ಕೃಷಿ ಯೋಜನೆ: ಫಲಾನುಭವಿಗಳ ಮಾಹಿತಿಗೆ ಸೂಚನೆ
ಯರ್ಲಪಾಡಿ ಗ್ರಾ.ಪಂ.: ಕೆಡಿಪಿ ಸಭೆ
Team Udayavani, Aug 2, 2019, 5:12 AM IST
ಅಜೆಕಾರು: ಯರ್ಲಪಾಡಿ ಗ್ರಾಮ ಪಂಚಾಯತ್ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯು ಪಂಚಾಯತ್ ಅಧ್ಯಕ್ಷರಾದ ವಸಂತ್ ಕುಲಾಕ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಕೃಷಿ ಇಲಾಖೆಯ ವಿವಿಧ ಯೋಜನೆಗಳಡಿ ಸರಕಾರದ ಸಬ್ಸಿಡಿ ಆಧಾರದಲ್ಲಿ ಕೃಷಿ ಸಲಕರಣೆ ಮತ್ತು ಯಂತ್ರೋಪಕರಣ ಯೋಜನೆಗೆ ಪಂಚಾಯತ್ನಿಂದ ಶಿಫಾರಸು ಮಾಡಿದ ಮೇಲೆ ಅಂತಿಮವಾಗಿ ಆಯ್ಕೆಗೊಂಡ ಅರ್ಹ ಫಲಾನುಭವಿಗಳ ಮಾಹಿತಿಯನ್ನು ಪಂಚಾಯತ್ ಆಡಳಿತಕ್ಕೆ ನೀಡುವಂತೆ ಪಂಚಾಯತ್ ಅಧ್ಯಕ್ಷ ವಸಂತ ಕುಲಾಲ್ ಸೂಚಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಕೃಷಿ ಅಧಿಕಾರಿಯವರು ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುವುದು ಎಂದರು. ಬೆಳೆ ಸಮೀಕ್ಷೆ ಮಾಡುವಾಗ ರೈತರು ಸೂಕ್ತ ಮಾಹಿತಿ ನೀಡಿದಲ್ಲಿ ಬೆಳೆ ವಿಮೆ ಹಾಗೂ ಸರಕಾರದ ಇತರ ಸವಲತ್ತು ಪಡೆಯಲು ಸಹಕಾರಿಯಾಗುತ್ತದೆ ಎಂದರು.
ಪಂಚಾಯತ್ ವ್ಯಾಪ್ತಿಯಲ್ಲಿ ಇಂಡಸ್ ಟವರ್ ನಿರ್ಮಾಣವಾಗಿದ್ದು ಪಂ.ಗೆ ಯಾವುದೇ ತೆರಿಗೆ ಪಾವತಿ ಆಗಿಲ್ಲ. ಈ ನಿಟ್ಟಿನಲ್ಲಿ ಮೆಸ್ಕಾಂಗೆ ನೀಡಿರುವ ನೀರಾಪೇಕ್ಷಣೆಯನ್ನು ಪಂಚಾಯತ್ ಸಾಮಾನ್ಯ ಸಭೆ ರದ್ದುಗೊಳಿಸಿ ಸಂಪರ್ಕ ಕಡಿತಗೊಳಿಸಲು ನಿರ್ಣಯ ಕೈಗೊಂಡಿದೆ. ಈ ಬಗ್ಗೆ ಮೆಸ್ಕಾಂಗೂ ತಿಳಿಸಲಾಗಿದೆ ಆದರೆ ಮೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಮೆಸ್ಕಾಂ ಅಧಿಕಾರಿಯವರನ್ನು ಪ್ರಶ್ನಿಸಲಾಯಿತು.
ಈ ಬಗ್ಗೆ ಮಾತನಾಡಿದ ಮೆಸ್ಕಾಂ ಅಧಿಕಾರಿ ಟವರ್ಗೆ ನೀಡಿರುವ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಕಡಿತಗೊಳಿಸಲು ಜಿಲ್ಲಾಧಿಕಾರಿಯವರ ಅನುಮತಿ ಅಗತ್ಯ ಎಂದು ಹೇಳಿದರು.
ಸಭೆಯಲ್ಲಿ ಪಂಚಾಯತ್ರಾಜ್ ಇಂಜಿನಿಯರಿಂಗ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ತೋಟಗಾರಿಕೆ, ಪಶುಸಂಗೋಪನೆ, ಕಂದಾಯ, ಗ್ರಂಥಾಲಯ, ಶಿಕ್ಷಣ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮಾಹಿತಿ ನೀಡಿದರು. ಪಿಡಿಒ ಪ್ರಮೀಳಾ ನಾಯಕ್ ಸದಸ್ಯ ಕಾರ್ಯದರ್ಶಿಯಾಗಿದ್ದರು. ಕಾರ್ಯದರ್ಶಿ ಸುನಂದಾ ಎಸ್. ಸ್ವಾಗತಿಸಿ ವಂದಿಸಿದರು. ಸಿಬಂದಿ
ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್