ಸಾಲಿಗ್ರಾಮ ಪ.ಪಂ. ಆಡಳಿತ ವ್ಯವಸ್ಥೆ  ಸ್ತಬ್ಧ; ಸಮಸ್ಯೆ ಕೇಳುವವರಿಲ್ಲ


Team Udayavani, Oct 30, 2018, 2:35 AM IST

panchayat-29-10.jpg

ಕೋಟ: ಸಿಬಂದಿ ಕೊರತೆ, ಸೇವೆಯಲ್ಲಿರುವವರ ದೀರ್ಘ‌ ರಜೆ, ಆಯ್ಕೆಯಾದ ಸದಸ್ಯರಿಗೆ ಅಧಿಕಾರವಿಲ್ಲದಿರುವುದು ಈ ಎಲ್ಲಾ ಸಮಸ್ಯೆಯಿಂದಾಗಿ ಸಾಲಿಗ್ರಾಮ ಪ.ಪಂ. ಆಡಳಿತ ವ್ಯವಸ್ಥೆ ಸುಮಾರು 2ತಿಂಗಳಿಂದ ಸಂಪೂರ್ಣ ಸ್ತಬ್ಧಗೊಂಡಿದೆ. ಕಟ್ಟಡ ಪರವಾನಿಗೆ, ತೆರಿಗೆ ನಿರ್ಧಾರ, ಮನೆ ಪರವಾನಿಗೆ, ಬೀದಿ ದೀಪದ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಹೀಗೆ ಹತ್ತಾರು  ಕೆಲಸಗಳಿಗೆ ಅರ್ಜಿ ಸಲ್ಲಿಸಿದವರು ಕೆಲಸವಾಗದೆ ತಿಂಗಳುಗಟ್ಟಲೆಯಿಂದ ಕಾಯುತ್ತಿದ್ದಾರೆ.

ದೀರ್ಘ‌ ರಜೆ; ಆಡಳಿತಾಧಿಕಾರಿಗಳ ಭೇಟಿ ಇಲ್ಲ
ಪ.ಪಂ.ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಂಜಿನಿಯರ್‌ ಆರೋಗ್ಯದ ಸಮಸ್ಯೆ ಹೇಳಿ  ಒಂದು ತಿಂಗಳಿಂದ ರಜೆಯಲ್ಲಿದ್ದಾರೆ ಹಾಗೂ ಅನಧಿಕೃತವಾಗಿ ರಜೆಯಲ್ಲಿ ತೆರಳಿರುವ ಕಾರಣಕ್ಕೆ ಇವರಿಗೆ ನೋಟೀಸ್‌ ನೀಡಲಾಗಿದೆ.  ಅದೇ ರೀತಿ ಆರ್‌.ಒ. ಕೂಡ ಆರೋಗ್ಯದ ಕಾರಣಕ್ಕಾಗಿ 15 ದಿನಗಳಿಂದ ರಜೆಯಲ್ಲಿದ್ದಾರೆ. ಅಧ್ಯಕ್ಷರ ನೇಮಕವಾಗದಿರುವುದರಿಂದ ಆಡಳಿತಾಧಿಕಾರಿಗಳ ಆಡಳಿತವಿದ್ದು, ಈ ಮೊದಲು ಬ್ರಹ್ಮಾವರ ತಹಶೀಲ್ದಾರ್‌ ಆಡಳಿತಾಧಿಕಾರಿಯಾಗಿದ್ದರು. ಆದರೆ ಅವರು ಒಂದೂವರೇ ತಿಂಗಳಲ್ಲಿ ಕೇವಲ ಎರಡು-ಮೂರು ಬಾರಿ ಪ.ಪಂ.ಗೆ ಭೇಟಿ ನೀಡಿದ್ದಾರೆ. ಇದೀಗ ಅವರು ವರ್ಗಾವಣೆಗೊಂಡಿದ್ದು, ಉಡುಪಿ ತಹಶೀಲ್ದಾರ್‌ ಅಧಿಕಾರ ವಹಿಸಿಕೊಂಡಿದ್ದಾರೆ. ಇವರಿಗೂ ಕೂಡ ಕಂದಾಯ ಇಲಾಖೆಯಲ್ಲಿನ ಕಾರ್ಯದೊತ್ತಡ, ಮೂರು ತಾಲೂಕುಗಳ ದೊಡ್ಡ ಹೊಣೆಗಾರಿಕೆ ಇರುವುದರಿಂದ ಪ.ಪಂ.ಗೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ. ಪ್ರಮುಖ ಕಡತಗಳಿದ್ದರೆ ಮುಖ್ಯಾಧಿಕಾರಿಗಳೇ ಇವರ ಬಳಿ ತೆರಳಿ ಸಹಿ ಹಾಕಿಸಿಕೊಂಡು ಬರುತ್ತಾರೆ.

