ಮಾ. 1ರಿಂದ ಆಗುಂಬೆ ಘಾಟಿ ಸಂಚಾರ ಬಂದ್‌


Team Udayavani, Feb 24, 2019, 1:00 AM IST

agumbe.jpg

ಹೆಬ್ರಿ: ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದಿರುವ ಕಡೆಗಳಲ್ಲಿ ಶಾಶ್ವತವಾಗಿ ದುರಸ್ತಿ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಮಾ.1ರಿಂದ 31ರ ವರೆಗೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಆದೇಶ ಹೊರಡಿಸಿದ್ದಾರೆ.

ಕಳೆದ ಜು. 10, 13ರಂದು ಸುರಿದ ಭಾರೀ ಮಳೆಯಿಂದಾಗಿ ಆಗುಂಬೆ ಘಾಟಿಯ 7ನೇ, 14ನೇ ತಿರುವಿನಲ್ಲಿ ಮತ್ತು ಆನೆಬಂಡೆ ಬಳಿ ಗುಡ್ಡ ಕುಸಿತ ಉಂಟಾಗಿ ಭಾಗಶಃ ರಸ್ತೆ ಕುಸಿದಿದ್ದು, ಶಾಶ್ವತ ದುರಸ್ತಿ ಕಾಮಗಾರಿಯನ್ನು ಇದೀಗ ಕೈಗೊಳ್ಳಲಾಗುತ್ತಿದೆ.

ಬದಲಿ ವ್ಯವಸ್ಥೆ
ವಾಹನಗಳ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದ್ದು ಉಡುಪಿ ಯಿಂದ ಶಿವಮೊಗ್ಗ ಹೋಗುವವರು ತೀರ್ಥಹಳ್ಳಿ-ಮಾಸ್ತಿಕಟ್ಟೆ-ಕುಂದಾಪುರ -ಬಾಳೆಬರೆ ಘಾಟಿ (ಹುಲಿಕಲ್‌ ಘಾಟಿ) ಮೂಲಕ ಹಾಗೂ ಕಾರ್ಕಳದಿಂದ ಹೋಗುವವರಿಗೆ ಶೃಂಗೇರಿ – ತೀರ್ಥಹಳ್ಳಿ ಕುದುರೆಮುಖ ಘಾಟಿ ಮೂಲಕ ಸಂಚರಿಸಬಹುದಾಗಿದೆ.

ಲಘುವಾಹನಗಳಾದ ಸಾಮಾನ್ಯ ಬಸ್‌ಗಳು, ಜೀಪು, ವ್ಯಾನ್‌, ಮಿನಿ ಬಸ್‌, ದ್ವಿಚಕ್ರ ವಾಹನಗಳು ಕುದುರೆ ಮುಖ ಘಾಟಿ ಮೂಲಕ ಸಂಚರಿಸ ಬಹುದಾಗಿದೆ. 

ಘನ ವಾಹನಗಳಾದ ರಾಜಹಂಸ, ಐರಾವತ ಬಸ್‌ಗಳು, ಲಾರಿ, ಬುಲೆಟ್‌ ಟ್ಯಾಂಕರ್‌, ಕಂಟೈನರ್‌ಗಳು ಕಡ್ಡಾಯವಾಗಿ ಮಾಸ್ತಿಕಟ್ಟೆ – ಹೊಸಂಗಡಿ ಮಾರ್ಗದ ಹುಲಿಕಲ್‌ ಘಾಟಿ ಮೂಲಕ ಸಂಚರಿಸಬೇಕು. 

ರೋಗಿಗಳಿಗೆ ತೊಂದರೆ
ಕರಾವಳಿ-ಮಲೆನಾಡ ಸಂಪರ್ಕ ಕೊಂಡಿಯಾಗಿರುವ ಆಗುಂಬೆ ಘಾಟಿ ಬಂದ್‌ನಿಂದ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯಿಂದ ಚಿಕಿತ್ಸೆ ಗಾಗಿ ಮಣಿಪಾಲ ಆಸ್ಪತ್ರೆಯನ್ನು ಅವಲಂಬಿಸಿರುವ ರೋಗಿಗಳಿಗೆ ತೊಂದರೆಯಾಗಲಿದೆ. 

ಉಡುಪಿ ಜಿಲ್ಲೆಯ ಬ್ಯಾಂಕ್‌ ಉದ್ಯೋಗಿಗಳು ಹಾಗೂ ಶಿಕ್ಷಕರು ತೀರ್ಥಹಳ್ಳಿಗೆ ನಿತ್ಯ ಆಗುಂಬೆ ಘಾಟಿ ಮೂಲಕ ಸಂಚರಿಸುತ್ತಿದ್ದು ಅವರಿಗೆ ಸಮಸ್ಯೆಯಾಗಲಿದೆ.

ಎಚ್ಚರಿಸಿದ್ದ  ಉದಯವಾಣಿ
ಘಾಟಿ ರಸ್ತೆ ಕುಸಿದು 7 ತಿಂಗಳುಗಳು ಕಳೆದರೂ ದುರಸ್ತಿ ಕಾಮಗಾರಿಗೆ ಮುಂದಾಗದಿರುವುದನ್ನು ಗಮನಿಸಿ ಉದಯವಾಣಿ ಪತ್ರಿಕೆಯು ಜ. 20ರಂದು ವರದಿ ಪ್ರಕಟಿಸಿತ್ತು. ಚುನಾವಣೆ ಬಂದಾಗ ಯಾವುದೇ ಕಾಮಗಾರಿ ಮಾಡಲು ಆಗುವುದಿಲ್ಲ. ಬಳಿಕ ಮಳೆಗಾಲ ಆರಂಭವಾಗಲಿರುವುದರಿಂದ ಕಾಮಗಾರಿ ಆಸಾಧ್ಯ ಎಂಬ ವಿಚಾರವನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದು  ಇದಕ್ಕೆ ಸ್ಪಂದಿಸಿರುವ ಜಿಲ್ಲಾಡಳಿತ, ಹೆದ್ದಾರಿ ಎಂಜಿನಿಯರ್‌ ಶೀಘ್ರ ಕಾಮಗಾರಿ ನಡೆಸುವುದಾಗಿ ಭರವಸೆ ನೀಡಿದ್ದರು. 

ಟಾಪ್ ನ್ಯೂಸ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.