕಾಗಿರುವ 86ಲಕ್ಷದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಸಾಧ್ಯವಾಗುತ್ತಿಲ್ಲ. ಹೊಸ ಮನೆಗಳಿಗೆ ಡೋರ್‌ ನಂಬರ್‌, ವಸತಿ ಯೋಜನೆಯ ಅನುಷ್ಠಾನಕ್ಕೆ ಹಿನ್ನಡೆಯಾಗಿದೆ. ಪ್ರತಿಯೊಂದು ವಾರ್ಡ್‌ನಲ್ಲೂ ಬೀದಿ ದೀಪದ ಸಮಸ್ಯೆ ದೊಡ್ಡದಾಗಿದೆ. ಆನ್‌ಲೈನ್‌ ಮೂಲಕ ನೀಡಿದ ದೂರುಗಳಿಗೂ 18-20ದಿನ ಪರಿಹಾರ ಸಿಗುತ್ತಿಲ್ಲ. ಕಸದ ಸಮಸ್ಯೆ ಕಿತ್ತು ತಿನ್ನುವಂತಿದೆ.

ಎಂಜಿನಿಯರ್‌ಗೆ ಶೋಕಾಸ್‌ ನೊಟೀಸ್‌
ಅಧಿಕಾರಿಗಳು ದೀರ್ಘ‌ ರಜೆಯಲ್ಲಿರುವುದರಿಂದ ಕೆಲವು ಪ್ರಮುಖ ಕೆಲಸಗಳು ಆಗುತ್ತಿಲ್ಲ ನಿಜ. ಸಮಸ್ಯೆಯನ್ನು ಈಗಾಗಲೇ ಉನ್ನತ ಅಧಿಕಾರಿಗಳು, ಶಾಸಕರು, ಜನಪ್ರತಿನಿಧಿಗಳಿಗೆ ತಿಳಿಸಿದ್ದೇನೆ. ಸಮಸ್ಯೆ ಶೀಘ್ರ ಪರಿಹರಿಸುವ ಭರವಸೆ ನೀಡಿದ್ದಾರೆ. ಎಂಜಿನಿಯರ್‌ ಅನಧಿಕೃತವಾಗಿ ಗೈರಾದ ಕಾರಣಕ್ಕೆ ಶೋಕಾಸ್‌ ನೋಟೀಸ್‌  ನೀಡಿದ್ದೇನೆ.
– ಶ್ರೀಪಾದ್‌ ಪುರೋಹಿತ್‌, ಸಿ.ಒ.  ಪ.ಪಂ.

ಜನರ ಕೆಲಸ ಆಗುತ್ತಿಲ್ಲ
ಪ.ಪಂ.ನಲ್ಲಿ ಕೆಲವು ಸಿಬಂದಿ  ದೀರ್ಘ‌ ರಜೆಯಲ್ಲಿದ್ದಾರೆ. ಹೀಗಾಗಿ ಕಟ್ಟಡ ಪರವಾನಿಗೆ, ಬೀದಿ ದೀಪದ ಸಮಸ್ಯೆ, ತೆರಿಗೆ ಸಂಬಂಧಿಸಿದ ಯಾವುದೇ ಕೆಲಸವಾಗುತ್ತಿಲ್ಲ. ಜನಪ್ರತಿನಿಧಿಗಳ ಮಾತಿಗೂ ಬೆಲೆ ಇಲ್ಲವಾಗಿದೆ.
– ಸಂಜೀವ ದೇವಾಡಿಗ, ಸದಸ್ಯರು ಪ.ಪಂ.

ಸಮಸ್ಯೆ ಬಗೆಹರಿಸಲು ಯತ್ನ
ಸಾಲಿಗ್ರಾಮ ಪ.ಪಂ.ನ ಸಮಸ್ಯೆಗಳ ಬಗ್ಗೆ ಅರಿವಿದೆ. ಎಂಜಿನಿಯರ್‌ ರಜೆಯಲ್ಲಿದ್ದಾರೆ. ಅವರು ಕರ್ತವ್ಯ ನಿರ್ವಹಿಸಲು ನಿರಾಕರಿಸಿದಲ್ಲಿ ಬೇರೆಯವರನ್ನು ನೇಮಕ ಮಾಡಲಾಗುವುದು ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಪರಿಶೀಲಿಸಲಾಗುವುದು.
– ಅರುಣಪ್ರಭಾ, ಯೋಜನಾ ನಿರ್ದೇಶಕರು ನಗರಾಭಿವೃದ್ಧಿಕೋಶ

— ರಾಜೇಶ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.