ಖಾಯಂ ಅಧಿಕಾರಿಗಳಿಲ್ಲ
ಇಲ್ಲಿನ ಇಂಜಿನಿಯರ್‌ ಹಾಗೂ ಆರ್‌.ಒ. ಹುದ್ದೆಗೆ ಖಾಯಂ ಅಧಿಕಾರಿಗಳಿಲ್ಲ. ಹೀಗಾಗಿ ಬೇರೆ ಕಡೆಯ ಹೆಚ್ಚುವರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಆರೋಗ್ಯ ನಿರೀಕ್ಷಕರು ಕೂಡ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.  ಬಿಲ್‌ ಕಲೆಕ್ಟರ್‌, ಪ್ರಥಮದರ್ಜೆ ಸಹಾಯಕ ಅಧಿಕಾರಿ ಹೀಗೆ ಹಲವು ಹುದ್ದೆಗಳು ಖಾಲಿ ಇವೆೆ. ಇದರ ಜತೆಗೆ ಇದೀಗ ಅಧಿಕಾರಿಗಳ ಸಾಲು-ಸಾಲು ರಜೆ ಗಾಯದ ಮೇರೆ ಬರೆ ಎಳೆದಂತಾಗಿದೆ.

ಹೊಸ ಸದಸ್ಯರ ಮಾತು ನಡೆಯುತ್ತಿಲ್ಲ
ಅಧ್ಯಕ್ಷರ ಆಯ್ಕೆಯಾಗದಿರುವುದರಿಂದ ಹೊಸ ಸದಸ್ಯರಿಗೆ ಇನ್ನೂ ಕೂಡ ಪೂರ್ಣ ಪ್ರಮಾಣದ ಅಧಿಕಾರ ಸಿಕ್ಕಿಲ್ಲ. ಹೀಗಾಗಿ ನಮ್ಮ  ಮಾತನ್ನು ಯಾರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಜನರು ಪ್ರತಿದಿನ ಸಮಸ್ಯೆಗಳೊಂದಿಗೆ ನಮ್ಮ ಮುಂದೆ ನಿಲ್ಲುತ್ತಾರೆ ಎಂದು ಸದಸ್ಯರು ಅಸಹಾಯಕತೆ ತೋಡಿಕೊಳ್ಳುತ್ತಿದ್ದಾರೆ.

ಸಾಲು-ಸಾಲು ಸಮಸ್ಯೆ; ಕೆಲಸವಾಗುತ್ತಿಲ್ಲ
ಆಡಳಿತದಲ್ಲಿ ಮಹತ್ವದ ಹೊಣೆಗಾರಿಕೆ ಹೊಂದಿರುವ ಇಂಜಿನಿಯರ್‌ ಒಂದು ತಿಂಗಳಿಂದ ರಜೆಯಲ್ಲಿರುವುದರಿಂದ ಕಟ್ಟಡ ಪರವಾನಿಗೆಯ 35ಕ್ಕೂ ಹೆಚ್ಚು ಕಡತ ಹಾಗೂ ತೆರಿಗೆ ನಿರ್ಧಾರಕ್ಕಾಗಿ ಸಲ್ಲಿಕೆಯಾದ 30ಕ್ಕೂ ಹೆಚ್ಚು ಕಡತ ಬಾಕಿ ಇದೆ. ಗುತ್ತಿಗೆದಾರರ 7ಕ್ಕೂ ಹೆಚ್ಚು ಬಿಲ್‌ ಬಾಕಿ ಇದೆ.

ಎಸ್‌.ಎಫ್‌.ಸಿ. ಅನುದಾನದಲ್ಲಿ ಅನುಷ್ಠಾನಗೊಳ್ಳಬೇಕಾಗಿರುವ 86ಲಕ್ಷದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಸಾಧ್ಯವಾಗುತ್ತಿಲ್ಲ. ಹೊಸ ಮನೆಗಳಿಗೆ ಡೋರ್‌ ನಂಬರ್‌, ವಸತಿ ಯೋಜನೆಯ ಅನುಷ್ಠಾನಕ್ಕೆ ಹಿನ್ನಡೆಯಾಗಿದೆ. ಪ್ರತಿಯೊಂದು ವಾರ್ಡ್‌ನಲ್ಲೂ ಬೀದಿ ದೀಪದ ಸಮಸ್ಯೆ ದೊಡ್ಡದಾಗಿದೆ. ಆನ್‌ಲೈನ್‌ ಮೂಲಕ ನೀಡಿದ ದೂರುಗಳಿಗೂ 18-20ದಿನ ಪರಿಹಾರ ಸಿಗುತ್ತಿಲ್ಲ. ಕಸದ ಸಮಸ್ಯೆ ಕಿತ್ತು ತಿನ್ನುವಂತಿದೆ.

ಎಂಜಿನಿಯರ್‌ಗೆ ಶೋಕಾಸ್‌ ನೊಟೀಸ್‌
ಅಧಿಕಾರಿಗಳು ದೀರ್ಘ‌ ರಜೆಯಲ್ಲಿರುವುದರಿಂದ ಕೆಲವು ಪ್ರಮುಖ ಕೆಲಸಗಳು ಆಗುತ್ತಿಲ್ಲ ನಿಜ. ಸಮಸ್ಯೆಯನ್ನು ಈಗಾಗಲೇ ಉನ್ನತ ಅಧಿಕಾರಿಗಳು, ಶಾಸಕರು, ಜನಪ್ರತಿನಿಧಿಗಳಿಗೆ ತಿಳಿಸಿದ್ದೇನೆ. ಸಮಸ್ಯೆ ಶೀಘ್ರ ಪರಿಹರಿಸುವ ಭರವಸೆ ನೀಡಿದ್ದಾರೆ. ಎಂಜಿನಿಯರ್‌ ಅನಧಿಕೃತವಾಗಿ ಗೈರಾದ ಕಾರಣಕ್ಕೆ ಶೋಕಾಸ್‌ ನೋಟೀಸ್‌  ನೀಡಿದ್ದೇನೆ.
– ಶ್ರೀಪಾದ್‌ ಪುರೋಹಿತ್‌, ಸಿ.ಒ.  ಪ.ಪಂ.

ಜನರ ಕೆಲಸ ಆಗುತ್ತಿಲ್ಲ
ಪ.ಪಂ.ನಲ್ಲಿ ಕೆಲವು ಸಿಬಂದಿ  ದೀರ್ಘ‌ ರಜೆಯಲ್ಲಿದ್ದಾರೆ. ಹೀಗಾಗಿ ಕಟ್ಟಡ ಪರವಾನಿಗೆ, ಬೀದಿ ದೀಪದ ಸಮಸ್ಯೆ, ತೆರಿಗೆ ಸಂಬಂಧಿಸಿದ ಯಾವುದೇ ಕೆಲಸವಾಗುತ್ತಿಲ್ಲ. ಜನಪ್ರತಿನಿಧಿಗಳ ಮಾತಿಗೂ ಬೆಲೆ ಇಲ್ಲವಾಗಿದೆ.
– ಸಂಜೀವ ದೇವಾಡಿಗ, ಸದಸ್ಯರು ಪ.ಪಂ.

ಸಮಸ್ಯೆ ಬಗೆಹರಿಸಲು ಯತ್ನ
ಸಾಲಿಗ್ರಾಮ ಪ.ಪಂ.ನ ಸಮಸ್ಯೆಗಳ ಬಗ್ಗೆ ಅರಿವಿದೆ. ಎಂಜಿನಿಯರ್‌ ರಜೆಯಲ್ಲಿದ್ದಾರೆ. ಅವರು ಕರ್ತವ್ಯ ನಿರ್ವಹಿಸಲು ನಿರಾಕರಿಸಿದಲ್ಲಿ ಬೇರೆಯವರನ್ನು ನೇಮಕ ಮಾಡಲಾಗುವುದು ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಪರಿಶೀಲಿಸಲಾಗುವುದು.
– ಅರುಣಪ್ರಭಾ, ಯೋಜನಾ ನಿರ್ದೇಶಕರು ನಗರಾಭಿವೃದ್ಧಿಕೋಶ

— ರಾಜೇಶ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.